ಗೋಕರ್ಣದಲ್ಲಿ ಅಘೋಷಿತ ಬಂದ್
Team Udayavani, Mar 22, 2020, 6:29 PM IST
ಗೋಕರ್ಣ: ಕೋವಿಡ್ 19 ವೈರಸ್ ಹರಡುವಿಕೆ ತಡೆಗಟ್ಟಲು ಪ್ರಸಿದ್ಧ ಪ್ರವಾಸೀ ಕೇಂದ್ರ ಹಾಗೂ ಯಾತ್ರಾ ಕ್ಷೇತ್ರ ಗೋಕರ್ಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಗೋಕರ್ಣಕ್ಕೆ ಪ್ರವೇಶಿಸುವ ವಿದೇಶಿ ಪ್ರವಾಸಿಗರನ್ನು ವಾಪಸ್ ಕಳಿಸಲಾಗುತ್ತಿದೆ.
ದೇಶೀಯ ಯಾತ್ರಿಕರಿಗೂ ಸಮಗ್ರ ವಿಚಾರಣೆ ನಡೆಸಿ, ಅಗತ್ಯತೆ, ಅವಶ್ಯಕತೆಗಳು ಮನಗಂಡಲ್ಲಿ ಮಾತ್ರ ಒಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಅನಾವಶ್ಯಕವಾಗಿ ಪ್ರವೇಶ ನೀಡಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಗೋಕರ್ಣ ಅಘೋಷಿತ ಬಂದ್ಗೆ ತುತ್ತಾ ದಂತಿದೆ. ದೂರದೂರಿನಿಂದ ಬರುವ-ತೆರಳುವ ಬಸ್ಸುಗಳು ಬಂದಾಗಿವೆ. ಖಾಸಗಿ ಒಡೆತನದ ಬಸ್ಗಳ ಸಂಚಾರ ನಿಂತಿದೆ.
ಹೀಗಾಗಿ ಯಾತ್ರಿಕರು, ಪ್ರವಾಸಿಗರಿಲ್ಲದೆ ಗೋಕರ್ಣದ ರಸ್ತೆಗಳು, ರಥಬೀದಿ, ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಾದ ಕೋಟಿ ತೀರ್ಥ, ಸಮುದ್ರ ದಂಡೆಗಳು ಬಿಕೋ ಎನ್ನುತ್ತಿವೆ. ತರಕಾರಿ ಸಂತೆ ನಡೆಯಲಿಲ್ಲ. ಯಾವುದೇ ಸಭೆ-ಸಮಾರಂಭಗಳು ನಡೆಯದೇ ಜನ ಸಂಚಾರ ಸ್ಥಗಿತಗೊಂಡಿದೆ. ಸ್ಥಳೀಯ ಲಾಡ್ಜ್, ವಸತಿಗೃಹ, ರಿಸಾರ್ಟ್ ಗಳಲ್ಲಿ ಯಾವುದೇ ಕೊಠಡಿಗಳನ್ನು ಬಾಡಿಗೆಗೆ ನೀಡದಂತೆ ಕೊಟ್ಟು ನಿಟ್ಟಾಗಿ ಕಂದಾಯ ಉಪವಿಭಾಗಾಧಿಕಾರಿಗಳು ಆದೇಶ ನೀಡಿದ್ದಾರೆ. ತಹಶೀಲ್ದಾರ್ ಮೇಘರಾಜ ನಾಯ್ಕ ವಸತಿ ಗ್ರಹಗಳನ್ನು ಪರಿಶೀಲಿಸುತ್ತಿದ್ದಾರೆ. ಕಂದಾಯ ಸಿಬ್ಬಂದಿ, ಸ್ಥಳೀಯ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಜಗದೀಶ ನಾಯ್ಕ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ