Sirsi: ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತವೆ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ
Team Udayavani, Jan 9, 2024, 2:31 PM IST
ಶಿರಸಿ: ಇಡೀ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದರು.
ಅವರು ಜ.9ರ ಮಂಗಳವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಾತನಾಡಿ,
ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಕುರಿತು ಕುರಿತು ಸಿಎಂ ಜೊತೆ ಸಮಾಲೋಚಿಸಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 16.5 ಕೋಟಿ ರೂ. ತಂದಿದ್ದೇವೆ. ಜಿಲ್ಲೆಯ ಎಲ್ಲ ತಹಶೀಲ್ದಾರರ ಬಳಿ 50 ರಿಂದ 1 ಕೋಟಿ ರೂ. ನೆರವಿನ ಅನುದಾನ ಇದೆ. ಒಂದು ಕಡೆ ಬರ ಇದೆ. ರೈತರಿಗೆ ಪರಿಹಾರ ಕೊಡಬೇಕು. ಜನ-ಜಾನುವಾರಿಗೆ ಆಹಾರ, ನೀರು ಸಮಸ್ಯೆ ಆಗಬಾರದು. ಖಾಸಗಿ ಬೋರ್ ಗಮನಿಸಿ ಬಾಡಿಗೆ ಆಧಾರದಲ್ಲಿ ಪಡೆಯುತ್ತೇವೆ. ಟೆಂಡರ್ ಕರೆದು ನೀರು ತರಲೂ ಯೋಜಿಸಿದ್ದೇವೆ ಎಂದರು.
ದೇವರ ಭಕ್ತರು, ರಾಮನ ಭಕ್ತರು ನಾವು. ಕುಡಿಯುವ ನೀರಿನ ತೊಂದರೆ ಆಗದಂತೆ ವಾತಾವರಣ ಇರುತ್ತದೆ ಎಂಬ ನಂಬಿಕೆ ಇದೆ ಎಂದರು.
ಶಿವಮೊಗ್ಗದಲ್ಲಿ ಎರಡು ಪ್ರಕರಣ ಮಂಗನ ಖಾಯಿಲೆಯಿಂದ ಮೃತ ಆಗಿದೆ. ಮಂಗನ ಕಾಯಿಲೆ ಉತ್ತರ ಕನ್ನಡದಲ್ಲಿ ಬಾರದಂತೆ ಎಚ್ಚರಿಕೆ ವಹಿಸಿದೆ. ಔಷಧ ಕೂಡ ಇದೆ ಎಂದರು.
ಬಿಜೆಪಿಗರು 25 ವರ್ಷ ಜಿಲ್ಲೆಯಲ್ಲಿ ಆಳ್ವಿಕೆ ಮಾಡಿದವರು. ಅವರಿಗೆ ಈಗ ಇಡೀ ಜಿಲ್ಲೆ ಓಡಾಡುವ ಸ್ಥಿತಿ ಬರಬಾರದಿತ್ತು ಎಂದ ಅವರು ನಮ್ಮ ಸಂಸತ್ತಿನ ಅಭ್ಯರ್ಥಿ ಯಾರೆಂಬುದು ನೋಡಿಕೊಂಡಿದ್ದೇವೆ ಎಂದೂ ಹೇಳಿದರು.
ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾ ಪತ್ರಿಕಾ ಸಂಘದ ಅಧ್ಯಕ್ಷ ಜಿ.ಸು.ಬಕ್ಕಳ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !