ಸೂಪಾ ದಂಡಕಾರಣ್ಯದಲ್ಲಿ ಜಲ ದಾಹ

ಬತ್ತಿವೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಹಳ್ಳಕೊಳ್ಳ-ನಾಡಿಗೆ ಬರುತ್ತಿವೆ ಕಾಡುಪ್ರಾಣಿ

Team Udayavani, May 11, 2019, 3:29 PM IST

uk-tdy-1..

ಜೋಯಿಡಾ: ಸೂಪಾ ಜಲಾಶಯದ ಹಿನ್ನೀರಿನ ದೊಣಪಾ ಪ್ರದೇಶದಲ್ಲಿ ಕಾಡುಕೋಣಗಳು ನಿತ್ಯ ನೀರಿಗಾಗಿ ಬರುತ್ತಿರುವ ದೃಶ್ಯ.

ಜೋಯಿಡಾ: ಮಲೆನಾಡಿನ ಸೂಪಾ ದಂಡಕಾರಣ್ಯದ ಹಚ್ಚಹಸಿರಿನ ನಿತ್ಯ ಹರಿದ್ವರ್ಣದ ಕಾಡು ಈಗ ಬಿಸಿಲಿನ ಬೆಗೆಗೆ ಬೆಂದುಹೋಗಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಹಳ್ಳಕೊಳ್ಳಗಳು ಬತ್ತಿಹೋಗಿವೆ. ಕಾಡುಪ್ರಾಣಿಗಳು ದಾಹ ತೀರಿಸಿಕೊಳ್ಳಲು ನಾಡು, ಜಲಾಶಯದ ಹಿನ್ನೀರಿನತ್ತ ಧಾವಿಸುತ್ತಿವೆ. ಅರಣ್ಯ ಇಲಾಖೆ ದಾಹ ಇಂಗಿಸಲು ಹರಸಾಹಸ ಪಡುತ್ತಿರುವುದು ಕಂಡುಬರುತ್ತಿದೆ.

ಸೂಪಾ ಜಲಾಶಯದ ಒಡಲು ಕಾಳಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈಗ ಜಲಕಂಟಕ ಎದುರಾಗಿದೆ. ಕಾಳಿ ಸಂರಕ್ಷಿತಾರಣ್ಯ ಸೇರಿದಂತೆ ದಟ್ಟಕಾನನದಲ್ಲೀಗ ಬಹುತೇಕ ಎಲ್ಲ ಹಳ್ಳಕೊಳ್ಳಗಳು ಬತ್ತಿದ್ದು, ನೀರಿನ ಸೆಲೆ ಇಂಗಿವೆ. ಇದರಿಂದಾಗಿ ಕಾಡು ಪ್ರಾಣಿಗಳಿಗೆ ನೀರಿನ ಕೊರತೆ ಎದುರಾಗಿದೆ. ಕಾಡಂಚಿನ ಕೆರೆ ಕಟ್ಟೆಗಳಲ್ಲಿ ಹಿಂದೆಂದು ಕಾಣದ ಜಲಕ್ಷಾಮ ಎದುರಾಗಿದೆ. ಕಾಡು ಪ್ರಾಣಿಗಳು ದಾಹ ಇಂಗಿಸಿಕೊಳ್ಳಲಾಗದೆ ವಾಸಸ್ಥಾನವನ್ನು ತೊರೆದು ನಾಡಂಚಿಗೆ ನಿತ್ಯವೂ ಧಾವಿಸಿ ಬರುತ್ತಿವೆ.

ಇಲಾಖೆಯಿಂದ ನೀರುಣಿಸುವ ಪ್ರಯತ್ನ: ಅರಣ್ಯ ಇಲಾಖೆ ಕಾಳಿ ಸಂರಕ್ಷಿತ ಪ್ರದೇಶವಾದ ವಿನೋಲಿ, ಪಣಸೋಲಿ, ಕುಳಗಿ, ಅಣಶಿ, ಸೇರಿದಂತೆ ವನ್ಯಜೀವಿ ವಲಯ ಹಾಗೂ ನಾಡಂಚಿನ ಅರಣ್ಯ ಪ್ರದೇಶದಲ್ಲಿ ನೀರಿನ ತೊಟ್ಟಿ ಇಟ್ಟು ಟ್ಯಾಂಕರ್‌ಗಳ ಮೂಲಕ ನೀರು ಪೂರಣ ಮಾಡುವ ಕೆಲಸ ಮಾಡುತ್ತಿವೆ. ಆದರೆ ಇದು ಕಾಡು ಪ್ರಾಣಿಗಳಿಗೆ ಸಾಲದಾಗಿದ್ದು, ಜಲಮೂಲವನ್ನು ಅರಶಿ ನಾಡಿನತ್ತ ಹಾಗೂ ಸೂಪಾ ಜಲಾಶಯದ ಹಿನ್ನೀರಿನತ್ತ ಧಾವಿಸುತ್ತಿರುವುದು ಕಂಡುಬರುತ್ತಿವೆ.

ಕಾಡುಕೋಣ, ಚಿಗರೆ, ಸಾರಂಗ, ಸಸ್ತನಿಗಳು ಸೇರಿದಂತೆ ಆನೆಗಳೂ ಕೂಡಾ ಜಲಾಶಯದ ನೀರಿನತ್ತ ಧಾವಿಸುತ್ತಿರುವ ದೃಶ್ಯ ದಿನನಿತ್ಯ ಕಂಡು ಬರುತ್ತಿದೆ. ಜೀವಜಲದ ದಾಹ ತೀರಿಸಿಕೊಳ್ಳುವ ಈ ಪಯಣದಲ್ಲಿ ರಸ್ತೆ ಅಂಚಿನಲ್ಲಿ ವಾಹನಕ್ಕೆ ಡಿಕ್ಕಿಹೊಡೆದು ಸಾವನ್ನಪ್ಪುವ ಸಂಭವ ಹೆಚ್ಚಾಗಿದ್ದರೆ, ನಾಡಿನತ್ತ ಧಾವಿಸುವ ಕಾಡು ಪ್ರಾಣಿಗಳಿಗೆ ನಾಯಿ, ಕಳ್ಳ ಬೇಟೆಗಾರರ ಜಾಲಕ್ಕೆ ಸಿಲುಕುವ ಅಪಾಯವಿದೆ.

ಪ್ರಾಣಿಗಳಿಗೆ ಜೀವಜಲದ ಕೊರತೆ ಜೀವಾಪಯಕ್ಕೂ ಕಾರಣವಾಗುತ್ತಿದೆ ಎನ್ನುವುದೇ ದುರಾದೃಷ್ಟಕರ. ಅರಣ್ಯ ಇಲಾಖೆ ಕಾಡಿನ ಒಳಗೆ ಸಾಧ್ಯವಾದಷ್ಟು ಕೆರೆಕಟ್ಟೆಗಳಿಗೆ ನೀರು ಸಂಗ್ರಹಿಸುವ ಕೆಲಸ ಮಡುವ ಮೂಲಕ ಜೀವಜಲ ಕ್ಕಾಗಿ ನಾಡಿನತ್ತ ಬರುವ ಪ್ರಮೇಯ ಎದುರಗದಂತೆ ಮಾಡಬೇಕಿದೆ.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.