ಕಾರವಾರದಲ್ಲಿ ಶೂನ್ಯ ನೆರಳಿನ ದಿನ


Team Udayavani, Apr 30, 2021, 5:30 PM IST

uyutfff

ಕಾರವಾರ : ಶುಕ್ರವಾರದಂದು ಕಾರವಾರದಲ್ಲಿಮಧ್ಯಾಹ್ನ 12.31ಕ್ಕೆ ಸೂರ್ಯನು ಶಿರೋಬಿಂದುವಿನ ಮೇಲೆ ಹಾದು ಹೋದ ಪರಿಣಾಮ ಸುಮಾರು 1 ನಿಮಿಷದ ಅವಧಿಗೆ ನೆರಳು ಕನಿಷ್ಟ ಪ್ರಮಾಣದಲ್ಲಿ ಗೋಚರಿಸಿದೆ. ಆದ್ದರಿಂದ ಇಂತಹ ದಿನವನ್ನು ಶೂನ್ಯ ನೆರಳಿನ ದಿನ ಎಂದುಕರೆಯುತ್ತಾರೆ.

ಈ ವಿದ್ಯಮಾನವನ್ನು ಉಪ-ಪ್ರಾದೇಶಿಕ ವಿಜ್ಞಾನಕೇಂದ್ರ, ಕಾರವಾರದಲ್ಲಿ ವೀಕ್ಷಿಸಲಾಯಿತು.ಆದರೆ ಲಾಕ್‌ಡೌನ್ ನಿಮಿತ್ತ ಶಾಲಾ ವಿದ್ಯಾರ್ಥಿಗಳು ಮನೆಗಳಲ್ಲೇ ಇದ್ದು ಇದನ್ನು ಪ್ರಯೋಗದ ಮೂಲಕ ಕಂಡುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿತ್ತು.

ಸಾಮಾನ್ಯರು ಊಹಿಸುವಂತೆ ಸೂರ್ಯ ಪ್ರತಿ ದಿನದ ಮಧ್ಯಾಹ್ನ ಶಿರೋಬಿಂದುವಿನ ಮೇಲೆ ಇರುವುದಿಲ್ಲ. ಯಾವುದೇ ಮಧ್ಯಾಹ್ನ ನೆರಳನ್ನು ನೋಡಿ ಇದನ್ನು ಪರಿಶೀಲಿಸಬಹುದು. ಸೂರ್ಯ ಗರಿಷ್ಠ ಎತ್ತರ ತಲುಪಿದಾಗ ಅದು ಶಿರೋಬಿಂದುವಿನ ಉತ್ತರಕ್ಕೆ ಅಥವಾ ದಕ್ಷಿಣಕ್ಕೆ ಇರುತ್ತದೆ.

ಭೂಮಿಯ ಆವರ್ತನೆಯ ಅಕ್ಷ ಅದರ ಕಕ್ಷಾತಲಕ್ಕೆ 23.5 ಡಿಗ್ರಿ ಓರೆಯಾಗಿರುವುದೇ ಇದಕ್ಕೆ ಕಾರಣ. ಋತುಮಾನಗಳಿಗೂ ಇದೇ ಕಾರಣ. ಡಿಸೆಂಬರ್ 21 ರಂದು ದಕ್ಷಿಣದ ಗರಿಷ್ಠವನ್ನುತಲುಪಿ ಉತ್ತರಕ್ಕೆ ಹೊರಳುವುದರಿಂದ ಆ ಘಟನೆಗೆ ಉತ್ತರಾಯಣ ಎಂದು ಹೆಸರು. ಆ ಮಧ್ಯಾಹ್ನದ ನೆರಳು ಯಾವುದೇ ಮಧ್ಯಾಹ್ನದ ನೆರಳಿಗೆ ಹೋಲಿಸಿದರೆ ಗರಿಷ್ಠ. ಜೂನ್ 21 ರಂದು ಉತ್ತರದ ಗರಿಷ್ಠ ತಲುಪಿ ದಕ್ಷಿಣಕ್ಕೆ ಹೊರಳುವುದರಿಂದ ಆ ಘಟನೆಗೆ ದಕ್ಷಿಣಾಯನಎಂದು ಹೆಸರು. ಆ ಮಧ್ಯಾಹ್ನದ ನೆರಳು ಕನಿಷ್ಠ. ಸೂರ್ಯನ ಈ ಉತ್ತರ- ದಕ್ಷಿಣ ಚಲನೆಗಳನ್ನು ಉತ್ತರಾಯಣ ಮತ್ತು ದಕ್ಷಿಣಾಯನ ಎಂದೇ ಕರೆಯುತ್ತಾರೆ.

ಕರ್ಕಾಟಕ ಹಾಗೂ ಮಕರ ಸಂಕ್ರಾಂತ ವೃತ್ತಗಳ ನಡುವೆ ಇರುವ ಸ್ಥಳಗಳಲ್ಲಿ ವರ್ಷದ ಎರಡು ನಿರ್ದಿಷ್ಟ ದಿನಗಳಲ್ಲಿ ಸೂರ್ಯ ಶಿರೀ ಬಿಂದುವಿನ ಮೇಲೆ ಹಾದು ಹೋಗುವ ಕಾರಣ ಆ ದಿನಗಳಲ್ಲಿ ಮಧ್ಯಾಹ್ನದ ನೆರಳು ಇಲ್ಲದಾಗುತ್ತದೆ. ಇದೇ ಶೂನ್ಯ ನೆರಳಿನ ದಿನದತತ್ವ ಎಂದು ವಿಜ್ಞಾನ ಕೇಂದ್ರದ ಸಹಾಯಕ ದೇಶಪಾಂಡೆ ವಿವರಿಸಿದರು‌.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.