ಉತ್ತರ ಕನ್ನಡ: ಕಡಲತೀರಕ್ಕೆ ತೆರಳದಂತೆ ನಿಷೇಧ; ಶಾಲಾ ಕಾಲೇಜು ರಜೆ
Team Udayavani, Aug 6, 2019, 3:42 PM IST
ಕಾರವಾರ: ಕರಾವಳಿ ಭಾಗದಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕಡಲತೀರಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ತೆರಳದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ.
ಮುಂದಿನ 48ಗಂಟೆ ಅವಧಿಗೆ ಕಡಲತೀರ ಪ್ರವೇಶ ನಿಷೇಧ ಹೇರಲಾಗಿದೆ.
ಭಾರಿ ಮಳೆಯ ಹಿನ್ನಲೆಯಲ್ಲಿ ನಾಳೆ (ಬುಧವಾರ) ಜಿಲ್ಲಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಕಳೆದೆರಡು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು ಕಾರವಾರ ತಾಲೂಕಿನ ಕಾಳಿ ದಂಡೆಯ ಗ್ರಾಮಗಳಾದ ಕಿನ್ನರ ,ಅಂಬೆಜೂಗ್, ಕದ್ರಾ, ಕಣಜಗೇರಿ ಗ್ರಾಮಗಳಿಗೆ ನದಿ ನೀರು ನುಗ್ಗಿದೆ. ಖಾರ್ಗೆಜೂಗ ದ್ವೀಪದ ಜನರ ಸ್ಥಳಾಂತರ ಮಾಡಲಾಗಿದೆ. ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ.
ಘನ ವಾಹನಗಳ ಸಂಚಾರ ನಿಷೇಧ :
ಹುಬ್ಬಳ್ಳಿ: ಯಲ್ಲಾಪುರ, ನಿಪ್ಪಾಣಿ, ಕಿತ್ತೂರ, ಖಾನಾಪುರ, ಬಾಡ ಮಾರ್ಗದಲ್ಲಿ ಪ್ರವಾಹ ಆಗಮಿಸಿ ಸಂಚಾರಕ್ಕೆ ತಡೆಯಾದ ಹಿನ್ನೆಲೆಯಲ್ಲಿ ನಗರದ ಹೊರವಲಯದ ಪ್ರದೇಶಗಳಾದ ಗಬ್ಬೂರ ಬೈಪಾಸ್, ಗದಗ ರಸ್ತೆ ನೈಋತ್ಯ ರೈಲ್ವೆ ಜಿಎಂ ಕಚೇರಿ ಬಳಿ ಬೆಳಗಾವಿ, ಯಲ್ಲಾಪುರ, ಕಾರವಾರಕ್ಕೆ ತೆರಳುವ ಲಾರಿಗಳನ್ನು ಸಂಚಾರಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ತಡೆಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ