ಹಳ್ಳಿ ಕಸಗಳಿಗೂ ಬರಲಿದೆ ಘನತ್ಯಾಜ್ಯ ಘಟಕ

•ತಲೆನೋವಿಗೊಂದು ಬ್ರೇಕ್‌ ಸಿಗಲಿದೆ!•ಜಿಲ್ಲೆಯಲ್ಲಿ 55ಕ್ಕೂ ಹೆಚ್ಚು ಗ್ರಾಪಂಗಳು ಆಯ್ಕೆ

Team Udayavani, Jul 19, 2019, 10:41 AM IST

uk-tdy-1..

ಶಿರಸಿ: ಯಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ತಾತ್ಪೂರ್ತಿಕ ಘಟಕ.

ಶಿರಸಿ: ನಗರದಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡಲು ಅವಕಾಶವಿದೆ. ಮನೆಮನೆಯಿಂದ ಕಸ ಸಂಗ್ರಹಣೆಗೆ ಪ್ರತ್ಯೇಕ ವ್ಯವಸ್ಥೆ ಕೂಡ ಇರುತ್ತದೆ.

ಆದರೆ, ನಗರವಷ್ಟೇ ಬೆಳೆಯುತ್ತಿರುವ ಹಳ್ಳಿಯಲ್ಲೂ, ನಗರದ ಸವಲತ್ತಿಗಿಂತ ಏನು ಕಡಿಮೆ ಇಲ್ಲ. ನಗರದಲ್ಲಿ ಇರುವಂತೆ ಕಂಪ್ಯೂಟರ್‌ ತ್ಯಾಜ್ಯಗಳು, ಪ್ಲಾಸ್ಟಿಕ್‌ ತ್ಯಾಜ್ಯಗಳು ಇರುತ್ತಿದ್ದವು. ಇವನ್ನೆಲ್ಲ ಏನು ಮಾಡಬೇಕು ಎಂಬುದು ಹಳ್ಳಿಗರಿಗೆ ತಲೆ ನೋವಾಗಿತ್ತು.

ಏಕೆಂದರೆ, ಗ್ರಾಮೀಣ ಭಾಗದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳೇ ಇರಲಿಲ್ಲ.

ಹೊಸ ಬೆಳವಣಿಗೆ: ನಗರದಲ್ಲಷ್ಟೇ ಅಲ್ಲದೇ ಗ್ರಾಮೀಣ ಭಾಗದಲ್ಲೂ ಘನತ್ಯಾಜ್ಯ ವಸ್ತು ವಿಲೇವಾರಿಗೆ ಘಟಕ ತೆರೆಯುವ ಪ್ರಕ್ರಿಯೆಗಳು ಆರಂಭವಾಗಿದೆ.

ತಾಲೂಕಿನಲ್ಲಿ ಈಗಾಗಲೇ ಗ್ರಾಪಂವೊಂದರಲ್ಲಿ ಘಟಕ ನಿರ್ಮಾಣ ಮಂಜೂರಿ ಹಂತದಲ್ಲಿದ್ದು ಇನ್ನೂ ಐದು ಘಟಕಗಳಿಗೆ ಪ್ರಸ್ತಾವನೆ ಸಿದ್ಧವಾಗಿದೆ. ಈ ಘಟಕ ಆಗಬೇಕಾಗಿತ್ತು, ಆಗುತ್ತಿರುವುದು ಸಂತಸ ತಂದಂತಾಗಿದೆ.

ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆ ಯೋಜನೆಯಡಿ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ನಿರ್ಮಾಣಕ್ಕೆ ಹಲವು ತಿಂಗಳ ಹಿಂದೆ ಯೋಜನೆ ರೂಪಿತವಾಗಿತ್ತು. ಅದರ ಪ್ರಕಾರ ಶಿರಸಿ ತಾಲೂಕಿನ ಆರು ಗ್ರಾಪಂಗಳಲ್ಲಿ ಘನ ತ್ಯಾಜ್ಯದ ವಿಲೇವಾರಿಯ ನೂತನ ಘಟಕ ನಿರ್ಮಾಣಕ್ಕೆ ಆಯ್ಕೆ ಮಾಡಿದ್ದರು.

ಜಾಗದ್ದೂ ಸಮಸ್ಯೆ: ಘನ ತ್ಯಾಜ್ಯ ಘಟಕ ಎಂದರೆ ನಮ್ಮಲ್ಲಿ ಬೇಡ ಎಂಬುದು ಈವರೆಗೆ ನಗರದಲ್ಲಿತ್ತು. ನಗರಸಭೆ ಗ್ರಾಮೀಣ ಭಾಗದಲ್ಲಿ ಇಂತಹ ಘಟಕಕ್ಕೆ ಮುಂದಾದಾಗಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಸಮಸ್ಯೆ ಆಯ್ಕೆಯಾದ ಗ್ರಾಪಂಗಳಲ್ಲಿ ಘಟಕ ನಿರ್ಮಾಣಕ್ಕೆ ಅಗತ್ಯ ಜಾಗದ ಕೊರತೆ ಕೂಡ ಕಾಡುವಂತಾಯಿತು. ಈ ಕಾರಣದಿಂದಲೇ ಸರಕಾರಕ್ಕೆ ಸಲ್ಲಿಸಬೇಕಿದ್ದ ಪ್ರಸ್ತಾವನೆ ಸಲ್ಲಿಕೆಯಾಗಿರಲಿಲ್ಲ. ಈ ಮಧ್ಯೆ ಹುಲೇಕಲ್ ಗ್ರಾಪಂನಲ್ಲಿ ಅಂತೂ ಇಂತೂ ಸೂಕ್ತ ಸ್ಥಳ ಸಿಕ್ಕಿತ್ತು. ಈ ಪಂಚಾಯ್ತಿಯಲ್ಲಿ ನೂತನ ಘನತ್ಯಾಜ್ಯ ಘಟಕ ಶೀಘ್ರ ನಿರ್ಮಾಣ ಆಗುವ ಆಶಯವಿದೆ. ಇನ್ನೂ ನಾಲ್ಕು ಗ್ರಾಪಂಗಳಲ್ಲಿ ಜಾಗದ ಸಮಸ್ಯೆ ನಿವಾರಿಸಿ ಅದಕ್ಕೂ ಪ್ರಸ್ತಾವನೆ ಕಳುಹಿಸುವುದಕ್ಕೆ ಸಿದ್ಧತೆ ನಡೆಸಲಾಗುತ್ತದೆ.
ಒಂದೆರಡೇ ಅಲ್ಲ: ಸಾಮಾನ್ಯವಾಗಿ ನಗರ ಪ್ರದೇಶದಲ್ಲಿ ಮನೆಮನೆ ಕಸ ಸಂಗ್ರಹಣ, ಹಸಿ, ಒಣ ಕಸ ವಿಲೇವಾರಿ ಕಾರ್ಯ ನಡೆಯುತ್ತದೆ. ಅದರಂತೆ ಗ್ರಾಮೀಣ ಭಾಗದಲ್ಲೂ ಕಸ ವಿಲೇವಾರಿ ಮಾಡುವು ಅಗತ್ಯವಿದೆ. ಏಕೆಂದರೆ ಗ್ರಾಮೀಣ ಭಾಗದ ರಸ್ತೆಯಂಚಿನಲ್ಲಿ ಎಲ್ಲೆಂದರಲ್ಲಿ ಘನತ್ಯಾಜ್ಯಗಳನ್ನು ಎಸೆಯಲಾಗುತ್ತದೆ. ಅವು ಮಣ್ಣಲ್ಲಿ ಕರಗದೇ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ಇಂತಹ ಸಮಸ್ಯೆ ದೂರವಾಗಿಸುವ ನಿಟ್ಟಿನಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಯೋಜನೆ ರೂಪಿಸಿತ್ತು. ಗ್ರಾಮೀಣ ಭಾಗದಲ್ಲಿ ಘನತ್ಯಾಜ್ಯಗಳನ್ನು ಮನೆಮನೆಗೆ ತೆರಳಿ ಸಂಗ್ರಹಿಸುವ ಯೋಜನೆಯಿದು. ಇದಕ್ಕಾಗಿ 20ಲಕ್ಷ ರೂ.ಮಂಜೂರಿ ಮಾಡಲಾಗುತ್ತದೆ. ಶಿರಸಿ ತಾಲೂಕಿನಲ್ಲಿ ಹುಲೇಕಲ್, ಯಡಳ್ಳಿ, ಇಸಳೂರು, ಅಂಡಗಿ, ಗುಡ್ನಾಪುರ, ಬನವಾಸಿ ಗ್ರಾಪಂಗಳಲ್ಲಿ ಘಟಕ ನಿರ್ಮಾಣ ಮಾಡಲು ಆಯ್ಕೆ ಮಾಡಲಾಗಿದೆ. ಘಟಕ ನಿರ್ಮಾಣದ ಬಳಿಕ ಮನೆಮನೆಗೆ ತೆರಳಿ ಘನತ್ಯಾಜ್ಯ ಸಂಗ್ರಹಕ್ಕೆ ವಾಹನವೊಂದನ್ನು ನೀಡಲಾಗುತ್ತದೆ. ಹೀಗೆ ಸಂಗ್ರಹಿಸಿದ ಪ್ಲಾಸ್ಟಿಕ್‌, ಕಬ್ಬಿಣ, ಬಾಟಲಿ ಮುಂತಾದ ಘನತ್ಯಾಜ್ಯಗಳನ್ನು ವಿಲೇವಾರಿ ಮಾಡುವುದಕ್ಕೆ ಘಟಕ ನಿರ್ಮಿಸುವ ಯೋಜನೆ ಇದಾಗಿದೆ.

ಜಿಲ್ಲೆಯ 55ಕ್ಕೂ ಹೆಚ್ಚು ಗ್ರಾಪಂಗಳನ್ನು ಆಯ್ಕೆ ಮಾಡಲಾಗಿದೆ. ಪ್ರಥಮ ಹಂತದಲ್ಲಿ ಆರು ಗ್ರಾಪಂಗಳಲ್ಲಿ ನೂತನ ಘನತ್ಯಾಜ್ಯ ಘಟಕ ನಿರ್ಮಾಣದ ಪ್ರಸ್ತಾವನೆ ಇದ್ದು, ಸ್ಥಳದ ಸಮಸ್ಯೆ ಕೂಡ ಇತ್ಯರ್ಥವಾಗಿದೆ.•ಎಫ್‌.ಜಿ. ಚಿನ್ನಣ್ಣವರ, ತಾಪಂ ಇಒ

ಸಮಸ್ಯೆ ನಿವಾರಣೆ ಆದ್ರೆ ಸಾಕು. ಎಲ್ಲಿ ಬಾಟಲಿ, ಪ್ಲಾಸ್ಟಿಕ್‌ ಹಾಕಬೇಕು, ಹಾಳಾದ ಮೊಬೈಲ್ ಎಲ್ಲಿ ಬಿಸಾಕಬೇಕು ಗೊತ್ತಿರಲಿಲ್ಲ. ಹಸಿ ತ್ಯಾಜ್ಯವನ್ನು ಗೊಬ್ಬರ ಕೂಡ ಮಾಡಲಿ.•ಗಣೇಶ ಹೆಗಡೆ, ರೈತ

•ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.