ಹಳ್ಳಿ ಕಸಗಳಿಗೂ ಬರಲಿದೆ ಘನತ್ಯಾಜ್ಯ ಘಟಕ
•ತಲೆನೋವಿಗೊಂದು ಬ್ರೇಕ್ ಸಿಗಲಿದೆ!•ಜಿಲ್ಲೆಯಲ್ಲಿ 55ಕ್ಕೂ ಹೆಚ್ಚು ಗ್ರಾಪಂಗಳು ಆಯ್ಕೆ
Team Udayavani, Jul 19, 2019, 10:41 AM IST
ಶಿರಸಿ: ಯಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ತಾತ್ಪೂರ್ತಿಕ ಘಟಕ.
ಶಿರಸಿ: ನಗರದಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡಲು ಅವಕಾಶವಿದೆ. ಮನೆಮನೆಯಿಂದ ಕಸ ಸಂಗ್ರಹಣೆಗೆ ಪ್ರತ್ಯೇಕ ವ್ಯವಸ್ಥೆ ಕೂಡ ಇರುತ್ತದೆ.
ಆದರೆ, ನಗರವಷ್ಟೇ ಬೆಳೆಯುತ್ತಿರುವ ಹಳ್ಳಿಯಲ್ಲೂ, ನಗರದ ಸವಲತ್ತಿಗಿಂತ ಏನು ಕಡಿಮೆ ಇಲ್ಲ. ನಗರದಲ್ಲಿ ಇರುವಂತೆ ಕಂಪ್ಯೂಟರ್ ತ್ಯಾಜ್ಯಗಳು, ಪ್ಲಾಸ್ಟಿಕ್ ತ್ಯಾಜ್ಯಗಳು ಇರುತ್ತಿದ್ದವು. ಇವನ್ನೆಲ್ಲ ಏನು ಮಾಡಬೇಕು ಎಂಬುದು ಹಳ್ಳಿಗರಿಗೆ ತಲೆ ನೋವಾಗಿತ್ತು.
ಏಕೆಂದರೆ, ಗ್ರಾಮೀಣ ಭಾಗದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳೇ ಇರಲಿಲ್ಲ.
ಹೊಸ ಬೆಳವಣಿಗೆ: ನಗರದಲ್ಲಷ್ಟೇ ಅಲ್ಲದೇ ಗ್ರಾಮೀಣ ಭಾಗದಲ್ಲೂ ಘನತ್ಯಾಜ್ಯ ವಸ್ತು ವಿಲೇವಾರಿಗೆ ಘಟಕ ತೆರೆಯುವ ಪ್ರಕ್ರಿಯೆಗಳು ಆರಂಭವಾಗಿದೆ.
ತಾಲೂಕಿನಲ್ಲಿ ಈಗಾಗಲೇ ಗ್ರಾಪಂವೊಂದರಲ್ಲಿ ಘಟಕ ನಿರ್ಮಾಣ ಮಂಜೂರಿ ಹಂತದಲ್ಲಿದ್ದು ಇನ್ನೂ ಐದು ಘಟಕಗಳಿಗೆ ಪ್ರಸ್ತಾವನೆ ಸಿದ್ಧವಾಗಿದೆ. ಈ ಘಟಕ ಆಗಬೇಕಾಗಿತ್ತು, ಆಗುತ್ತಿರುವುದು ಸಂತಸ ತಂದಂತಾಗಿದೆ.
ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆ ಯೋಜನೆಯಡಿ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ನಿರ್ಮಾಣಕ್ಕೆ ಹಲವು ತಿಂಗಳ ಹಿಂದೆ ಯೋಜನೆ ರೂಪಿತವಾಗಿತ್ತು. ಅದರ ಪ್ರಕಾರ ಶಿರಸಿ ತಾಲೂಕಿನ ಆರು ಗ್ರಾಪಂಗಳಲ್ಲಿ ಘನ ತ್ಯಾಜ್ಯದ ವಿಲೇವಾರಿಯ ನೂತನ ಘಟಕ ನಿರ್ಮಾಣಕ್ಕೆ ಆಯ್ಕೆ ಮಾಡಿದ್ದರು.
ಜಿಲ್ಲೆಯ 55ಕ್ಕೂ ಹೆಚ್ಚು ಗ್ರಾಪಂಗಳನ್ನು ಆಯ್ಕೆ ಮಾಡಲಾಗಿದೆ. ಪ್ರಥಮ ಹಂತದಲ್ಲಿ ಆರು ಗ್ರಾಪಂಗಳಲ್ಲಿ ನೂತನ ಘನತ್ಯಾಜ್ಯ ಘಟಕ ನಿರ್ಮಾಣದ ಪ್ರಸ್ತಾವನೆ ಇದ್ದು, ಸ್ಥಳದ ಸಮಸ್ಯೆ ಕೂಡ ಇತ್ಯರ್ಥವಾಗಿದೆ.•ಎಫ್.ಜಿ. ಚಿನ್ನಣ್ಣವರ, ತಾಪಂ ಇಒ
ಸಮಸ್ಯೆ ನಿವಾರಣೆ ಆದ್ರೆ ಸಾಕು. ಎಲ್ಲಿ ಬಾಟಲಿ, ಪ್ಲಾಸ್ಟಿಕ್ ಹಾಕಬೇಕು, ಹಾಳಾದ ಮೊಬೈಲ್ ಎಲ್ಲಿ ಬಿಸಾಕಬೇಕು ಗೊತ್ತಿರಲಿಲ್ಲ. ಹಸಿ ತ್ಯಾಜ್ಯವನ್ನು ಗೊಬ್ಬರ ಕೂಡ ಮಾಡಲಿ.•ಗಣೇಶ ಹೆಗಡೆ, ರೈತ
•ರಾಘವೇಂದ್ರ ಬೆಟ್ಟಕೊಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್