ಹಗ್ಗ-ಸೀಮೆ ಎಣ್ಣೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ


Team Udayavani, Oct 24, 2021, 4:19 PM IST

22nort

ಅಂಕೋಲಾ: ಸ್ಮಶಾನ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಪುರಸಭೆಯಿಂದ ಅಲ್ಲಿನ ನಿವಾಸಿಗಳಿಗೆ ಖುಲ್ಲಾಪಡಿಸಲು ಕಾರಣ ಕೇಳಿ ನೊಟೀಸ್‌ ನೀಡಿದ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳು ಹಗ್ಗ ಮತ್ತು ಸೀಮೆ ಎಣ್ಣೆ ಕ್ಯಾನ್‌ಗಳನ್ನು ಹಿಡಿದು ನಮಗೆ ಆತ್ಮಹತ್ಯೆ ಒಂದೇ ದಾರಿ ಎಂದು ಹೇಳುತ್ತ ದಿಢೀರ್‌ ಪ್ರತಿಭಟನೆ ನಡೆಸಿದ ಘಟನೆ ಪಟ್ಟಣದ ಕೋಟೆವಾಡದಲ್ಲಿ ನಡೆದಿದೆ.

ಪ್ರತಿಭಟನೆ ನಡೆಸಿದ ಕೋಟೆವಾಡಾದ ನಿವಾಸಿಗಳು ಅವರು ಸ್ಮಶಾನಭೂಮಿ ಸುರಕ್ಷಾ ಸಮಿತಿ ಮತ್ತು ಪುರಸಭೆ ವಿರುದ್ಧ ಧಿಕ್ಕಾರ ಕೂಗಿದರು. ಹಿಂದೂ ಸ್ಮಶಾನ ಭೂಮಿ ಸುರಕ್ಷಾ ಸಮಿತಿ ಕೋರಿಕೆಯಂತೆ ಸ್ಮಶಾನ ಭೂಮಿ ಸರ್ವೇ ನಡೆಸಿದ ತಹಶೀಲ್ದಾರರು ಸ್ಮಶಾನ ಭೂಮಿ 7ಎ.2ಗು. ಪ್ರದೇಶದ ಪೈಕಿ 34 ಗುಂಟೆಯಷ್ಟು ಅತಿಕ್ರಮಣವಾಗಿರುವುದನ್ನು ದೃಢಪಡಿಸಿದ್ದರು ಹಾಗೂ ಅತಿಕ್ರಮಣ ಖುಲ್ಲಾಪಡಿಸುವಂತೆ ಪುರಸಭೆಗೆ ಆದೇಶ ನೀಡಿದ್ದರು. ಸ್ಮಶಾನ ಭೂಮಿಯ ಅತಿಕ್ರಮಣ ಖುಲ್ಲಾಪಡಿಸಲು ತಹಶೀಲ್ದಾರ್‌ ಪತ್ರ ದಿ.2-6-2021 ಹಾಗೂ 2-9-2021 ಮತ್ತು ಹಿಂದೂ ಸ್ಮಶಾನ ಭೂಮಿ ಸುರಕ್ಷಾ ಸಮಿತಿ ಮನವಿ ದಿ.23-9-2021ಕ್ಕೆ ಸಂಬಂಧಿಸಿದಂತೆ ಪುರಸಭೆ ಅ.30 ರಂದು ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ಖುಲ್ಲಾಪಡಿಸುವ ಕಾರಣ ಕೇಳಿ ನೊಟೀಸ್‌ ನೀಡಿದೆ. ಪುರಸಭೆ ನೋಟೀಸಿಗೆ ಕಂಗಾಲಾದ ಅಲ್ಲಿನ ನಿವಾಸಿಗಳು ಶನಿವಾರ ದಿಢೀರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಲ್ಲಿನ ನಿವಾಸಿ ಜುಬೇದಾಬಿ ಅಹ್ಮದ ಇಕ್ಬಾಲ್‌ ನಾವು 50 ವರ್ಷಗಳಿಂದ ಇಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದೇವೆ. ಸ್ಮಶಾನದಲ್ಲಿ ನೀರಿನ ವ್ಯವಸ್ಥೆ ಇರಲಿಲ್ಲ ಆಗ ನಾನೇ ನೀರನ್ನು ಒದಗಿಸುತ್ತಿದ್ದೆ. ಸ್ಮಶಾನ ಅಭಿವೃದ್ಧಿ ಮಾಡುವವರು ಆಗ ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ.

ಪೋರಿ ಸಣ್ಣಾ ಗೌಡ, ಸಚಿನ ನಾಯ್ಕ, ಅನ್ವರ ವಾಸ್ಟರ್‌ ಮಾತನಾಡಿ, ಇಷ್ಟು ಕಾಲದಿಂದ ಅಧಿಕೃತವಾಗಿ ವಾಸ ಮಾಡಿ ಈಗ ಬಲವಂತವಾಗಿ ಎಬ್ಬಿಸಲು ಬಂದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದರು.

ಸ್ಮಶಾನ ಭೂಮಿ ಸುರಕ್ಷಾ ಸಮಿತಿ ಅಧ್ಯಕ್ಷ ಸುರೇಶ ವೆರ್ಣೇಕರ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಅವರು ತನ್ನ ಊರಿನ ಸ್ಮಶಾನ ಅಭಿವೃದ್ಧಿಪಡಿಸಲಾಗದೆ ನಗರದ ಸ್ಮಶಾನ ಅಭಿವೃದ್ಧಿ ನೆಪದಲ್ಲಿ ಸಾಮರಸ್ಯದಿಂದ ಇದ್ದ ಇಲ್ಲಿನ ಜನರಲ್ಲಿ ಗಲಭೆಗೆ ಪ್ರಚೋದಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕಾಗಮಿಸಿದ ಉಪ ಪೊಲೀಸ್‌ ನಿರೀಕ್ಷಕ ಪ್ರೇಮನಗೌಡ ಪಾಟೀಲ, ಪಿಎಸ್‌ಐ ಪ್ರವೀಣಕುಮಾರ ಸೀಮೆ ಎಣ್ಣೆ ಕ್ಯಾನುಗಳನ್ನು ಹಿಡಿದು ಪ್ರತಿಭಟನೆ ಮಾಡುತ್ತಿದ್ದ ಜನರನ್ನು ನ್ಯಾಯ ಕೇಳಲು ಕಾನೂನು ಪ್ರಕಾರ ಹಲವು ಮಾರ್ಗಗಳಿವೆ. ಈ ರೀತಿ ಆವೇಶದಿಂದ ಜೀವಹಾನಿ ಮಾಡಿಕೊಳ್ಳುವುದು ಸರಿಯಲ್ಲ ಎಂದು ಬುದ್ದಿವಾದ ಹೇಳಿ ಮನವೊಲಿಸಿದರು. ಪೊಲೀಸ್‌ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.