Yellapur 2 ಲಕ್ಷ ರೂ.ಮೌಲ್ಯದ ಶ್ರೀಗಂಧ ಸಹಿತ ಆರೋಪಿ ಬಂಧನ
Team Udayavani, Aug 17, 2023, 11:37 PM IST
ಯಲ್ಲಾಪುರ: ಅರಣ್ಯ ವಿಭಾಗದ ಮಂಚಿಕೇರಿ ವಲಯದ ಮಂಚಿಕೇರಿ ಬೀಟ ವ್ಯಾಪ್ತಿಯ ಮಂಚಿಕೇರಿಯ ಜನತಾ ಕಾಲೋನಿಯಲ್ಲಿ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಗಂಧದ ಕಟ್ಟಿಗೆಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದು ಓರ್ವನನ್ನು ಬಂಧಿಸಿದೆ.
52 ಕೆಜಿ ತೂಕದ ಅಂದಾಜು 2 ಲಕ್ಷ ರೂ ಮೌಲ್ಯದ ಶ್ರೀಗಂಧದ ಕಟ್ಟಿಗೆಯನ್ನು ಗುರುವಾರ ಜಪ್ತಿಪಡಿಸಿ ಆರೋಪಿ ಗಣೇಶ ಸೋಮು ಲಮಾಣಿ ಮಂಚಿಕೇರಿ ಎಂಬಾತನನ್ನು ಬಂಧಿಸಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಜಿ. ಹೆಗಡೆ ರವರ ಮಾರ್ಗದರ್ಶನದಲ್ಲಿ ಮಂಚಿಕೇರಿ ಉಪ ವಿಭಾಗದ ಸಹಾಯಕ ಅರಣ್ಯ ಸಂಕ್ಷಣಾಧಿಕಾರಿ ಹಿಮವತಿ ಭಟ್ ರವರ ಮುಂದಾಳತ್ವದಲ್ಲಿ ಮಂಚಿಕೇರಿ ವಲಯದ ವಲಯ ಅರಣ್ಯಾಧಿಕಾರಿ ಅಮಿತಕುಮಾರ ಚವ್ಹಾಣ ರವರ ನೇತೃತ್ವದ ಕಾರ್ಯಾಚರಣೆಯ ತಂಡದಲ್ಲಿ ಮಂಚಿಕೇರಿ ಶಾಖೆಯ ಉಪವಲಯ ಅರಣ್ಯಾಧಿಕಾರಿಗಳಾದ ಪವನಕುಮಾರ ಲೋಕುರ,ಉಪವಲಯ ಅರಣ್ಯಾಧಿಕಾರಿಗಳಾದ ಸಂತೋಷ ಪವಾರ , ಸಂಗಮೇಶ ಅಂಗಡಿ, ಕಲ್ಲಪ್ಪ. ಬರದೂರ, ಮಂಜುನಾಥ ಆಗೇರ, ಜಗದೀಶ ಪಾಲಕನವರ , ವಿರಾಜ್ ನಾಯಕ, ಹಾಗೂ ಗಸ್ತು ವನಪಾಲಕರಾದ ವಿಷ್ಣು ಪೂಜಾರಿ ಮತ್ತು ವಾಹನ ಚಾಲಕರಾದ ಗಂಗಾಧರ ರೆಡ್ಡಿ, ಮಂಜು ನಾಯ್ಕ ಮತ್ತು ಅರಣ್ಯ ವೀಕ್ಷಕರುಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ