ವರ್ಲಿ ಕಲೆಯ ಮೋಡಿಗಾರ ರಾಮಚಂದ್ರ ಕಲಾಲ

‌ತಹಶೀಲ್ದಾರ್  ಕಾರ್ಯಾಲಯದ ಆವರಣ ಗೋಡೆ ಮೇಲೆ ಬಣ್ಣ ಬಣ್ಣದ ಚಿತ್ತಾರ

Team Udayavani, Feb 25, 2021, 5:29 PM IST

Verli art

ಮುಂಡಗೋಡ: ತಾಲೂಕಿನ ಜೋಗೇಶ್ವರ ಹಳ್ಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ರಾಮಚಂದ್ರ ಕಲಾಲ ಮಹಾರಾಷ್ಟ್ರ ಮತ್ತು ರಾಜಸ್ಥಾನಿ ಶೈಲಿಯ ವರ್ಲಿ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುವ ಮೋಡಿಗಾರರು.

ಇವರು ತಾಲೂಕಿನಲ್ಲಿ ಅಲ್ಲದೇ ಜಿಲ್ಲೆಯ ವಿವಿಧೆಡೆ ವರ್ಲಿ ಕಲೆಯನ್ನು ಅರಳಿಸುತ್ತಿದ್ದು ನೋಡುಗರ ಗಮನ ಸೆಳೆಯುತ್ತಿದೆ. ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಮಕ್ಕಳ ಜ್ಞಾಪಕ ಶಕ್ತಿ ವೃದ್ಧಿಸಲು ಗಣಿತ, ವಿಜ್ಞಾನ ಮತ್ತು ಇತರೆ ವಿಷಯಗಳನ್ನು ಆಸಕ್ತಿಯಿಂದ ಕಲಿಯಲು ಮತ್ತು ಮಕ್ಕಳು ನಿರಂತರವಾಗಿ ಶಾಲೆಗೆ ಬರಲು ವರ್ಲಿ ಚಿತ್ರಕಲೆ ಸಹಾಯಕಾರಿ.

ವರ್ಲಿ ಚಿತ್ರಕಲೆಗೆ ಹೆಚ್ಚಿನ ಖರ್ಚಿಲ್ಲ. ಇದು ಕೇವಲ ರೇಖೆಗಳ ವಿನ್ಯಾಸದಿಂದ ಕಲಿಯಲು ಸಾಧ್ಯವಾಗಿದೆ. ಮೂಲತಃ ಮಹರಾಷ್ಟ್ರದ ಮತ್ತು ರಾಜಸ್ಥಾನಿ ಸಾಂಪ್ರದಾಯಿಕ ಶೈಲಿಯ ಕಲೆಯಾದರೂ ಕರ್ನಾಟಕ ಶೈಲಿಯ ಕಲೆ ಇದರಲ್ಲಿದೆ. ನಮ್ಮ ಸಾಂಪ್ರದಾಯಿಕ ಹಬ್ಬಗಳಾದ ದೀಪಾವಳಿ, ಶೀಗೆಹುಣ್ಣಿಮೆಗಳಲ್ಲಿ ಹಿಂದೆ ಜನರು ಮಣ್ಣು ಹಾಗೂ ಸುಣ್ಣದಿಂದ ಆಕರ್ಷಣೆ ಮಾಡಿ ಖುಷಿ ಪಡುತ್ತಿದ್ದರು.

ಶಿಕ್ಷಕ ರಾಮಚಂದ್ರ ನಮ್ಮ ಸಾಂಪ್ರದಾಯಿಕ ಕಲೆ ಮರೆಯಾಗಬಾರದೆಂದು ಈ ಕಲೆಯನ್ನು ಪ್ರಾಥಮಿಕ ಶಾಲಾ ಮಕ್ಕಳಿಗೆ ಸರಳೀಕರಣ ಕಲೆಯಾಗಿ ನಿರಂತರ ಕಲಿಕೆಗೆ ಆಸಕ್ತಿ ಮೂಡಿಸಲು ಬಿಡಿಸುತ್ತಿದ್ದಾರೆ. ಸದ್ಯ ತಹಶೀಲ್ದಾರ್‌ ಕಾರ್ಯಲಯ, ತಾಲೂಕಾಸ್ಪತ್ರೆ, ಎಪಿಎಂಸಿ, ಅಂಗನವಾಡಿ ಕೇಂದ್ರಗಳಲ್ಲಿ ಮತ್ತು ಕೆಲ ತಿಂಗಳ ಹಿಂದೆ ಶಿರಸಿ ಉಪನಿರ್ದೇಶಕರ ಕಾರ್ಯಲಯ, ತಾಲೂಕಿನ ಬಿಇಒ, ಬಿಆರ್‌ಸಿ, ಲೊಯೋಲಾ ಶಾಲಾ ಆವರಣ, ಜೋಗೇಶ್ವರ ಹಳ್ಳ ಕಿರಿಯ ಪ್ರಾಥಮಿಕ ಶಾಲೆ ಅಲ್ಲದೇ ಕೋವಿಡ್‌ ವೇಳೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ನ‌ ಮುಂಜಾಗೃತೆ ಬಗ್ಗೆ ಚಿತ್ರಗಳನ್ನು ಬಿಡಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಇವರು ತಮ್ಮ ಬಿಡುವಿನ ವೇಳೆ ಈ ಕಲೆಯನ್ನು ರಚಿಸುತ್ತಿದ್ದಾರೆ. ಈ ಕಲೆಯನ್ನು ಶಾಲಾ ಮಕ್ಕಳು ಹೆಚ್ಚಿನ ಆಸಕ್ತಿ ವಹಿಸುವುದು ಹಾಗೂ ಪಾಲಕರಿಗೂ ಸುಲಭವಾಗಿ ತಮ್ಮ ಮಕ್ಕಳಿಗೆ ಕಲಿಸಬಹುದಾಗಿದೆ. ವರ್ಲಿ ಚಿತ್ರಕಲೆಯ ಕಲಾವಿದ ಮತ್ತು ಶಿಕ್ಷಕ ರಾಮಚಂದ್ರ ಕಲಾಲ: ವರ್ಲಿ ಚಿತ್ರಕಲೆ ಸಾಂಪ್ರದಾಯಿಕ ಕಲೆಯಾಗಿದೆ. ಇದನ್ನು ಉಳಿಸುವ ಜತೆಗೆ ಕಲೆಯ ಆಸಕ್ತಿ ಮತ್ತು ನಮ್ಮ ಮೂಲ ವೃತಿ ಉಳಿಯುವ ಸಲುವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಆರ್ಕಷಣೆ ಗೊಳಿಸುತ್ತದೆ. ಈ ಚಿತ್ರಣವು ಅತ್ಯಂತ ಸರಳ ಹಾಗೂ ಸುಂದರವಾಗಿದೆ. ಆಸಕ್ತ ಮಕ್ಕಳಿಗೆ ವರ್ಲಿ ಚಿತ್ರಕಲೆಯನ್ನು ಕಲಿಸುತ್ತಿದ್ದೇನೆ. ನನ್ನ ನೆಚ್ಚಿನ ವಿದ್ಯಾರ್ಥಿಗಳಾದ ಅಬ್ರಹಾಂ ರೋಣ, ದರ್ಶನ ಕಲಾಲ ಮತ್ತು ಶಶಾಂಕ ನಾಯ್ಕ ನನಗೆ ಸಹಾಯ ಮಾಡುತ್ತಿದ್ದಾರೆ. ಉಪನಿರ್ದೇಶಕರು, ಬಿಇಒ ಮತ್ತು ತಹಶೀಲ್ದಾರ್‌ ಅವರು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದರು.

ಮುನೇಶ ಬಿ. ತಳವಾರ 

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.