Yakshagana ; ಥಂಡಿಮನೆ ಅವರಿಗೆ ಹೊಸ್ತೋಟ ಪ್ರಶಸ್ತಿ ಪ್ರದಾನ
ಯಕ್ಷಗಾನಕ್ಕೆ ಹೊಸತು ಕೊಡಲಾಗದೇ ಇದ್ದರೂ ...
Team Udayavani, Sep 23, 2023, 8:22 PM IST
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಯಕ್ಷ ಶಾಲ್ಮಲಾ ಸಂಸ್ಥೆ ನೀಡುವ ರಾಜ್ಯ ಮಟ್ಟದ ಹೊಸ್ತೋಟ ಮಂಜುನಾಥ ಭಾಗವತ ಪ್ರಶಸ್ತಿಯನ್ನು ಹಿರಿಯ ಕಲಾವಿದ ಥಂಡಿಮನೆ ಶ್ರೀಪಾದ ಭಟ್ಟ ಅವರಿಗೆ ಪ್ರದಾನ ಮಾಡಲಾಯಿತು.
ಶನಿವಾರದಿಂದ ಸ್ವರ್ಣವಲ್ಲೀಯಲ್ಲಿ ಆರಂಭಗೊಂಡ ಎರಡು ದಿನಗಳ ಯಕ್ಷೋತ್ಸವದಲ್ಲಿ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಪ್ರದಾನ ಮಾಡಿ, ಸಂಸ್ಕಾರ ಉಳಿಸಿ ಬೆಳಸುವ ಕಲೆ ಯಕ್ಷಗಾನವನ್ನು ಉಳಿಸಬೇಕು. ಯಕ್ಷಗಾಣ ಉಳಿಸಿದರೆ ಸಮಾಜದಲ್ಲಿ ಸಂಸ್ಕಾರ ಉಳಿಸಲು ಸಾಧ್ಯ ಎಂದರು.
ಪ್ರಶಸ್ತಿ ಸ್ವೀಕರಿಸಿದ ಥಂಡಿಮನೆ ಶ್ರೀಪಾದ ಭಟ್ಟ, ‘ಗುರುವಿನ ಹೆಸರಿನ ಪ್ರಶಸ್ತಿಯನ್ನು ಶ್ರೀಗುರುಗಳ ಕರಗಳಿಂದ ಪಡೆಯುವ ಕ್ಷಣವೇ ಧನ್ಯ. ಯಕ್ಷಗಾನಕ್ಕೆ ಹೊಸತು ಕೊಡಲಾಗದೇ ಇದ್ದರೂ ಹಳತನ್ನು ಉಳಿಸಿಕೊಂಡಿದ್ದೇನೆ’ಎಂಬ ಸಮಾಧಾನ ಇದೆ ಎಂದರು.
ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ, ಅರ್ಥದಾರಿ ಅಶೋಕ ಭಟ್ಟ ಉಜಿರೆ, ಯಕ್ಷ ಶಾಲ್ಮಲಾದ ಕಾರ್ಯಾಧ್ಯಕ್ಷ ಆರ್.ಎಸ್.ಹೆಗಡೆ ಭೈರುಂಬೆ, ಕಾರ್ಯದರ್ಶಿ ನಾಗರಾಜ್ ಜೋಶಿ, ಪ್ರಮುಖರಾದ ಶ್ರೀನಿವಾಸ ಮತ್ತಿಘಟ್ಟ, ಶಂಕರ ಭಟ್ಟ, ಸುನಿತಾ ಭಟ್ಟ ಥಂಡಿಮನೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ