ರಸ್ತೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ವಾಹನ ಪಲ್ಟಿ: ಮೂವರು ಗಂಭೀರ
Team Udayavani, Feb 13, 2022, 10:02 AM IST
ಅಂಕೋಲಾ: ರಸ್ತೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ವಾಹನ ಪಲ್ಟಿಯಾಗಿದ ಘಟನೆ ತಾಲೂಕಿನ ಆಚವೆ ಗ್ರಾಪಂ ವ್ಯಾಪ್ತಿಯ ವಾಡಗಾರದಲ್ಲಿ ಶನಿವಾರ ನಡೆದಿದೆ.
ವಾಡಗಾರ ಘಟ್ಟದ ಪ್ರದೇಶದ ರಸ್ತೆಯಲ್ಲಿ ತೆರಳುತ್ತಿರುವಾಗ ಟಾಟಾ 407 ಗಾಡಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಗಾಡಿಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯರು ತಮ್ಮ ವಾಹನದಲ್ಲಿ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳು ವಿಳಾಸ ಮತ್ತು ಹೆಸರು ಇನ್ನಷ್ಟೆ ತಿಳಿದು ಬರಬೇಕಿದೆ.
ಅಪಘಾತ ನಡೆದ ಸ್ಥಳ ತಾಲೂಕು ಕೇಂದ್ರದಿಂದ 50 ಕಿ.ಮೀ ಆಗಿದ್ದು ಸ್ಥಳದಲ್ಲಿ ಯಾವುದೇ ಆಂಬುಲೆನ್ಸ್ ಇಲ್ಲದ ಕಾರಣ ಸ್ಥಳೀಯರಾದ ಉದಯ ಹೆಗಡೆ ಮತ್ತು ಗಣೇಶ್ ನಾಯ್ಕ ಮಾಬಗಿ ಎಂಬಾತರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?