ಕಾಡಿನಲ್ಲಿ ಹರಿವ ಹೊಳೆ ರಕ್ಷಣೆಗೆ ಪ್ರತಿಜ್ಞೆ

ಪರಿಸರ-ಜನಜೀವನಕ್ಕೆ ತೊಂದರೆ ತರುವ ಯಾವುದೇ ಅಣೆಕಟ್ಟು-ಯೋಜನೆ ಜಾರಿಗೆ ತರದಿರಲು ನಿರ್ಧಾರ

Team Udayavani, Jun 7, 2021, 8:51 PM IST

6srs2

ಶಿರಸಿ: ತಾಲೂಕಿನ ಸಾಲ್ಕಣಿ ಹಾಗೂ ವಾನಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಹರಿದು, ಮುಂದೆ ಬೇಡ್ತಿನದಿ ಸೇರುವ ಪಟ್ಟಣ ಹೊಳೆಯ ಸಮೃದ್ಧ ಕಣಿವೆಯ ಪರಿಸರದ ಸಂರಕ್ಷಣೆಗೆ ಸದಾ ಬದ್ಧವಾಗಿರಲು ಒಮ್ಮತದ ನಿರ್ಧಾರವನ್ನು ಸ್ಥಳೀಯ ಗ್ರಾಮಸ್ಥರು ಕೈಗೊಂಡರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾಲ್ಕಣಿ ಪಂಚಾಯತವು ಹಮ್ಮಿಕೊಂಡ ಸಾಂಕೇತಿಕ ಕಾರ್ಯಕ್ರಮದಲ್ಲಿ ಈ ಪ್ರದೇಶದ ಪರಿಸರ ಹಾಗೂ ಜನಜೀವನಕ್ಕೆ ತೊಂದರೆ ತರುವ ಯಾವುದೇ ಅಣೆಕಟ್ಟು ಅಥವಾ ನದಿತಿರುವು ಯೋಜನೆಗಳನ್ನು ಹಮ್ಮಿಕೊಳ್ಳಬಾರದಾಗಿ ಒಮ್ಮತದ ಪಂಚಾಯತ ನಿರ್ಣಯವನ್ನು ಕೂಡ ಮಾಡಲಾಯಿತು.

ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಈ ಪ್ರದೇಶದ ಸಮೃದ್ಧ ಕೃಷಿ ಪರಂಪರೆ ಹಾಗೂ ಜನರ ಪರಿಸರ ಜ್ಞಾನವನ್ನು ಮುಂಬರುವ ತಲೆಮಾರಿಗೂ ಈ ಕಾಳಜಿಯನ್ನು ತಲುಪಿಸುವ ಅಗತ್ಯವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷ ತಿಮ್ಮಣ್ಣ ಹೆಗಡೆ ಮಾತನಾಡಿ, ಘನತ್ಯಾಜ್ಯ ನಿರ್ವಹಣೆ, ಸ್ವತ್ಛತೆ ಇತ್ಯಾದಿ ಆರೋಗ್ಯ ಹಾಗೂ ಪರಿಸರ ಸಂರಕ್ಷಣೆ ಕುರಿತು ಮುಂಬರುವ ದಿನಗಳಲ್ಲಿ ಗ್ರಾಪಂ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಸುಮಾ ಸತೀಶ ಹೆಗಡೆ, ಸದಸ್ಯರಾದ ಶ್ರೀಧರ ಹೆಗಡೆ, ಗಜಾನನ ನಾಯ್ಕ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ ಹೆಗಡೆ ಶಿಗೇಹಳ್ಳಿ, ಜಿಪಂ ಸದಸ್ಯ ಜಿ.ಎನ್‌. ಹೆಗಡೆ ಮುರೇಗಾರ ಉಪಸ್ಥಿತರಿದ್ದರು. ಪಂಚಾಯತ ಗ್ರಾಮಾಭಿವೃದ್ಧಿ ಅಧಿಕಾರಿ ಯೋಗಿತಾ ಹೆಗಡೆ ನಿರೂಪಿಸಿದರು.

ಸಾಂಕೇತಿಕವಾಗಿ ಪಂಚಾಯತ ಆವರಣದ ಔಷ ಧವನದಲ್ಲಿ ಗಿಡ ನೆಡಲಾಯಿತು. ಬಳಿಕ ಸಮೀಪದ ಪಟ್ಟಣಹೊಳೆಯ ಮುರೇಗಾರ್‌ ಜಲಪಾತದ ಬಳಿಯ ನದಿಪಾತ್ರಕ್ಕೆ ಗ್ರಾಮಸ್ಥರ ನಿಯೋಗ ಭೇಟಿ ನೀಡಿತು. ಅಲ್ಲಿನ ಪರಿಸರದ ಸಮೀಕ್ಷೆ ನಡೆಸಲಾಯಿತು. ಮುರೇಗಾರ್‌ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಗಣಪತಿ ಹೆಗಡೆ ಮುರೇಗಾರ್‌ ಅರಣ್ಯ ಸಮಿತಿ ಕಾರ್ಯಚಟುವಟಿಕೆ ಪರಿಚಯಿಸಿದರು.

ಜಿಪಂ ಸದಸ್ಯ ಜಿ.ಎನ್‌. ಹೆಗಡೆ ಮುರೇಗಾರ್‌ ಈ ಪ್ರದೇಶದ ಕೃಷಿ ಪರಿಸ್ಥಿತಿ ಹಾಗೂ ಪರಿಸರದ ಪಾರಂಪರಿಕ ಮಹತ್ವ ವಿವರಿಸಿದರು. ಬೇಡ್ತಿ-ಅಘನಾಶಿನಿ ಕೊಳ್ಳಸಮಿತಿ ಉಪಾಧ್ಯಕ್ಷ ವಿ.ಎನ್‌. ಹೆಗಡೆ ಬೊಮ್ಮನಳ್ಳಿ ಮಾತನಾಡಿ, ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಪರಿಸರ ನಡೆಯುತ್ತಿರುವ ಸಂರಕ್ಷಣಾ ಕಾರ್ಯ ಪ್ರಸ್ತಾಪಿಸಿ, ಈ ಪ್ರದೇಶದಲ್ಲಿ ಯಾವುದೇ ವಿನಾಶಕಾರಿ ಯೋಜನೆಗಳು ಬರದಂತೆ ಜನರು ಸದಾ ಜಾಗೃತರಾಗಿರಬೇಕು ಎಂದರು.

ನರಸಿಂಹ ಹೆಗಡೆ ವಾನಳ್ಳಿ ಮಾತನಾಡಿ, ಈ ಕಣಿವೆಯ ಕಾಡಿನ ವೈಶಿಷ್ಠ, ಅಪರೂಪದ ಜೀವವೈವಿಧ್ಯ, ಪಾರಂಪರಿಕ ಕೃಷಿ ಹಾಗೂ ಕರಕುಶಲ ಪದ್ಧತಿ, ಒಕ್ಕಲಿಗ ವನವಾಸಿಗಳ ಪರಿಸರ ಕಾಳಜಿ ಕುರಿತು ಮಾಹಿತಿ ನೀಡಿದರು. ವನ್ಯಜೀವಿತಜ್ಞ ಬಾಲಚಂದ್ರ ಸಾಯಿಮನೆ, ರಮಾಕಾಂತ ಮಂಡೇಮನೆ, ಕೇಶವ ಕೊರ್ಸೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.