ಚಿನ್ನ ವ್ಯಾಪಾರಿಗಳನ್ನು ಅಡ್ಡಗಟ್ಟಿ 2.11 ಕೋಟಿ ರೂ. ದರೋಡೆ, ಪೊಲೀಸರಿಂದ ಶೋಧ ಕಾರ್ಯ
Team Udayavani, Oct 5, 2022, 4:06 PM IST
ಯಲ್ಲಾಪುರ : ಚಿನ್ನ ಖರೀದಿಗೆಂದು ಹೊರಟಿದ್ದವರನ್ನು ತಾಲೂಕಿನ ಅರಬೈಲ್ ಘಟ್ಟದಲ್ಲಿ ಅಡ್ಡಗಟ್ಟಿ ಹಣ ದೋಚಿದ ಘಟನೆ ಅ.1 ರಂದು ತಡರಾತ್ರಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿಯ ಚಿನ್ನದ ವ್ಯಾಪಾರಿಗಳು ಈ ಮಾರ್ಗವಾಗಿ ಚಿನ್ನ ಖರೀದಿಗೆ ಕೇರಳಕ್ಕೆ ತೆರಳುತ್ತಿದ್ದರು. ಅರಬೈಲ್ ಘಟ್ಟ ಪ್ರದೇಶದಲ್ಲಿ ತೆರಳುತ್ತಿರುವಾಗ ಎರಡು ಮೂರು ವಾಹನದಲ್ಲಿ ಬಂದ ಎಂಟು ಹತ್ತು ಮಂದಿ ದರೋಡೆಕೋರರ ತಂಡ ಇವರ ಕಾರನ್ನು ಅಡ್ಡಗಟ್ಟಿ ಥಳಿಸಿ ಅವರ ಬಳಿ ಇದ್ದ 2.11 ಕೋಟಿ ರೂ ಲಪಟಾಯಿಸಿ ಪರಾರಿಯಾಗಿದ್ದಾರೆ.
ಘಟನೆಯ ದಿನದಂದು ಪೋಲಿಸ್ ದೂರು ನೀಡಿರಲಿಲ್ಲ. ಅ 5. ರಂದು ನಿಲೇಶ ಪಾಂಡುರಂಗ ನಾಯ್ಕ್ ಪೋಲಿಸರಿಗೆ ಈ ಸಂಬಂಧ ದೂರು ನೀಡಿದ್ದಾರೆ. ದರೋಡೆಕೋರರು ಇವರನ್ನು ಹಿಂಬಾಲಿಸಿ ಬಂದಿದ್ದು ಅನುಭವಸ್ತ ದರೋಡೆಕೋರರೆ ಇರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಮತ್ತು ಸ್ಥಾನಿಕವಾಗಿಯೂ ದರೋಡೆಕೋರರಿಗೆ ಶಾಮಿಲಾಗಿ ಸಹಾಯ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ಇನ್ನಷ್ಟು ವಿವರಗಳು ತಿಳಿದುಬರಬೇಕಿದೆ. ಪ್ರಕರಣ ಭೇಧಿಸಲು ಸಿಒಐ ಸುರೇಶ ಯೆಳ್ಳೂರ ನೇತ್ರತ್ವದ ತಂಡ ಕಾರ್ಯಾಚರಣೆಗೆ ಇಳಿದಿದೆ.
ಇದನ್ನೂ ಓದಿ :ಉಚ್ಚಿಲ ದಸರಾ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ