ಉತ್ತರ ಕನ್ನಡವೀಗ ಬೀಗ ಮುಕ್ತ

ಸಂತಸದಲ್ಲಿ ಜಿಲ್ಲೆಯ ಜನತೆ ­ವ್ಯಾಪಾರ ವಹಿವಾಟಿಗೆ ಹೆಚ್ಚಿನ ಸಮಯ ನಿಗದಿ

Team Udayavani, Jun 21, 2021, 8:12 PM IST

20kwr02

ಕಾರವಾರ: ಕೊರೊನಾದಿಂದ ಲಾಕ್‌ ಆಗಿದ್ದ ಉತ್ತರ ಕನ್ನಡ ಜಿಲ್ಲೆ ಇದೀಗ ಜೂ.21 ರಿಂದ ಅನ್‌ಲಾಕ್‌ ಆಗುತ್ತಿದೆ. ಜನರಲ್ಲಿ ಸಂತಸ ಮನೆ ಮಾಡಿದೆ.

ಕೋವಿಡ್‌ ಪಾಜಿಟಿವಿಟಿ ರೇಟ್‌ 2.47ಕ್ಕೆ ಇಳಿದಿದ್ದು, ಆಶಾದಾಯಕ ಬೆಳವಣಿಗೆ. ಕರ್ಫ್ಯೂ ಮುಕ್ತ ಮತ್ತು ಕೊರೊನಾ ಮುಕ್ತ ದಿನಗಳಲ್ಲಿ ಎಂದಿನಂತೆ ಓಡಾಡಲು ಜನ ಸಜ್ಜಾಗಿದ್ದಾರೆ. ವಾರಾಂತ್ಯದ ದಿನಗಳನ್ನು ಮನೆಯಲ್ಲಿ ಎಂಜಾಯ್‌ ಮಾಡಲು ಸಹ ಸಿದ್ಧತೆ ಆಗಿವೆ. ಎಲ್ಲಾ ಅಂಗಡಿಗಳು ಸಹ ತೆರೆಯಲಿದ್ದು, ಇಲ್ಲಿ ಸಹ ಸಾಮಜಿಕ ಅಂತರ ಕಾಪಾಡಲು ಸಿದ್ಧತೆ ನಡೆದಿವೆ. ರೆಸ್ಟೋರೆಂಟ್‌ಗಳು ಸ್ವತ್ಛವಾಗಿದ್ದು, ಶೇ.50 ಗ್ರಾಹಕರಿಗೆ ಚೇರ್‌ ವ್ಯವಸ್ಥೆ ಮಾಡಲಾಗಿದೆ. ಆದರೆ ಸತತ ಬೀಳುವ ಮಳೆ ಜನರ ಸಂಚಾರಕ್ಕೆ ಅಡ್ಡಿಯಾಗುವ ಸಂಭವ ಸಹ ಇದೆ. ಬಸ್‌ ಸಂಚಾರ ಶೇ,50 ರಷ್ಟು ಆರಂಭವಾಗಲಿದೆ.

ಬಸ್‌ಗಳಲ್ಲಿ ಶೇ.50 ರಷ್ಟು ಸೀಟ್‌ಗೆ ಅವಕಾಶವಿದೆ. ಮೈಸೂರು ಮಾರ್ಗವಾಗಿ ತೆರಳುವ ಬಸ್‌ಗಳಲ್ಲಿ ಮೈಸೂರು ಸ್ಟಾಪ್‌ ಇರುವುದಿಲ್ಲ. ಮೈಸೂರಿನಿಂದ ಯಾರನ್ನು ಹತ್ತಿಸಿಕೊಳ್ಳುವುದಿಲ್ಲ. ಇಳಿಸುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಹೇಳಿದೆ. ವೋಲ್ವೋ ಬಸ್‌ ಸಂಚಾರ ಇರಲಿದ್ದು, ಎ.ಸಿ. ಬಳಸುವುದಿಲ್ಲ. ಜಿಲ್ಲೆಯ ಎಲ್ಲಾ ಬಸ್‌ ನಿಲ್ದಾಣಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಬಸ್‌ಗಳನ್ನು ಸಹ ಶುದ್ಧೀಕರಿಸಲಾಗಿದೆ. ಕೊರೊನಾ ಮುಕ್ತ ಜಿಲ್ಲೆಗಳಲ್ಲಿ ಬಸ್‌ ಸಂಚಾರ ಇರಲಿದೆ. ಅಂತರ್‌ ಜಿಲ್ಲಾ ಸಂಚಾರ ಹಾಗೂ ಜಿಲ್ಲೆಯಲ್ಲಿ ಬಸ್‌ ಸಂಚಾರ ಇರಲಿದೆ. ವಾರಾಂತ್ಯದ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂ ಬಸ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ಉತ್ತರ ಕನ್ನಡ ಜಿಲ್ಲಾ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅಂಗಡಿಗಳ ವಹಿವಾಟಿಗೆ ಹೆಚ್ಚಿಗೆ ಸಮಯ: ಅಂಗಡಿಗಳು ಬೆಳಗ್ಗೆ 6 ರಿಂದ ಸಂಜೆ 6ರತನಕ ತೆರೆಯಲಿವೆ. ಬಾರ್‌, ರೆಸ್ಟೋರೆಂಟ್‌, ಅಗತ್ಯ ವಸ್ತುಗಳ ಅಂಗಡಿ ತೆರೆದಿರಲಿವೆ. ಜನರು ಅಂತರ ಕಾಪಾಡಿ, ಮಾಸ್ಕ್ ಧರಿಸಿ ಅಗತ್ಯ ವಸ್ತು ಖರೀದಿಸಬಹುದು. ಬಟ್ಟೆ ಅಂಗಡಿ ಚಿನ್ನದ ಅಂಗಡಿ ತೆರೆದಿರಲಿವೆ. ಮದುವೆಗೆ 20 ಜನ ಮಾತ್ರ ಹಾಜರು ಇರಬಹುದು. ಉಳಿದಂತೆ ವಾರಾಂತ್ಯದ ಕರ್ಫ್ಯೂ ಇರಲಿದೆ. ರಾತ್ರಿ ಕರ್ಫ್ಯೂ ಸಹ ಮುಂದುವರಿಯಲಿದೆ. ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರೆಯುವಂತಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಜು.5 ರವರೆಗೆ ಇದೆ ಸ್ಥಿತಿ ಇರಲಿದೆ. ಆ ವೇಳೆಗೆ ಕೊರೊನಾ ಸಂಪೂರ್ಣ ಮರೆಯಾದಲ್ಲಿ ಸರ್ಕಾರದ ನಿರ್ದೇಶನ ನೋಡಿ, ಇನ್ನಷ್ಟು ಬದಲಾವಣೆ ತರಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.