Kageri BJP ಫೋಟೋ ಅನಧಿಕೃತ ಬಳಕೆ; ಫೇಸ್ ಬುಕ್ ಪೇಜ್ ವಿರುದ್ಧ ದೂರು
ಜಾತಿ ಆಧಾರದಲ್ಲಿ ಮತ ಕೇಳುತ್ತಿದ್ದಾರೆ ಎಂಬ ತಪ್ಪು ಸಂದೇಶ
Team Udayavani, Apr 17, 2023, 10:29 PM IST
ಶಿರಸಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಭಾವಚಿತ್ರವನ್ನು ಅನಧಿಕೃತವಾಗಿ ಬಳಸಿಕೊಂಡು ಚುನಾವಣಾ ವಿಚಾರದಲ್ಲಿ ಗೊಂದಲ ಸೃಷ್ಟಿಸುವ ಫೇಸ್ ಬುಕ್ ಪೇಜ್ ವಿರುದ್ಧ ಚುನಾವಣಾ ಅಧಿಕಾರಿಗಳಲ್ಲಿ ದೂರೊಂದು ದಾಖಲಾಗಿದೆ.
ಶಿರಸಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಕಾಗೇರಿ ಅವರ ಭಾವಚಿತ್ರವನ್ನು ಬಳಸಿಕೊಂಡು ಬಲಿಷ್ಠ ಬ್ರಾಹ್ಮಣ ಸಮಾಜ ಶಿರಸಿ ಸಿದ್ದಾಪುರ ಎಂದು ಫೇಸ್ ಬುಕ್ ಪೇಜ್ ತೆರೆದು ಒಂದೇ ಒಂದುಮತ ಹಾಳಾಗದಿರಲಿ…ಎಲ್ಲ ಮತ ಕಾಗೇರಿ ಅವರಿಗೆ ನೀಡಿ ನಮ್ಮ ಬ್ರಾಹ್ಮಣ ಸಮಾಜ ಬಲಿಷ್ಠ ಮಾಡಿ ಎಂದು ಪೋಸ್ಟ್ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾ ಸಹ ವಕ್ತಾರ ಸದಾನಂದ ಭಟ್ಟ ದೂರಿದ್ದಾರೆ.
ಈ ಫೇಸ್ ಬುಕ್ ಖಾತೆಯ ಮೂಲಕ ಕಾಗೇರಿ ಅವರು ಜಾತಿ ಆಧಾರದಲ್ಲಿ ಮತ ಕೇಳುತ್ತಿದ್ದಾರೆ ಎಂಬ ತಪ್ಪು ಸಂದೇಶ ಬಿತ್ತುವ ಕುಚೋದ್ಯ ಇದಾಗಿದೆ. ಕಾಗೇರಿ ಅವರ ಫೋಟೋವನ್ನು ಅನಧಿಕೃತವಾಗಿ ಬಳಸಿಕೊಳ್ಳಲಾಗಿದೆ. ಜಾತಿ ಆಧಾರದಲ್ಲಿ ಮತ ಚಲಾಯಿಸಲು ಪ್ರೇರೇಪಿಸುವ ಕಾರ್ಯ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಅಧಿಕಾರಿಗಳಲ್ಲಿ ಸದಾನಂದ ಭಟ್ಟ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’