Uttara Kannada ಸುಸಜ್ಜಿತ ಆಸ್ಪತ್ರೆ ನೀಡಲು ಸರಕಾರಕ್ಕೆ ವಿವಿಧ ಸಂಘಟನೆಗಳ ಆಗ್ರಹ
ಕಾರವಾರ ತಲುಪಿದ ಅನಂತಮೂರ್ತಿ ಹೆಗಡೆ ಪಾದಯಾತ್ರೆ
Team Udayavani, Nov 9, 2023, 11:51 PM IST
ಕಾರವಾರ: ಉತ್ತರಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಯಿಟ್ಟು ನವೆಂಬರ್ 2 ರಂದು ಆರಂಭಿಸಲಾಗಿದ್ದ ಅನಂತಮೂರ್ತಿ ಹೆಗಡೆ ಪಾದಯಾತ್ರೆ ಕಾರವಾರ ತಲುಪಿತು . ಇಲ್ಲಿನ ಟನಲ್ ಮೂಲಕ ಆಟೋ ಚಾಲಕರು ಆಟೋಗಳ ಮೂಲಕ ಪಾದಯಾತ್ರೆ ಸಂಘಟಕರನ್ನು ಸ್ವಾಗತಿಸಿದರು . ಪಾದಯಾತ್ರೆಯಲ್ಲಿ ಬಂದಿದ್ದ ವಿವಿಧ ತಾಲೂಕುಗಳ ಮಹಿಳೆಯರು, ಸಾರ್ವಜನಿಕರು ಸುಭಾಷ್ ಸರ್ಕಲ್ ಮೂಲಕ ನಗರದ ಮುಖ್ಯ ರಸ್ತೆಗಳಲ್ಲಿ ನಡೆದು ಬಂದರು .ಜಿಲ್ಲೆಗೆ ಸುಸಜ್ಜಿತ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಕೊಡಿ ಎಂದು ಘೋಷಣೆ ಕೂಗಿದರು. ಭಾಜ ಭಜಂತ್ರಿ ,ಡೋಲು ಮೆರವಣಿಗೆ ಯೊಂದಿಗೆ ಬಂದ ಪಾದಯಾತ್ರೆ ಜಿಲ್ಲಾಧಿಕಾರಿ ಕಚೇರಿಯ ಬಳಿ ಸಮಾವೇಶಗೊಂಡಿತು.
ಮೆರವಣಿಗೆಯಲ್ಲಿ ಬಂದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅನಂತಮೂರ್ತಿ ಜಿಲ್ಲೆಯಲ್ಲಿ ಅಪಘಾತಗಳಾದರೆ ತಕ್ಷಣ ಚಿಕಿತ್ಸೆ ನೀಡಿ ಅಪರೇಶನ್ ಮಾಡುವ ವ್ಯವಸ್ಥೆ ಇಲ್ಲ. ಜಿಲ್ಲೆಯಲ್ಲಿ ಮೂರು ಕಡೆ ಟ್ರಾಮ ಸೆಂಟರ್ ಆಗಬೇಕು. ಶಿರಸಿಗೆ ಮೆಡಿಕಲ್ ಕಾಲೇಜು ಸಹಿತ ಸುಸಜ್ಜಿತ ಆಸ್ಪತ್ರೆ ಸ್ಥಾಪಿಸಿ ಎಂದರು. ಆಸ್ಪತ್ರೆ ನಿರ್ಮಾಣದಿಂದ ಜನರಿಗೆ ಉಪಕಾರವಾಗುತ್ತದೆ ಎಂದರು.
ಸ್ಕೂಡ್ ವೇಸ್ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶ ನಾಯ್ಕ ಮಾತನಾಡಿ ಜಿಲ್ಲೆಯ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಲು ಇದೊಂದು ಹಕ್ಕೊತ್ತಾಯ ಎಂದರು. ಕಾರವಾರ ಮೆಡಿಕಲ್ ಕಾಲೇಜು ಸೌಲಭ್ಯ ಹೆಚ್ಚಬೇಕು. ಶಿರಸಿ,ಹೊನ್ನಾವರ ಭಾಗದಲ್ಲಿ ಸುಸಜ್ಜಿತ ಆಸ್ಪತ್ರೆಗಳು ಸ್ಥಾಪನೆ ಆಗಬೇಕು ಎಂದರು.
ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ನಾಗೇಶ್ ನಾಯ್ಕ ಕಾಗಾಲ ಮಾತನಾಡಿ ಕುಮಟಾ ಭಾಗದಲ್ಲಿ ಹಲವು ಸೌಲಭ್ಯದ ಆಸ್ಪತ್ರೆ ಸ್ಥಾಪನೆಯಾಗಲಿ. ಇದೊಂದು ದೊಡ್ಡ ಜಿಲ್ಲೆ. ಹನ್ನೆರಡು ತಾಲೂಕುಗಳಿವೆ. ಮೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮಾಡುವಷ್ಟು ದೊಡ್ಡ ಜಿಲ್ಲೆ ಇದು. ಸರ್ಕಾರ ತುರ್ತಾಗಿ ಆರೋಗ್ಯ ಸೌಲಭ್ಯ ಗಳನ್ನು ನೀಡಬೇಕಿದೆ ಎಂದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಅವರ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕಳೆದೊಂದು ವಾರದಿಂದ ಸುಸಜ್ಜಿತ ಆಸ್ಪತ್ರೆಗಾಗಿ ಅನಂತಮೂರ್ತಿ ಚ್ಯಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಅನಂತಮೂರ್ತಿ ಹೆಗಡೆ ತಮ್ಮ ಬೆಂಬಲಿಗರೊಂದಿಗೆ ಶಿರಸಿಯಿಂದ ಕುಮಟಾ ಮಾರ್ಗವಾಗಿ ಕಾರವಾರಕ್ಕೆ ಸ್ವಾಭಿಮಾನದ ಪಾದಯಾತ್ರೆ ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ