ವಿಕಲಚೇತನ ಮತದಾರರಿಗೆಪ್ರತ್ಯೇಕ ವೆಬ್‌ಸೈಟ್‌ ಸೌಲಭ್ಯ


Team Udayavani, Apr 8, 2019, 2:02 PM IST

nc
ಕಾರವಾರ: ವಿಕಲಚೇತನ ಮತದಾರರನ್ನು ಗುರುತಿಸಿ ಮತದಾನಕ್ಕೆ ಅನುಕೂಲ ಕಲ್ಪಿಸಲು ಉತ್ತರಕನ್ನಡ ಜಿಲ್ಲಾಡಳಿತ ಪ್ರತ್ಯೇಕ ವೆಬ್‌ ಸೈಟ್‌ ಅಭಿವೃದ್ಧಿಪಡಿಸಿದೆ. ಅದನ್ನು ಪ್ರಾಯೋಗಿಕವಾಗಿ ಗೂಗಲ್‌ ಮ್ಯಾಪಿಂಗ್‌ ನೆರವಿನಿಂದ ಯಶಸ್ವಿಯಾಗಿ ಬಳಸಿದೆ. ಚುನಾವಣಾ ಸಿದ್ಧತೆ ಹಾಗೂ ಸುಗಮ ಮತದಾನ ಸಂಬಂಧಿಸಿದಂತೆ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ತುಷಾರ್‌ ಗಿರಿನಾಥ್‌ ಅವರ ಎದುರು ಈ ಸಾಫ್ಟ್‌ವೇರ್‌ ಉಪಯೋಗ ವಿವರಿಸಲಾಯಿತು.
ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ವಿಕಲಚೇತನ ಮತದಾರರನ್ನು ಗುರುತಿಸಿದ್ದು,
ಅವರಿಗೆ ಮತದಾನ ಮಾಡಲು ಅನುಕೂಲ ಕಲ್ಪಿಸಲು ಪ್ರತ್ಯೇಕ ಸಾಫ್ಟ್‌ ವೇರ್‌ ರೂಪಿಸಿ ಗೂಗಲ್‌ ಮ್ಯಾಪ್‌ ಮೂಲಕ
ವಿಕಲಚೇತನ ಮತದಾರರು ಎಲ್ಲಿದ್ದಾರೆ? ಅವರ ಮತಗಟ್ಟೆ ಸಂಖ್ಯೆ ಯಾವುದು?, ಮತದಾನ ಆಗಿದೆಯೇ? ಇಲ್ಲವೆ?
ಎಂದು ನೋಡಬಹುದಾದ ವ್ಯವಸ್ಥೆ ಮಾಡಿರುವುದು ರಾಜ್ಯದಲ್ಲಿಯೇ ಮೊದಲು ಎಂದು ಜಿಲ್ಲಾಧಿಕಾರಿ ಡಾ|
ಹರೀಶ್‌ಕುಮಾರ್‌ ಪ್ರಾದೇಶಿಕ ಆಯುಕ್ತರಿಗೆ ವಿವರಿಸಿದರು.
ಉತ್ತರಕನ್ನಡ ಜಿಲ್ಲಾಡಳಿತ ಎನ್‌ಐಸಿ(ನಿಕ್‌) ಸಹಯೋಗದಲ್ಲಿ ಈ ವಿನೂತನ ಸಾಫ್ಟವೇರ್‌ ರೂಪಿಸಿದ್ದು ಉತ್ತರಕನ್ನಡ ಜಿಲ್ಲೆಯ ಎಲ್ಲಾ 1437 ಮತಗಟ್ಟೆಗಳಲ್ಲಿಯೂ ಇರುವ ವಿಕಲಚೇತನ ಮತದಾರರ ವಿವರಗಳನ್ನು ಈಗಾಗಲೇ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಬಹುವಿಧ ಪುನರ್ವಸತಿ, ಆಶಾ ಕಾರ್ಯಕರ್ತರ ಮೂಲಕ ಕಲೆ ಹಾಕಲಾಗಿದೆ. ಜಿಲ್ಲೆಯಲ್ಲಿ ಒಟ್ಟು 12,913 ವಿಕಲಚೇತನ ಮತದಾರರನ್ನು ಗುರುತಿಸಿ, ಮತಗಟ್ಟೆವಾರು ವೆಬ್‌ಸೈಟ್‌ನಲ್ಲಿ ಅಳವಡಿಸಲಾಗಿದೆ.
ಈ ಎಲ್ಲ ಮತದಾರರ ಮನೆಗಳು ಹಾಗೂ ಮತಗಟ್ಟೆಗಳನ್ನು ಹೆಸರು ಸಹಿತ ಗೂಗಲ್‌ನಲ್ಲಿ ಮ್ಯಾಪಿಂಗ್‌ ಮಾಡಲಾಗಿದ್ದು
ಪ್ರಸ್ತುತ ಎಲ್ಲವನ್ನು ಹಸಿರು ಬಣ್ಣದ ವೃತ್ತದಿಂದ ಗುರುತಿಸಲಾಗಿದೆ. ಈ ವೃತ್ತಕ್ಕೆ ಒತ್ತಿದರೆ ವಿಕಲಚೇತನ ಮತದಾರರ ವಿವರ ಲಭ್ಯವಾಗುತ್ತದೆ. ಮತ್ತು ಮತದಾನ ದಿನದಂದು ಅವರನ್ನು ಮತಗಟ್ಟೆಗೆ ಕರೆದೊಯ್ದರೆ ಆ ವೃತ್ತ ನೀಲಿ ಬಣ್ಣದಿಂದ ಕಾಣಿಸುತ್ತದೆ. ಇದರಿಂದ ಗುರುತಿಸಲ್ಪಟ್ಟ ವಿಕಲಚೇತನ ಮತದಾರ ಮತದಾನವಾಗಿದೆಯೇ ಅಥವಾ ಬಿಟ್ಟು ಹೋಗಿರುವ ಮತದಾರ ಯಾರು ಎಂದು ಸುಲಭವಾಗಿ ಕಾಣಿಸುತ್ತದೆ. ಇದನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಬಹುವಿಧ ಪುನರ್ವಸತಿ ಕಾರ್ಯಕರ್ತರು ನಿರ್ವಹಿಸಲಿದ್ದು ವೆಬ್‌ಸೈಟ್‌ ಬಳಸುವ ಬಗ್ಗೆ ಜಿಲ್ಲಾ ಮಟ್ಟದ ನೋಡಲ್‌ ಅಧಿಕಾರಿಗಳೂ ಆದ ಜಿಪಂ ಸಿಇಒ ಎಂ.ರೋಷನ್‌ ನೇತೃತ್ವದಲ್ಲಿ ಅವರಿಗೆ ತರಬೇತಿ ನೀಡಲಾಗಿದೆ. ಅಲ್ಲದೆ ವಿಕಲಚೇತನರ ಅನುಕೂಲಕ್ಕಾಗಿ ವ್ಹೀಲ್‌ಚೇರ್‌, ಬ್ರೈಲ್‌ಲಿಪಿಯ ಬ್ಯಾಲೆಟ್‌, ಭೂತಗನ್ನಡಿಗಳನ್ನು ಪ್ರತಿಗಟ್ಟೆಗೆ ವ್ಯವಸ್ಥೆ ಮಾಡಲಾಗಿದೆ.
ಗ್ರಾಮೀಣ ಭಾಗದ ಮತಗಟ್ಟೆ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಮೇಲ್ವಿಚಾರಣೆ ವಹಿಸಲು ಜಿಪಂ ಮುಖ್ಯಯೋಜನಾಧಿಕಾರಿ ವಿ.ಎಂ.ಹೆಗಡೆ ಅವರನ್ನು ನಿಯೋಜಿಸಲಾಗಿದ್ದು ಅಂಕವಿಕಲರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಅಜ್ಜಪ್ಪ ಸೊಗಲದ ಸದಸ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಪ್ರತಿ ಮತಗಟ್ಟೆಯನ್ನೂ ಪ್ರತ್ಯೇಕ ಸಾಫ್ಟ್‌ವೇರ್‌ ರೂಪಿಸಿ ಗೂಗಲ್‌ ಮ್ಯಾಪಿಂಗ್‌ ಮಾಡುವ
ಸೌಲಭ್ಯವನ್ನು ರೂಪಿಸಿಕೊಂಡಿದ್ದು ಉತ್ತರಕನ್ನಡ ಜಿಲ್ಲಾಡಳಿತ ರಾಜ್ಯದಲ್ಲಿಯೇ ಮಾದರಿಯಾಗಿದೆ.
ಪ್ರಾದೇಶಿಕ ಆಯುಕ್ತ ತುಷಾರ್‌ ಗಿರಿನಾಥ್‌, ಜಿಲ್ಲಾಡಳಿತ ಕೈಗೊಂಡ ಸುಗಮ ಮತದಾನ ಸೌಲಭ್ಯಗಳು ಹಾಗೂ ಮತದಾರಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿ ಕಾರಿ ಡಾ| ಹರೀಶ್‌ಕುಮಾರ್‌, ಜಿಪಂ
ಸಿಇಒ ಎಂ.ರೋಷನ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌ ಎಸ್‌, ಎಸ್‌.ಯೋಗೇಶ್ವರ, ಮತ್ತಿತರ ಅಧಿ ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.