ಯಕ್ಷಗಾನದಿಂದ ಸಮಾಜಕ್ಕೆ ಉತ್ತಮ ಸಂಸ್ಕಾರ ಲಭ್ಯ


Team Udayavani, Feb 25, 2020, 3:24 PM IST

uk-tdy-1

ಹೊನ್ನಾವರ: ಜನಜೀವನಕ್ಕೆ ಉತ್ತಮ ಸಂಸ್ಕಾರ ಯಕ್ಷಗಾನ ಕಲೆಯಿಂದ ಸಿಗುತ್ತಿದೆ. ನಾಡಿನಲ್ಲಿ ಯಕ್ಷಗಾನ ಉಳಿಯಬೇಕು. ಇದಕ್ಕೆ ಸರಕಾರ ಮತ್ತು ಸಮಾಜ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಅವರು ಗುಣವಂತೆ ಯಕ್ಷಾಂಗಣದಲ್ಲ ನಡೆದ ಕೆರೆಮನೆ ಶಂಭು ಹೆಗಡೆ 11ನೇ ರಾಷ್ಟ್ರೀಯ ನಾಟ್ಯೋಕೋತ್ಸವದ ಐದನೇ ದಿನದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಯಕ್ಷಗಾನದಂತಹ ಸಮೃದ್ಧ ಕಲೆ ಉಳಿಸಿ ಬೆಳೆಸಲು ಸರಕಾರ ಸಹ ಅವಶ್ಯ ಸಹಕಾರ ನೀಡಲಿದೆ. ನಾಡಿನ ಸಾಂಸ್ಕೃತಿಕ ಕ್ಷೇತ್ರ ಬಲಗೊಂಡಷ್ಟೂ ನಾಡಿನಲ್ಲಿ ಸಂಸ್ಕಾರಯುತ ಸಮಾಜ ಪ್ರಗತಿ ಸಾಧಿಸಲು ಸಾಧ್ಯ ಎಂದರು.

ನಗದು, ಪ್ರಶಸ್ತಿಫಲಕ ಸಹಿತ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪುರಸ್ಕಾರ ಸ್ವೀಕರಿಸಿದ ಖ್ಯಾತ ಭರತನಾಟ್ಯ ಕಲಾವಿದೆ ಪದ್ಮಭೂಷಣ ಡಾ| ಪದ್ಮಾ ಸುಬ್ರಹ್ಮಣ್ಯ ಚೆನ್ನೈ ಮಾತನಾಡಿ, ಭಾರತದ ಭವ್ಯ ಸಂಸ್ಕೃತಿ ಭರತನಾಟ್ಯ ಶಾಸ್ತ್ರದಲ್ಲಿ ಅಡಗಿದೆ. ಭರತನಾಟ್ಯ ಶಾಸ್ತ್ರ ಎನ್ನುವುದು ಒಂದು ಸಾರ್ವತ್ರಿಕ ಕಲೆಯಾಗಿದೆ.

ಇತಿಹಾಸವನ್ನು ಪರಾಮರ್ಶಿಸಿದರೆ ಪೌರಾಣಿಕ ಕಾಲಘಟ್ಟದಲ್ಲೇ ಜಂಬುದ್ವೀಪ ಎಂದು ಕರೆಯಲಾಗುವ ಏಷ್ಯಾ ರಾಷ್ಟ್ರವನ್ನು ಒಳಗೊಂಡು ಭರತನಾಟ್ಯ ಕಲೆ ವ್ಯಾಪಕವಾಗಿತ್ತು ಎನ್ನುವದನ್ನು ಅರಿಯಬಹುದಾಗಿದೆ ಎಂದರು. ಕೆರೆಮನೆ ಕುಟುಂಬ ಯಕ್ಷಗಾನ ಕಲಾಪ್ರಕಾರದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಜತೆ ರಸಾನುಭವಗಳನ್ನು ನೀಡುತ್ತ ಒಂದು ಸನಾತನ ಪರಂಪರೆಯಂತೆ ಮುಂದುವರಿದು ಬಂದಿರುವುದು ಶ್ಲಾಘನೀಯ ಎಂದರು.

ಕುಂದಾಪುರದ ಗೀತಾ ಎಚ್‌ಎಸ್‌ಎನ್‌ ಫೌಂಡೇಶನ್‌ ಅಧ್ಯಕ್ಷ ಎ.ಶಂಕರ ಐತಾಳರಿಗೆ ಶ್ರೀಮಯ ಕಲಾಪೋಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅದಮ್ಯ ಚೇತನ ಫೌಂಡೇಶನ್‌ ಬೆಂಗಳೂರು ಇದರ ಮೇನೆಜಿಂಗ್‌ ಟ್ರಸ್ಟಿ ಡಾ| ತೇಜಸ್ವಿನಿ ಅನಂತಕುಮಾರ್‌ ಅತಿಥಿಗಳಾಗಿ ಪಾಲ್ಗೊಂಡು ಯಕ್ಷಗಾನ ಕಲೆ ಭಾರತದ ಪುರಾಣಗಳನ್ನು ಸಮಾಜಕ್ಕೆ ತಲುಪಿಸಿ ಆರೋಗ್ಯಕರ ಸಮಾಜ ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸಿದೆ ಎಂದರು.

ಚಲನಚಿತ್ರ ನಟ ನೀರ್ನಳ್ಳಿ ರಾಮಕೃಷ್ಣ ಮಾತನಾಡಿ, ಕೆರೆಮನೆ ಯಕ್ಷಾಂಗಣ ಯಕ್ಷಗಾನ ಕಲೆಯ ನಿತ್ಯೋತ್ಸವದ ತಾಣವಾಗಿದೆ. ರಾಜ್ಯ ಸಭೆಗೆ ಕಲಾವಿದರನ್ನು ಕರೆಸಿಕೊಳ್ಳುವುದಾದಲ್ಲಿ ಕಲಾವಿದರ ಪ್ರತಿನಿಧಿಯಾಗಿ ಡಾ|ಪದ್ಮಸುಬ್ರಹ್ಮಣ್ಯ ಅವರನ್ನು ಕರೆಸಿಕೊಳ್ಳಿ ಎಂದು ಆಗ್ರಹಿಸಿದರು.

ಸಂಸ್ಕಾರ ಭಾರತಿ ಅಖೀಲಭಾರತ ಸಂಘಟನಾ ಕಾರ್ಯದರ್ಶಿ ಪ.ರಾ. ಕೃಷ್ಣಮೂರ್ತಿ ಮಾತನಾಡಿದರು. ಪತ್ರಕರ್ತ ವಿನಾಯಕ ಭಟ್ಟ ಮೂರೂರು ಮಾತನಾಡಿ, ಇಂದು ಟಿ.ವಿ, ಮೊಬೈಲ್‌ ನೋಡಿ ಸಮಾಜ ಕೆಡುತ್ತಿದೆ ಎನ್ನುವ ಹೇಳಿಕೆಗಳ ನಡುವೆ ಯಕ್ಷಗಾನ ನೋಡಿ ಈವರೆಗೆ ಯಾರೂ ಕೆಟ್ಟಿರುವ ಬಗ್ಗೆ ಮಾತುಗಳು ಕೇಳಿಬರುತ್ತಿಲ್ಲ ಎನ್ನುವುದನ್ನು ಗಮನಿಸಬೇಕಿದೆ. ಯಕ್ಷಗಾನ ಹಾಗೂ ಯಾವುದೇ ಕಲೆಗೂ ಕಲಾವಿದರು, ಪ್ರೋತ್ಸಾಹಿಸುವವರು ಇರುವವರೆಗೂ ಯಾವ ಕಲೆಯೂ ಅಳಿಯುವುದಿಲ್ಲ ಎಂದರು.

ಲೇಖಕ ವಿದ್ವಾನ್‌ ಕೂರ್ಗಿ ಶಂಕರನಾರಾಯಣ ಉಪಾಧ್ಯಾಯ ಅಭಿನಂದನಾ ಭಾಷಣ ಮಾಡಿದರು. ಲಕ್ಷ್ಮೀನಾರಾಯಣ ಕಾಶಿ ಸ್ವಾಗತಿಸಿದರು. ಶಿವಾನಂದ ಹೆಗಡೆ ಕೆರೆಮನೆ ವಂದಿಸಿದರು. ಶ್ರೀಧರ ಹೆಗಡೆ ಗೌರವ ಸಮರ್ಪಿಸಿದರು. ಬಿ.ಎಂ. ಭಟ್ಟ, ಲಕ್ಷ್ಮೀಕಾಂತ ಗೌಡ ಕಾರ್ಯಕ್ರಮ ನಿರೂಪಿಸಿದರು. 11ನೇ ರಾಷ್ಟ್ರೀಯ ನಾಟ್ಯೋತ್ಸವಕ್ಕೆ ತೆರೆ ಎಳೆಯಲಾಯಿತು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.