ಯಲ್ಲಾಪುರ ಜಿಲ್ಲಾಕೇಂದ್ರವಾಗಿಸಲು ಆಗ್ರಹ
Team Udayavani, Mar 15, 2021, 4:18 PM IST
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸುವುದಾರೆ, ಘಟ್ಟದ ಮೇಲಿನ ತಾಲೂಕುಗಳಿಗೆ ಮಧ್ಯವರ್ತಿ ಸ್ಥಳವಾದ ಯಲ್ಲಾಪುರ ತಾಲೂಕನ್ನು ಜಿಲ್ಲಾಕೇಂದ್ರವನ್ನಾಗಿಸಬೇಕೆಂದು ಆಗ್ರಹಿಸಿಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿಜಿಲ್ಲಾ ಹೋರಾಟ ಸಮಿತಿ ಜನಜಾಗೃತಿ ಕಾರ್ಯಕ್ರಮ ನಡೆಸಿತು.
ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಯಲ್ಲಾಪುರ ಘಟ್ಟದ ಮೇಲಿನತಾಲೂಕುಗಳಿಗೆ ಮಧ್ಯವರ್ತಿ ಸ್ಥಳವಾಗಿದೆ. ಜಿಲ್ಲೆಯಾಗುವ ಎಲ್ಲಾ ಅರ್ಹತೆ ಹೊಂದಿದೆಎಂದು ಹಕ್ಕೊತ್ತಾಯ ಮಂಡಿಸಿದರು.
ಹೋರಾಟ ಸಮಿತಿಯವರಾದಶ್ರೀರಂಗ ಕಟ್ಟಿ, ಬೀರಣ್ಣ ನಾಯಕಮೊಗಟಾ, ಪ್ರೇಮಾನಂದ ನಾಯ್ಕ,ನಾಗೇಶ್ ಯಲ್ಲಾಪುರಕರ್, ಜಿ.ಆರ್.ಹೆಗಡೆ ಕುಬ್ರಿಗುಡ್ಡೆ, ಬಾಬಾ ಸಾಬ್ಅಲನ್, ಪ್ರದೀಪ ಯಲ್ಲಾಪುರಕರ್, ನಿವೃತ್ತ ತಹಶೀಲ್ದಾರ್ ತುಳಸಿ ಪಾಲೇಕರ್, ನಾರಾಯಣ ನಾಯ್ಕ, ಮಾಧವ ನಾಯಕ,ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿ ಯಲ್ಲಾಪುರ ಜಿಲ್ಲೆಗೆ ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿಸಚಿವ ಶಿವರಾಮ ಹೆಬ್ಟಾರ್ ಅವರುಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಯಲ್ಲಾಪುರ ಜಿಲ್ಲಾ ಹೋರಾಟ ಸಮಿತಿಹಮ್ಮಿಕೊಂಡಿದ್ದ ಜನ ಜಾಗೃತಿ ಶಿಬಿರಕ್ಕೆಭೇಟಿ ನೀಡಿ ಜಿಲ್ಲಾ ಹೋರಾಟ ಸಮಿತಿ ಮನವಿ ಸ್ವೀಕರಿಸಿದರು.
ಅಖಂಡ ಉತ್ತರ ಕನ್ನಡ ಜಿಲ್ಲೆ ವಿಭಜಿಸಬೇಕು ಎಂಬ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಾಗೊಂದು ವೇಳೆ ವಿಭಜನೆಯ ಪ್ರಸ್ತಾಪ ಬಂದಲ್ಲಿಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಎನ್ಜಿಒಗಳು ಎಲ್ಲಾರಾಜಕೀಯ ಪಕ್ಷಗಳು, ಹಿರಿಯರು, ತಜ್ಞರು, ಪ್ರಾಜ್ಞರು,ಚಿಂತಕರು ಸೇರಿದಂತೆ ಘಟ್ಟದ ಕೆಳಗೆ ಮತ್ತು ಮೇಲಿನಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಚಿಂತನೆಮಾಡಲಾಗುವುದು. ಜಿಲ್ಲೆ ವಿಭಜನೆಯ ಪ್ರಸ್ತಾಪ ಬಂದನಂತರವಷ್ಟೆ ಯಾವ ತಾಲೂಕನ್ನ ಜಿಲ್ಲೆ ಮಾಡಬೇಕೆಂದು ತೀರ್ಮಾನಿಸಲು ಸಾಧ್ಯ. ಈಗ ಅದು ತೀರಾ ಅಪ್ರಸ್ತುತಎಂದ ಅವರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಯಾವುದೇ ಹೋರಾಟದ ಹಿಂದೆ ಸದುದ್ದೇಶ ಇರಬೇಕು. ಶಾಂತಿಯುತವಾಗಿ ಮಾಡಿದಲ್ಲಿ ಹೋರಾಟಕ್ಕೆ ಗೌರವ. -ಶಿವರಾಮ್ ಹೆಬ್ಟಾರ್, ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ