ಅಂಕೋಲಾದಲ್ಲಿ ನಲ್ಲಿ ನೀರು ಸರಬರಾಜು ಸ್ಥಗಿತ


Team Udayavani, May 22, 2019, 11:00 AM IST

uk-tdy-2..

ಅಂಕೋಲಾ: ತಾಲೂಕಿನ ಜನತೆಗೆ ನೀರುಣಿಸುವ ಗಂಗಾವಳಿ ನದಿ ನೀರು ಸಂಪೂರ್ಣ ಬತ್ತಿದ್ದು ಪುರಸಭಾ ವ್ಯಾಪ್ತಿಯ ಜನತೆಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನೀರಿಲ್ಲದೆ ಹಿಂದೆಂದು ಕಂಡರಿಯದ ಭೀಕರ ಬರ ಎದುರಿಸುತ್ತಿರುವ ತಾಲೂಕಿನಲ್ಲೀಗ ನೀರು ಸ್ಥಗಿತ ಮಾಡಿರುವುದರಿಂದ ಜನತೆ ಕಂಗಾಲಾಗಿದ್ದಾರೆ.

ಈಗಾಗಲೇ ನಲ್ಲಿ ನೀರಿನ ಸರಬರಾಜು ಸ್ಥಗಿತ ಮಾಡಿರುವುದನ್ನು ಪುರಸಭೆಯ 23 ವಾರ್ಡ್‌ಗಳಲ್ಲಿ ಧ್ವನಿ ವರ್ಧಕದ ಮೂಲಕ ಹೇಳಲಾಗುತ್ತಿದೆ. ಈ ವಾರ್ಡ್‌ಗಳಿಗೆ ಇಂದಿನಿಂದ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್‌ನಿಂದ ಸರಬರಾಜು ಮಾಡುವ ನೀರು ಜನರಿಗೆ ಅಗತ್ಯಕ್ಕೆ ತಕ್ಕಷ್ಟು ಪೂರೈಸಲು ಸಾಧ್ಯವಾಗುತ್ತಿಲ್ಲ. ಗಂಗಾವಳಿ ನದಿಯಿಂದ ಪ್ರತಿನಿತ್ಯ ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳಿಗೆ 20 ಲಕ್ಷಕ್ಕೂ ಅಧಿಕ ನೀರು ಬೇಕಿತ್ತು. ಆದರೆ ಗಂಗಾವಳಿ ನದಿಯಲ್ಲಿ ನೀರು ಬತ್ತಿರುವುದರಿಂದ ಮುಂದಿನ ದಿನದಲ್ಲಿ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ.

ಇನ್ನೂ 20 ದಿನಗಳ ನಂತರ ಮಳೆ ಆರಂಭವಾಗಲಿದ್ದು ನೀರಿಗಾಗಿ ಜನ ಪರದಾಡಬೇಕಾಗಿದೆ. ತಾಲೂಕು ಆಡಳಿತ ಮತ್ತು ಪುರಸಭೆ ಜನರಿಗೆ ಸಮರ್ಪಕವಾಗಿ ಟ್ಯಾಂಕರ್‌ ಮೂಲಕ ನೀರನ್ನು ನೀಡಲು ಈಗಾಗಲೇ ಆರಂಭಿಸಿದ್ದಾರೆ. ಆದರೂ ಜನರಿಗೆ ನೀರಿನ ಅಭಾವ ಕಾಡ ತೊಡಗಿದೆ.

ಪ್ರಥಮಬಾರಿಗೆ ಅಲಗೇರಿ ಗ್ರಾಮಕ್ಕೆ ನೀರಿನ ಬಿಸಿ ತಟ್ಟಿದ್ದು ದೊಡ್ಡ ಅಲಗೇರಿ, ಸಣ್ಣ ಅಲಗೇರಿ ಭಾಗದ ಬಾವಿಗಳು ಹಿಂದೆಂದು ಬತ್ತಿರಲಿಲ್ಲ. ಗ್ರಾಮದ ಹಿರಿಯರು ಹೇಳುವ ಪ್ರಕಾರ ಯಾವ ಕಾಲದಲ್ಲಿಯೂ ಇಲ್ಲಿ ಬಾವಿ ಬತ್ತಿರುವುದನ್ನು ನೋಡಿಲ್ಲ. ಈಗ ಇಲ್ಲಿಯ ಬಾವಿಗಳು ಬತ್ತಿರುವುದು ನೀರಿನ ಬರ ತಟ್ಟಿದೆ. ಈ ಗ್ರಾ.ಪಂ ವ್ಯಾಪ್ತಿಯಲ್ಲಿ ಟ್ಯಾಂಕರ್‌ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ.

ತಾಲೂಕಿನಲ್ಲೀಗ ಖಾಸಗಿ ನೀರಿನ ಟ್ಯಾಂಕರ್‌ಗಳು ಹೆಚ್ಚಾಗಿ ಕಂಡುಬರುತ್ತಿದೆ. ಪಟ್ಟಣದ ಹೋಟೆಲ್ ಮತ್ತು ತಂಪುಪಾನೀಯ ಮಳಿಗೆಗಳಿಗೆ ಮನೆಮನೆಗಳಿಗೆ ಈ ಖಾಸಗಿ ನೀರಿನ ಮಾಲಕರು ನೀರನ್ನು ಸರಬರಾಜು ಮಾಡುತ್ತಾರೆ. ನೀರನ್ನು ದುಬಾರಿ ವೆಚ್ಚದಲ್ಲಿ ನೀಡದೆ ಜನರಿಗೆ ಇವರು ಸಹಕರಿಸುತ್ತಿದ್ದಾರೆ. ಇದರ ಜೊತೆಯಲ್ಲಿ ಖಾಸಗಿ ಸಂಘ ಸಂಸ್ಥೆ ದಾನಿಗಳು ನೀರನ್ನು ಉಚಿತವಾಗಿ ನೀಡುತ್ತಿದ್ದಾರೆ.

ಮುಂದಿನ ದಿನದಲ್ಲಿ ನೀರಿನ ಬೇಡಿಕೆ ದುಪ್ಪಟ್ಟು ಆಗುವ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಸರಕಾರ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

•ಅರುಣ ಶೆಟ್ಟಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.