ಯಲ್ಲಾಪುರ: ಅಪಘಾತದಲ್ಲಿ ಪ್ರಸಿದ್ಧ ಭಾಗವತ ಬಾಳೆಹದ್ದ ದಾರುಣ ಮೃತ್ಯು
Team Udayavani, Dec 14, 2022, 1:00 PM IST
ಯಲ್ಲಾಪುರ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಯಕ್ಷಗಾನ ಭಾಗವತಿಕೆ ಹಾಗೂ ಸಂಗೀತಗಾರರೂ ಆಗಿದ್ದ, ತಾಲೂಕಿನ ಭಾಗವತ ತಿಮ್ಮಪ್ಪ ಬಾಳೆಹದ್ದ (59) ಮಂಗಳವಾರ(ಡಿ.13) ಸಂಜೆ ನಿಧನರಾದರು.
ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿ ಹಿತ್ಲಳ್ಳಿ ಕ್ರಾಸ್ ಬಳಿ ಅವರಿದ್ದ ಕಾರಿಗೆ, ಎದುರಿನಿಂದ ಬಂದ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಶಿರಸಿಗೆ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಪ್ರಸಿದ್ಧ ಭಾಗವತರಾಗಿದ್ದ ತಂದೆ ಕೃಷ್ಣ ಭಾಗವತ ಅವರ ಬಳಿ ಭಾಗವತಿಕೆ ಕಲಿತ ಇವರು, ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಸಂಗೀತ ಕಲಿತಿದ್ದರು. ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದರು. ತಾವೇ ಮಕ್ಕಳ ತಾಳಮದ್ದಲೆ ಕೂಟವನ್ನು ಹುಟ್ಟು ಹಾಕಿದ್ದರು. ಮಕ್ಕಳಿಗೆ ಯಕ್ಷಗಾನ ಅರ್ಥಗಾರಿಕೆ, ಭಾಗವತಿಕೆ, ಸಂಗೀತವನ್ನು ಕಲಿಸುತ್ತಿದ್ದರು. ನಾಟಕ ರಂಗಭೂಮಿಗೆ ಸಂಗೀತ ನೀಡುತ್ತಿದ್ದರು.
ಮೃತರು ತಂದೆ, ತಾಯಿ, ಓರ್ವ ಪುತ್ರ, ಪುತ್ರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಯಕ್ಷಲೋಕ ಇವರ ದಾರುಣ ಸಾವಿಗೆ ಸಂತಾಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್