ಸಾಹಿತ್ಯದ ಪರಿಗಣನೆಗೆ ಬಾರದ ಯಕ್ಷಗಾನ ಬರವಣಿಗೆ


Team Udayavani, Sep 2, 2018, 4:20 PM IST

2-september-22.jpg

ಶಿರಸಿ: ಯಕ್ಷಗಾನ ಸರಳ ಬರವಣಿಗೆಯ ಶಕ್ತಿ ಅಪಾರವಾಗಿದ್ದರೂ ಸಹ ಯಕ್ಷಗಾನ ಬರವಣಿಗೆ ಸಾಹಿತ್ಯ ಎಂದು ಪರಿಗಣನೆ ಆಗದಿರುವುದು ಬೇಸರದ ಸಂಗತಿ ಎಂದು ಯಕ್ಷಗಾನ ಸಂಘಟಕ, ಅಕಾಡೆಮಿ ಸದಸ್ಯ ನಾಗರಾಜ್‌ ಜೋಶಿ ವಿಷಾದ ವ್ಯಕ್ತಪಡಿಸಿದರು. ಅವರು ಶನಿವಾರ ನಗರದ ಯೋಗ ಮಂದಿರದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ಮಹಿಳಾ ಹಾಗೂ ಮಕ್ಕಳ ಯಕ್ಷಗಾನ ತಂಡ ಯಕ್ಷ ಗೆಜ್ಜೆ ಹಮ್ಮಿಕೊಂಡ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪ್ರತ್ಯೇಕ ಯಕ್ಷಗಾನ ಅಕಾಡೆಮಿ ಸ್ಥಾಪನೆಯಾಗಲು ಯಕ್ಷಗಾನ ಸಂಘಟಕರು, ಕಲಾವಿದರ ಶ್ರಮ ಹೆಚ್ಚಿದೆ. ಆದರೆ ಬಯಲಾಟ ಹಾಗೂ ಯಕ್ಷಗಾನ ಅಕಾಡೆಮಿಗೆ ಅನುದಾನ ಹಂಚಿಕೆಯಲ್ಲಿ ಪಾಲು ಮಾಡಿದ್ದು ಆತಂಕ ಸೃಷ್ಟಿಸಿದ್ದರೂ ನಂತರ 1.10 ಕೋ.ರೂ. ಅನುದಾನವನ್ನು ಸರಕಾರ ನೀಡಿತು ಎಂದ ಅವರು, ಸರಕಾರಿ ಪ್ರಾಯೋಜಿತ ಯಕ್ಷಗಾನ ಪ್ರದರ್ಶನ ಒಂದು ನಡೆಸಿ, ಅದಕ್ಕೆ ಐದಾರು ಫಲಕ ಹಾಕಿ ಹಣ ಮಾಡುವ ಕೆಲವರ ನಡೆ ಸರಿಯಲ್ಲ. ಹೊರ ಜಿಲ್ಲೆಗಳಲ್ಲಿ ಇರುವ ಇಂಥ ಕಾರ್ಯ ನಮ್ಮ ಜಿಲ್ಲೆಗೆ ಬಾರದಂತೆ ನೋಡಿಕೊಳ್ಳಬೇಕು. ಕಾಗದ ಪತ್ರಗಳಲ್ಲಿ ಮಾತ್ರ ಹತ್ತಾರು ಯಕ್ಷಗಾನ ಪ್ರದರ್ಶನ ನೀಡಿದ್ದೇವೆ ಎಂದು ತಿಳಿಸಿ ಹಣ ಮಾಡುತ್ತಿರುವ ಸಂಘಟನೆಗಳ ಬಗ್ಗೂ ನಾವು ಜಾಗೃತರಾಗಿರಬೇಕು ಎಂದರು.

ಮಕ್ಕಳಿಗೆ ಯಕ್ಷಗಾನದ ಪ್ರೋತ್ಸಾಹ ನೀಡಿದರೆ ಮಾತ್ರ ಯಕ್ಷಗಾನ ಉಳಿಯಲು ಸಾಧ್ಯ. ಈ ಕಾರಣದಿಂದ ಅಕಾಡೆಮಿ ಈ ವರ್ಷ 60 ತರಬೇತಿ ಶಿಬಿರಗಳಿಗೆ ಅನುಮತಿ ನೀಡಿದೆ. ಇಷ್ಟೊಂದು ವ್ಯಾಪಕವಾಗಿ ತರಬೇತಿ ನಡೆಸುತ್ತಿರುವ ಅಕಾಡೆಮಿ ಇದೇ ಮೊದಲು. ಉಳಿದ ಅಕಾಡೆಮಿಗಳಿಗೆ ಇಲ್ಲಿ ಯಶಸ್ಸು ಆದರೆ ಮಾದರಿಯಾಗಿ ಅನುಷ್ಠಾನಗೊಳ್ಳಬಹುದು ಎಂದರು.

ರಂಗಕರ್ಮಿ ರಮಾನಂದ ಐನಕೈ ಮಾತನಾಡಿ, ಮಕ್ಕಳನ್ನು ಗುಲಾಮರನ್ನಾಗಿಸುವ ಶೈಕ್ಷಣಿಕ ಕಲಿಕೆಯ ಒತ್ತಡದ ಹೊರಗೆ ಪರಿಪೂರ್ಣತೆಗೆ ಒಯ್ಯುವ ಸಾಂಸ್ಕೃತಿಕ ನಡೆಯನ್ನೂ ರೂಢಿಸಬೇಕು. ಮನುಷ್ಯನ ಪರಿಪೂರ್ಣತೆಯ ಬೆಳವಣಿಗೆಗೆ ಅನೇಕ ಕಾರ್ಯಗಳು ಕೊರತೆಯನ್ನುಂಟು ಮಾಡುತ್ತಿದೆ. ಜೀವನಕ್ಕಾಗಿ ಕಲಿಯಬೇಕೆ ವಿನಃ ಉದ್ಯೋಗಕ್ಕಾಗಿ ಅಲ್ಲ. ಚೆನ್ನಾಗಿ ಓದಿಕೊಂಡು ಇಂಜಿನಿಯರ್‌, ಡಾಕ್ಟರ್‌ ಆಗಬಹುದು. ಆದರೆ ಉತ್ತಮ ಕಲಾವಿದನಾಗಲು ಸಾಧ್ಯವಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಭಾಗವತ ಗಜಾನನ ಭಟ್ಟ ತುಳಗೇರಿ, ಯಕ್ಷಗಾನ ಶಿಕ್ಷಣ ಪಡೆದು ಸಂಸ್ಕಾರಯುತವಾಗಿ ಬದುಕಲೂ ಅವಕಾಶ ಆಗುತ್ತದೆ. ನೋಡುವುದನ್ನೂ ಈ ತರಬೇತಿ ಕಲಿಸುತ್ತದೆ ಎಂದರು. ಯೋಗ ಮಂದಿರ ಆಡಳಿತ ಮಂಡಳಿ ಅಧ್ಯಕ್ಷ ಎಸ್‌.ಎನ್‌. ಭಟ್ಟ, ಎಂ.ಕೆ. ಹೆಗಡೆ ಗೋಳಿಕೊಪ್ಪ, ಸತೀಶ ಹೆಗಡೆ ಸಾಮ್ರಾಟ ಇತರರು ಇದ್ದರು. ಯಕ್ಷ ಗೆಜ್ಜೆ ಅಧ್ಯಕ್ಷೆ ನಿರ್ಮಲಾ ಹೆಗಡೆ ಗೋಳಿಕೊಪ್ಪ ಸ್ವಾಗತಿಸಿದರು. ಲತಾ ಗಿರಿಧರ ಹೊನ್ನೆಗದ್ದೆ ನಿರೂಪಿಸಿದರು.

ಯಕ್ಷಗಾನ ಮಕ್ಕಳಲ್ಲಿ ವ್ಯಕ್ತಿತ್ವ ರೂಪಿಸುತ್ತದೆ. ವೈಜ್ಞಾನಿಕ ಚಿಂತನಾ ಕ್ರಮ ಕೂಡ ಕಲಿಸುತ್ತದೆ. ಯಕ್ಷಗಾನ ಕಲೆಯನ್ನು ಸೈದ್ಧಾಂತಿಕವಾಗಿ ಮಂಡಿಸುವಂತಾಗಬೇಕು.
 ರಮಾನಂದ ಐನಕೈ,
  ರಂಗಕರ್ಮಿ

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

1-asdadad

Government ನೀತಿಗಳಿಂದಾಗಿ ಯಕ್ಷಗಾನ ಕ್ಷೇತ್ರ ಇಂದು ಕಷ್ಟಕ್ಕೆ ಸಿಲುಕಿದೆ:ಡಾ.ಜಿ.ಎಲ್.ಹೆಗಡೆ

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.