ಮಕ್ಕಳ ಬಿಸಿಯೂಟಕ್ಕೆ ನೀರಿನ ಸಮಸ್ಯೆ ಅಡ್ಡಿಯಾಗದು: ನಾಯ್ಕ
Team Udayavani, May 29, 2019, 11:09 AM IST
ಕಾರವಾರ: ಶಾಲಾ ಪ್ರಾರಂಭೋತ್ಸವಕ್ಕೆ ನೀರಿನ ಸಮಸ್ಯೆ ಅಡ್ಡಿಯಾಗುವುದಿಲ್ಲ ಎಂದು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ್ ನಾಯ್ಕ ಅಭಿಪ್ರಾಯಪಟ್ಟರು.
ಜಿಪಂನಲ್ಲಿ ನಡೆದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ 29 ರಿಂದ ಜಿಲ್ಲಾದ್ಯಂತ ಶಾಲೆಗಳು ಪುನಾರಂಭಗೊಳ್ಳುತ್ತಿದ್ದು ಜಿಲ್ಲೆಯ ಕೆಲವೆಡೆ ನೀರಿನ ಸಮಸ್ಯೆ ತಲೆದೋರಿ ಬಿಸಿಯೂಟ ತಯಾರಿಕೆ ಸೇರಿದಂತೆ ಶಾಲೆ ನಡೆಸಲು ಸಮಸ್ಯೆ ಎದುರಾಗಬಹುದು ಎಂದು ಸಭೆಯಲ್ಲಿ ಕೆಲವು ಸದಸ್ಯರು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಎರಡೂ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಶಾಲಾ ಪ್ರಾರಂಭಕ್ಕೆ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾದ್ಯಂತ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಪಂಗಳಿಗೆ ಅನುದಾನ ನೀಡಿ ಜವಾಬ್ದಾರಿ ವಹಿಸಲಾಗಿದೆ. ಹಳ್ಳಿ ಶಾಲೆಗೂ ನೀರಿನ ಸರಬರಜು ಮಾಡಬೇಕು. ಈ ವಿಷಯವನ್ನು ಸಂಬಂಧಿಸಿದ ಬಿಇಒಗಳು ನಿರ್ವಹಿಸಬೇಕಿದೆ. ಆಯಾ ಉಪ ನಿರ್ದೇಶಕರು ಅಂತಹ ಯಾವುದೇ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಪೂರ್ವ ನಿಗದಿಯಂತೆ ಮೇ 29ರಂದೇ ಜಿಲ್ಲಾದ್ಯಂತ ಶಾಲಾ ಪ್ರಾರಂಭೋತ್ಸವ ಆಗಬೇಕು ಎಂದರು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಜಿಲ್ಲೆಯ ವಿದ್ಯಾರ್ಥಿನಿ ನಾಗಾಂಜಲಿ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ ಕೀರ್ತಿ ತಂದಿದ್ದಾರೆ. ಅಲ್ಲದೆ ಹಲವಾರು ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಅತ್ಯಧಿಕ ಅಂಕಗಳಿಸಿದ್ದಾರೆ. ಅಂತಹ ಪ್ರತಿಭಾವಂತರನ್ನು ಜಿಪಂನಿಂದ ಗೌರವಿಸಲು ತೀರ್ಮಾನಿಸಲಾಯಿತು.
ಕೆಲವು ಶಾಲೆಗಳಲ್ಲಿ ಶಿಕ್ಷಕರ ವಯೋನಿವೃತ್ತಿ ಅಥವಾ ಸ್ವಯಂ ನಿವೃತ್ತಿ ನಂತರವೂ ಹೆಚ್ಚುವರಿ ಶಿಕ್ಷಕರು ಎಂದು ಪರಿಗಣಿಸಿ ವರ್ಗಾವಣೆ ಮಾಡುವುದು ವಿದ್ಯಾರ್ಥಿಗಳ ದೃಷ್ಟಿಯಿಂದ ಸರಿಯಾದ ಕ್ರಮವಲ್ಲ. ಕೆಲವೆಡೆ 20-25 ವರ್ಷಗಳಿಂದಲೂ ವರ್ಗಾವಣೆಯಾಗದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರಲಿದೆ. ಶಾಲಾ ಶಿಕ್ಷಕರ ವರ್ಗಾವಣೆಗೆ ಸರಿಯಾದ ಮಾರ್ಗಸೂಚಿ ಅಗತ್ಯವಿದೆ ಎಂದು ಸದಸ್ಯರು ಅಭಿಪ್ರಾಯಪಟ್ಟರು. ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಗಳನ್ನು ತಯಾರಿಸಿ ಅನುಮೋದನೆ ಪಡೆಯುವಂತೆ ತೀರ್ಮಾನಿಸಲಾಯಿತು.
ಉಪಕಾರ್ಯದರ್ಶಿ ಶ್ಯಾಮಲಾ ಮಹಾಲೆ ಸೇರಿದಂತೆ ಸಮಿತಿಯ ಎಲ್ಲ ಸದಸ್ಯರು, ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ