![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಬ್ಲಾಸ್ಟಿಂಗ್ ಪರೀಕ್ಷೆಗೆ ಗ್ರಾಮಸ್ಥರ ವಿರೋಧ
Team Udayavani, Dec 28, 2019, 2:50 PM IST
![uk-tdy-1](https://www.udayavani.com/wp-content/uploads/2019/12/uk-tdy-1-21-620x360.jpg)
ಜೋಯಿಡಾ: ರಾಮನಗರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಅರಣ್ಯ ಹಾಗೂ ಪರಿಸರ ಹಾನಿ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವರದಿ ನೀಡುತ್ತೇವೆ ಎಂದು ಸಭೆಯಲ್ಲಿ ಹೇಳಿದ ತಹಶೀಲ್ದಾರರು, ಈಗ ಏಕಾಏಕಿ ಕ್ವಾರಿ ಬ್ಲಾಸ್ಟಿಂಗ್ ಟೆಸ್ಟ್ ನಡೆಸುತ್ತೇವೆ ಎಂದು ನೋಟಿಸ್ ನೀಡಿರುವುದು ಸರಿಯಲ್ಲ. ಇದನ್ನು ವಿರೋಧಿಸುತ್ತೇವೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.
ರಾಮನಗರದಲ್ಲಿ ಕಳೆದ 23ರಂದು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ವಾರಿಗೆ ಸಂಬಂಧಿಸಿದ ಕಂದಾಯ, ಅರಣ್ಯ, ಗಣಿ ಹಾಗೂ ಭೂ ವಿಜ್ಞಾನ, ಪರಿಸರ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸೇರಿ ಕ್ವಾರಿ ಪರವಾನಿಗೆ, ಅಕ್ರಮ ಸಕ್ರಮ ಬಗ್ಗೆ ತನಿಖೆ ನಡೆಸಿ, ಪರಿಸರ ಹಾಗೂ ಅಭಯಾರಣ್ಯಕ್ಕೆ ಆಗುತ್ತಿರುವ ಹಾನಿ ಮತ್ತು ಇಲ್ಲಿನ ಜನ ವಸತಿ ಪ್ರದೇಶದ ಮೇಲೆ ಆಗುತ್ತಿರುವ ಹಾನಿ ಕುರಿತು ಸ್ಥಳ ಪರಿಶೀಲಿಸಿ ವರದಿ ನೀಡುವುದಾಗಿ ಹೇಳಿದರು.
ನಂತರ ಕ್ವಾರಿ ಸಕ್ರಮವಾಗಿದ್ದರೆ ಹಾಗೂ ಪರವಾನಗಿ ಪಡೆದುಕೊಂಡಿದ್ದರೆ ಬ್ಲಾಸ್ಟಿಂಗ್ ಟೆಸ್ಟ್ ಮಾಡಿಸುತ್ತೇವೆ ಎಂದು ಸಭೆಯಲ್ಲಿ ತಹಶೀಲ್ದಾರರು ತಿಳಿಸಿದ್ದರು. ಆದರೆ ಈಗ ಏಕಾಏಕಿ ಡಿ.30 ರಂದು ಕ್ವಾರಿ ಬ್ಲಾಸ್ಟಿಂಗ್ ಟೆಸ್ಟ್ ಮಾಡಿಸುತ್ತೇವೆ ಎಂದು ನೋಟಿಸ್ ಕೊಟ್ಟಿರುವುದು ಸಮಂಜಸವಲ್ಲ. ಇದು ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ರಾಮನಗರದ ಸಾರ್ವಜನಿಕರು ತಿಳಿಸಿದ್ದಾರೆ.
ಈ ಬ್ಲಾಸ್ಟಿಂಗ್ ಟೆಸ್ಟ್ಗೆ ಸಾರ್ವಜನಿಕರು ಹಾಗೂ ಗ್ರಾಪಂ ವಿರೋಧಿಸುತ್ತಿದ್ದು, ನಾವು ಈ ಬ್ಲಾಸ್ಟಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಮುಖರಾದ ಸಾಗರ ದೇಸಾಯಿ, ಮಲ್ಲಾರ ರಾಣೆ, ಸದಾನಂದ ಮಿರಾಶಿ, ಸುನೀಲ ದೇಸಾಯಿ, ಕೇಶವ ಬಾಮೈಕರ್, ಪ್ರಭಾಕರ್ ಜಾತ್ರೀಡಕರ್, ದಿನೇಶ ನಾಯ್ಕ, ಶಿವಾನಂದ ದೋತ್ರೆ, ಶ್ರೀನಿವಾಸ ನಾಗನೂರ, ವಿಠೊಬಾ ಚೌಧರಿ, ಸ್ವೀಕಾರ ಜೋಗಿ, ನಾರಾಯಣ ಸೋನಾಳಕರ ಇತರರು ತಹಶೀಲ್ದಾರ್ ಗೆ ನೀಡಿದ ಮನವಿಯಲ್ಲಿ ಎಚ್ಚರಿಸಿರುತ್ತಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.