ವಿಶ್ವ ಮಹಿಳಾ ದಿನಾಚರಣೆ: ‘ಅಮ್ಮ ನಿನ್ನ ಎದೆಯಾಳದಲ್ಲಿ’ ಕಾರ್ಯಕ್ರಮ ಸಂಗೀತ ಸಮ್ಮಾನ ಕಾರ್ಯಕ್ರಮ


Team Udayavani, Mar 9, 2022, 5:10 PM IST

ವಿಶ್ವ ಮಹಿಳಾ ದಿನಾಚರಣೆ: ‘ಅಮ್ಮ ನಿನ್ನ ಎದೆಯಾಳದಲ್ಲಿ’ ಕಾರ್ಯಕ್ರಮ ಸಂಗೀತ ಸಮ್ಮಾನ ಕಾರ್ಯಕ್ರಮ

ಶಿರಸಿ: ಹಿಂದಿನ ಕಾಲದಂತೆ ಮಹಿಳೆ ಈಗಿಲ್ಲ. ಅವಳು ಸಾಕಷ್ಟು ಮುಂದುವರೆದಿದ್ದಾಳೆ. ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾಳೆ. ಇರುವ ವಿಫುಲ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ತನ್ನ ಅಸ್ತಿತ್ವದ ಘನತೆ ಗೌರವವನ್ನು ತನ್ನ ಸಾಧನೆಯ ಮೂಲಕವೇ ಪರಿಚಯಿಸುತ್ತಿದ್ದಾಳೆ ಎಂದು ಸಾಹಿತಿ ಭಾಗೀರತಿ ಹೆಗಡೆ ಹೇಳಿದರು.

ಅವರು ಅರುಣೋದಯ ತರಬೇತಿ ಕೇಂದ್ರದಲ್ಲಿ ಕದಂಬ ಕಲಾ ವೇದಿಕೆ ಶಿರಸಿ ಹಾಗೂ ಶಿರಸಿ ಕರೋಕೆ ಸ್ಟುಡಿಯೋ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯ ಅಮ್ಮ ನಿನ್ನ ಎದೆಯಾಳದಲ್ಲಿ ಶೀರ್ಷಿಕೆಯ ಸಂಗೀತ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂಥ ಸಂದರ್ಭದಲ್ಲಿ ನಾವು ಜಾತಿ ಮತ ಧರ್ಮ ಪಂಥಗಳಾಚೆ ನಿಂತು ಮಾನವತೆಯ ತತ್ವದೊಂದಿಗೆ ಮನುಷ್ಯ ಮನುಷ್ಯರನ್ನು ಪ್ರೀತಿಸುತ್ತಾ ಸಾಗಿದಾಗ ವಿಶ್ವ ಮಹಿಳಾ ದಿನಾಚರಣೆ ಸಂದೇಶ ವಿಶ್ವಕ್ಕೆ ಸಾರಿದಂತಾಗುವುದು. ಇಂದಿನ ಕಾರ್ಯಕ್ರಮದ ಉದ್ದೇಶ ಹಾಗೂ ಶೀರ್ಷಿಕೆ ಎರಡು ಅತ್ಯಂತ ಅರ್ಥಪೂರ್ಣವಾದುದು ಎಂದರು.

ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ, ಮಹಿಳೆ ಸಾಮಾಜಿಕ ಸಾಂಸ್ಕೃತಿಕ ಶೈಕ್ಷಣಿಕ ಸಾಹಿತ್ಯಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜಕ್ಕೆ ಮಹಿಳೆ ನೀಡಿದ ಕೊಡುಗೆಳನ್ನು ಸ್ಮರಿಸಿ ಸಂಭ್ರಮಿಸುವ ದಿನವೇ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ. ಹೆಣ್ಣುಮಕ್ಕಳು ಇಂದು ಪುರುಷರಿಗೆ ಸಮಾನವಾಗಿ ಬದುಕನ್ನು ಕಟ್ಟಿಕೊಂಡು ಇಡೀ ಕುಟುಂಬವನ್ನ ಸಾಕುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ತಾಯಿಯಾಗಿ ತಂಗಿಯಾಗಿ ಪತ್ನಿಯಾಗಿ ಮಗಳಾಗಿ ನಮ್ಮ ಮನ ಮನೆಗಳನ್ನು ಬೆಳಗುವ ಮಹಿಳೆಯನ್ನು ಗೌರವಿಸಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದರು.

ಅಧ್ಯಕ್ಷತೆಯನ್ನು ಅರಣ್ಯಾಧಿಕಾರಿ ಕಿರಣ್ ಬಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಶಾಲಾ ಆರ್ ಕೆ ಹಾಗೂ ಶುಭ ಟಿ ಉಪಸ್ಥಿತರಿದ್ದರು. ಸಮಸ್ತ ಮಹಿಳೆಯರ ಪರವಾಗಿ ಸಾಹಿತಿ ಕಥೆಗಾರ್ತಿ ಭಾಗೀರಥಿ ಹೆಗಡೆಯವರನ್ನ ಸನ್ಮಾನಿಸಿ ಗೌರವಿಸಲಾಯಿತು. ಸಂಗೀತ ಖುರ್ಚಿ ಹಾಗೂ ಸಂಗೀತ ರೆಟ್ರೋ ಸ್ಪರ್ಧೆಯಲ್ಲಿ ಮಹಿಳೆಯರು ಅತ್ಯಂತ ಆಸಕ್ತಿಯಿಂದ ಭಾಗವಹಿಸಿ ಹಾಡಿ ನಲಿದು ಕುಣಿದು ಸಂಭ್ರಮಿಸಿದರು. ಸ್ಪರ್ಧೆಯಲ್ಲಿ  ಜ್ಯೋತಿ ಸತೀಶ್, ಉಷಾ ಕಿರಣ್ ಹಾಗೂ ಪದ್ಮಾ ಶೇಟ್ ವಿಜಯಿಯಾದರು ಕಾರ್ಯಕ್ರಮದ ಸಂಘಟಕ ನಿತ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿರಸಿ ರತ್ನಾಕರ ಸ್ವಾಗತಿಸಿ  ನಿರೂಪಿಸಿದರು. ಗೀತಾ ಸಂತೋಷ್ ಪ್ರಾರ್ಥಿಸಿದರು. ದಿವ್ಯಾ ಶೇಟ್ ಶೀರ್ಷಿಕೆ ಗೀತೆಯನ್ನ ಹಾಡಿದರು. ಅರುಣೋದಯ ಟ್ರಸ್ಟ್ ನ ಸತೀಶ್ ನಾಯ್ಕ ದಂಪತಿಗಳು ಸಹಕರಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.