ಉಪ ರಾಷ್ಟ್ರಪತಿಯನ್ನು ಭೇಟಿ ಮಾಡಿದ ವಿಧಾನ ಸಭಾಧ್ಯಕ್ಷ ಕಾಗೇರಿ
Team Udayavani, Aug 25, 2021, 10:18 AM IST
ಶಿರಸಿ : ಕರ್ನಾಟಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರಾಜಭವನದಲ್ಲಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ನಿನ್ನೆ(ಮಂಗಳವಾರ, ಆಗಸ್ಟ್ 24) ಭೇಟಿ ಮಾಡಿದರು.
ಇದನ್ನೂ ಓದಿ : ಮಟ್ಟುವಿನಲ್ಲಿ ಮನೆಗೆ ಬೆಂಕಿ, ಸುಟ್ಟು ಕರಕಲಾದ ಮನೆಯ ಮೇಲ್ಛಾವಣಿ -50 ಸಾವಿರಕ್ಕೂ ಅಧಿಕ ನಷ್ಟ
ಕೆಲವೇ ಕೆಲವು ಸದಸ್ಯರ ಅನುಚಿತವಾದ ವರ್ತನೆ, ಗದ್ದಲದಿಂದಾಗಿ ಸಂಸತ್ತಿನ ಅಥವಾ ವಿಧಾನ ಮಂಡಲದ ಕಾರ್ಯ ಕಲಾಪಕ್ಕೆ ಪದೇ ಪದೇ ಅಡ್ಡಿಯಾಗುತ್ತಿದ್ದು, ಚರ್ಚೆಯಲ್ಲಿ ಪಾಲ್ಗೊಳ್ಳಲು ಬಯಸುವ ಸದಸ್ಯರ ಹಕ್ಕುಗಳಿಗೆ ಚ್ಯುತಿ ಉಂಟಾಗುತ್ತಿದೆ. ಈ ರೀತಿ ಆಗದಂತೆ ಕಾನೂನಿಗೆ ತಿದ್ದುಪಡಿ ತರುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ ವಿಧಾನಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ, ಭಾರತ ಸಂವಿಧಾನ ಕುರಿತಂತೆ ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸಿದ್ದನ್ನು ವಿವರಿಸಿದರು. ಪಕ್ಷಾಂತರ ಪಿಡುಗಿನ ನಿರ್ಮೂಲನೆಗೆ ಸಂವಿಧಾನದ ಹತ್ತನೇ ಪರಿಚ್ಛೇದಕ್ಕೆ ತಿದ್ದುಪಡಿ ತರುವ ಅಗತ್ಯತೆಯ ಬಗ್ಗೆಯೂ ಅವರೊಂದಿಗೆ ಚರ್ಚಿಸಿದರು ಎಂದು ಸ್ಪೀಕರ್ ಕಾರ್ಯಾಲಯದ ಪ್ರಕಟನೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ: ಸಚಿವ ಹಾಲಪ್ಪ ಆಚಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್