![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಸೂಪಾ ದಂಡಕಾರಣ್ಯದಲ್ಲಿ ಜಲ ದಾಹ
ಬತ್ತಿವೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಹಳ್ಳಕೊಳ್ಳ-ನಾಡಿಗೆ ಬರುತ್ತಿವೆ ಕಾಡುಪ್ರಾಣಿ
Team Udayavani, May 11, 2019, 3:29 PM IST
![uk-tdy-1..](https://www.udayavani.com/wp-content/uploads/2019/05/uk-tdy-1..-3-620x346.jpg)
ಜೋಯಿಡಾ: ಸೂಪಾ ಜಲಾಶಯದ ಹಿನ್ನೀರಿನ ದೊಣಪಾ ಪ್ರದೇಶದಲ್ಲಿ ಕಾಡುಕೋಣಗಳು ನಿತ್ಯ ನೀರಿಗಾಗಿ ಬರುತ್ತಿರುವ ದೃಶ್ಯ.
ಜೋಯಿಡಾ: ಮಲೆನಾಡಿನ ಸೂಪಾ ದಂಡಕಾರಣ್ಯದ ಹಚ್ಚಹಸಿರಿನ ನಿತ್ಯ ಹರಿದ್ವರ್ಣದ ಕಾಡು ಈಗ ಬಿಸಿಲಿನ ಬೆಗೆಗೆ ಬೆಂದುಹೋಗಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಹಳ್ಳಕೊಳ್ಳಗಳು ಬತ್ತಿಹೋಗಿವೆ. ಕಾಡುಪ್ರಾಣಿಗಳು ದಾಹ ತೀರಿಸಿಕೊಳ್ಳಲು ನಾಡು, ಜಲಾಶಯದ ಹಿನ್ನೀರಿನತ್ತ ಧಾವಿಸುತ್ತಿವೆ. ಅರಣ್ಯ ಇಲಾಖೆ ದಾಹ ಇಂಗಿಸಲು ಹರಸಾಹಸ ಪಡುತ್ತಿರುವುದು ಕಂಡುಬರುತ್ತಿದೆ.
ಸೂಪಾ ಜಲಾಶಯದ ಒಡಲು ಕಾಳಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈಗ ಜಲಕಂಟಕ ಎದುರಾಗಿದೆ. ಕಾಳಿ ಸಂರಕ್ಷಿತಾರಣ್ಯ ಸೇರಿದಂತೆ ದಟ್ಟಕಾನನದಲ್ಲೀಗ ಬಹುತೇಕ ಎಲ್ಲ ಹಳ್ಳಕೊಳ್ಳಗಳು ಬತ್ತಿದ್ದು, ನೀರಿನ ಸೆಲೆ ಇಂಗಿವೆ. ಇದರಿಂದಾಗಿ ಕಾಡು ಪ್ರಾಣಿಗಳಿಗೆ ನೀರಿನ ಕೊರತೆ ಎದುರಾಗಿದೆ. ಕಾಡಂಚಿನ ಕೆರೆ ಕಟ್ಟೆಗಳಲ್ಲಿ ಹಿಂದೆಂದು ಕಾಣದ ಜಲಕ್ಷಾಮ ಎದುರಾಗಿದೆ. ಕಾಡು ಪ್ರಾಣಿಗಳು ದಾಹ ಇಂಗಿಸಿಕೊಳ್ಳಲಾಗದೆ ವಾಸಸ್ಥಾನವನ್ನು ತೊರೆದು ನಾಡಂಚಿಗೆ ನಿತ್ಯವೂ ಧಾವಿಸಿ ಬರುತ್ತಿವೆ.
ಇಲಾಖೆಯಿಂದ ನೀರುಣಿಸುವ ಪ್ರಯತ್ನ: ಅರಣ್ಯ ಇಲಾಖೆ ಕಾಳಿ ಸಂರಕ್ಷಿತ ಪ್ರದೇಶವಾದ ವಿನೋಲಿ, ಪಣಸೋಲಿ, ಕುಳಗಿ, ಅಣಶಿ, ಸೇರಿದಂತೆ ವನ್ಯಜೀವಿ ವಲಯ ಹಾಗೂ ನಾಡಂಚಿನ ಅರಣ್ಯ ಪ್ರದೇಶದಲ್ಲಿ ನೀರಿನ ತೊಟ್ಟಿ ಇಟ್ಟು ಟ್ಯಾಂಕರ್ಗಳ ಮೂಲಕ ನೀರು ಪೂರಣ ಮಾಡುವ ಕೆಲಸ ಮಾಡುತ್ತಿವೆ. ಆದರೆ ಇದು ಕಾಡು ಪ್ರಾಣಿಗಳಿಗೆ ಸಾಲದಾಗಿದ್ದು, ಜಲಮೂಲವನ್ನು ಅರಶಿ ನಾಡಿನತ್ತ ಹಾಗೂ ಸೂಪಾ ಜಲಾಶಯದ ಹಿನ್ನೀರಿನತ್ತ ಧಾವಿಸುತ್ತಿರುವುದು ಕಂಡುಬರುತ್ತಿವೆ.
ಕಾಡುಕೋಣ, ಚಿಗರೆ, ಸಾರಂಗ, ಸಸ್ತನಿಗಳು ಸೇರಿದಂತೆ ಆನೆಗಳೂ ಕೂಡಾ ಜಲಾಶಯದ ನೀರಿನತ್ತ ಧಾವಿಸುತ್ತಿರುವ ದೃಶ್ಯ ದಿನನಿತ್ಯ ಕಂಡು ಬರುತ್ತಿದೆ. ಜೀವಜಲದ ದಾಹ ತೀರಿಸಿಕೊಳ್ಳುವ ಈ ಪಯಣದಲ್ಲಿ ರಸ್ತೆ ಅಂಚಿನಲ್ಲಿ ವಾಹನಕ್ಕೆ ಡಿಕ್ಕಿಹೊಡೆದು ಸಾವನ್ನಪ್ಪುವ ಸಂಭವ ಹೆಚ್ಚಾಗಿದ್ದರೆ, ನಾಡಿನತ್ತ ಧಾವಿಸುವ ಕಾಡು ಪ್ರಾಣಿಗಳಿಗೆ ನಾಯಿ, ಕಳ್ಳ ಬೇಟೆಗಾರರ ಜಾಲಕ್ಕೆ ಸಿಲುಕುವ ಅಪಾಯವಿದೆ.
ಪ್ರಾಣಿಗಳಿಗೆ ಜೀವಜಲದ ಕೊರತೆ ಜೀವಾಪಯಕ್ಕೂ ಕಾರಣವಾಗುತ್ತಿದೆ ಎನ್ನುವುದೇ ದುರಾದೃಷ್ಟಕರ. ಅರಣ್ಯ ಇಲಾಖೆ ಕಾಡಿನ ಒಳಗೆ ಸಾಧ್ಯವಾದಷ್ಟು ಕೆರೆಕಟ್ಟೆಗಳಿಗೆ ನೀರು ಸಂಗ್ರಹಿಸುವ ಕೆಲಸ ಮಡುವ ಮೂಲಕ ಜೀವಜಲ ಕ್ಕಾಗಿ ನಾಡಿನತ್ತ ಬರುವ ಪ್ರಮೇಯ ಎದುರಗದಂತೆ ಮಾಡಬೇಕಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.