ಯತ್ನಾಳ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳಲ್ಲ
Team Udayavani, Jan 31, 2021, 4:47 PM IST
ಕಾರವಾರ: ಯುಗಾದಿ ನಂತರ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂಬ ಶಾಸಕ ಬಸವನಗೌಡ ಯತ್ನಾಳ್ ಹೇಳಿಕೆ ಯನ್ನು ಗಂಭೀರವಾಗಿ ಪರಿಗಣಿಸಲ್ಲ. ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಅದಕ್ಕೆ ಯಾವುದೇ ಮಹತ್ವ ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಿ ಸುಮಾರು 10 ಕೋಟಿಗೂ ಅಧಿಕ ಸದಸ್ಯರನ್ನು ಹೊಂ ದಿರುವ ಅತೀ ದೊಡ್ಡ ಪಕ್ಷ ಬಿಜೆಪಿಯಾಗಿದೆ. ಗ್ರಾಪಂ ಚುನಾವಣೆ ಮುಗಿಯುತ್ತಿದ್ದಂತೆ ಸಿಎಂ ಬದಲಾಗ್ತಾರೆ ಎಂದು ಸಿದ್ಧರಾಮಯ್ಯ ಹೇಳಿದ್ದರು.
ಈವಾಗ ಇನ್ಯಾವುದೋ ಸಮಯ ಹೇಳ್ತಾರೆ. ಹೀಗೆ ಅವರು ಹೇಳಿದಂತೆ ಒಂದೊಂದು ಹಬ್ಬಕ್ಕೆ ಒಂದೊಂದು ಮುಖ್ಯಮಂತ್ರಿ ಬದಲಾಯಿಸಿದ್ದರೆ ಇಷ್ಟರ ವರೆಗೆ 25 ಬಾರಿ ಮುಖ್ಯಮಂತ್ರಿ ಬದಲಾವಣೆ ಆಗಬೇಕಿತ್ತು ಎಂದು ತಿಳಿಸಿದರು.
ಇದನ್ನೂ ಓದಿ:ಗೋಹತ್ಯೆ ನಿಷೇಧ ಕಾಯ್ದೆ ಜಾಗೃತಿ ಮೂಡಿಸಿ
ಸಿದ್ದರಾಮಯ್ಯ ಹೇಳಿಕೆ ನೀಡಿ ದಂತೆ ಇದೀಗ ಯತ್ನಾಳ್ ಕೂಡಾ ಹೇಳಿಕೆ ಕೊಡ್ತಿ ದ್ದಾರೆ. ಅದ್ಯಾವುದನ್ನೂ ನಾವು ಗಂಭೀರ ವಾಗಿ ತೆಗೆದುಕೊಂಡಿಲ್ಲ. ಯತ್ನಾಳ್ ನನಗೆ ಆತ್ಮೀಯ ಸ್ನೇಹಿತ, ಪ್ರಖರ ಹಿಂದುತ್ವವಾದಿ ಎನ್ನುವುದನ್ನು ನಾನು ಒಪ್ಪುತ್ತೇನೆ. ಆದರೆ ಪಕ್ಷದ ಶಿಸ್ತು ಮೀರಿ ಅವರೇ ಹೇಳಿಕೆ ನೀಡುವುದನ್ನು ಪಕ್ಷ ಯಾವತ್ತೂ ಕ್ಷಮಿಸಲ್ಲ. ಈಗಾಗಲೇ ರಾಜ್ಯಸಮಿತಿಯಿಂದ ಕೇಂದ್ರದ ಶಿಸ್ತು ಸಮಿ ತಿಗೆ ದೂರು ಕಳುಹಿಸಿದ್ದು ಅವರೇ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ