ಜೋಯಿಡಾ: ಸೇತುವೆ ಕಾರ್ಯ ಪೂರ್ಣಗೊಂಡರೂ ಇಲ್ಲ ಬಸ್‌!


Team Udayavani, Mar 6, 2024, 6:06 PM IST

ಜೋಯಿಡಾ: ಸೇತುವೆ ಕಾರ್ಯ ಪೂರ್ಣಗೊಂಡರೂ ಇಲ್ಲ ಬಸ್‌!

ಉದಯವಾಣಿ ಸಮಾಚಾರ
ಜೋಯಿಡಾ: ತಾಲೂಕಿನ ಅವರ್ಲಿ ಸೇತುವೆ ಹಾಳಾದ ಕಾರಣ ನಂದಿಗದ್ದಾ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳಿಗೆ ಕಳೆದ 6 ತಿಂಗಳುಗಳಿಂದ ಬಸ್‌ ವ್ಯವಸ್ಥೆ ಇಲ್ಲದೆ ಇಲ್ಲಿನ ಸಾರ್ವಜನಿಕರು ಪರದಾಡಿದ್ದರು ಈಗ ಸೇತುವೆ ಕಾಮಗಾರಿ ಮುಗಿದಿದ್ದರೂ ಬಸ್‌
ಓಡಾಟ ಆರಂಭಗೊಳ್ಳದೆ ಸಂಚಾರದ ಸಮಸ್ಯೆ ಮುಂದುವರಿದಿದೆ.

ಅವರ್ಲಿ ಸೇತುವೆ ಕಾಮಗಾರಿ ಮುಗಿದಿದ್ದು ನೂತನ ಸೇತುವೆ ಮೆಲೆ ಎಲ್ಲಾ ಖಾಸಗಿ ವಾಹನಗಳು ಸಂಚರಿಸುತ್ತಿವೆ. ಅಲ್ಲದೇ ಒಂದು
ವಾರದಿಂದ ಉಳವಿ-ಬೈಲಹೊಂಗಲ ಬಸ್‌ ಕೂಡಾ ಸಂಚರಿಸುತ್ತಿದೆ. ಆದರೆ ದಾಂಡೇಲಿ ಡಿಪೋದ ಗುಂದ-ತಮ್ಮಣ್ಣಗಿ ಬಸ್‌ ಹಾಗೂ ಉಳವಿ-ಗುಂದ-ಶಿರಸಿ ಬಸ್‌ ಯಾಕೆ ಸಂಚಾರ ಆರಂಭಿಸಿಲ್ಲ ಎಂಬುದು ಜನರ ಪ್ರಶ್ನೆಯಾಗಿದೆ.

ಎಲ್ಲಾ ವಾಹನಗಳ ಸಂಚಾರಕ್ಕೆ ಸೇತುವೆ ಮುಕ್ತವಾಗಿರುವಾಗ ಈ ಭಾಗದ ಬಸ್‌ಗಳ ಸಂಚಾರ ಮಾತ್ರ ಸ್ಥಗಿತವಾಗಿರುವುದು ಯಾಕೆ
ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಭಾಗದ ಜನ ಸಾರಿಗೆ ಬಸ್‌ ಇಲ್ಲದೆ ಈಗಾಗಲೇ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗ ಸೇತುವೆ ಪೂರ್ಣಗೊಂಡ ನಂತರವೂ ಸಮಸ್ಯೆ ಮಾತ್ರ ಹಾಗೇ ಮುಂದುವರಿದಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಬೇಕಿದೆ.

ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಉಳವಿ ಜಾತ್ರೆಗೆ ನೂತನವಾಗಿ ನಿರ್ಮಿಸಿದ ಸೇತುವೆ ಮೇಲೆಯೇ ನೂರಾರು ಟ್ರಾಕ್ಟರ್‌ ಹಾಗೂ ಖಾಸಗಿ ವಾಹನಗಳು ಓಡಾಡಿದೆ. ಆದರೆ ಗುಂದ ಗ್ರಾಮದ ಬಸ್‌ ಸಂಚಾರಕ್ಕೆ ಮಾತ್ರ ಯಾಕೆ ಮೀನಮೇಷ ಎಂಬುದು ಜನರ ಪ್ರಶ್ನೆ. ಸರ್ಕಾರದ ಉಚಿತ ಬಸ್‌ ಯೋಜನೆ ಈ ಭಾಗದ ಮಹಿಳೆಯರಿಗೆ ಮರೀಚಿಕೆಯಾಗಿದೆ. ಅಲ್ಲದೆ ಬಡವರು ಆಸ್ಪತ್ರೆ,
ಕಚೇರಿ ಕೆಲಸಗಳಿಗೆ ತೆರಳಲು, ಸಂತೆ ಸೇರಿದಂತೆ ಇನ್ನೂ ಹಲವು ಕೆಲಸಗಳಿಗೆ ಗ್ರಾಮದಿಂದ ಬೇರೆಡೆ ತೆರಳಲು ಬಸ್‌ ಸಂಚಾರ ಇಲ್ಲದೇ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಬಸ್‌ ಇಲ್ಲದ ಕಾರಣ ಶಾಲಾ ಮಕ್ಕಳು ನಿತ್ಯ ಪರದಾಡುತ್ತಿದ್ದಾರೆ.

ಸೇತುವೆ ಕೆಲಸ ಮುಗಿದು ಎಲ್ಲ ವಾಹನ ಸಂಚಾರ ಆರಂಭಗೊಂಡಿದ್ದರೂ ಸ್ಥಳೀಯ ಬಸ್‌ ಮಾತ್ರ ಸಂಚಾರ ಆರಂಭಿಸದಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಅಧಿಕೃತವಾಗಿ ಪತ್ರ ಕೊಟ್ಟಲಿ ಆ ಕ್ಷಣವೇ ಗುಂದಕ್ಕೆ ಬಸ್‌ ಬಿಡಲಾಗುವುದು ಎಂದು ದಾಂಡೇಲಿ ಡಿಪೋ ಮ್ಯಾನೇಜರ್‌ ಹೇಳುತ್ತಾರೆ. ತಕ್ಷಣ ಬಸ್‌ ಸಂಚಾರ ಆರಂಭಿಸಲು ಅಧಿಕಾರಿಗಳು , ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ.

ಸೇತುವೆ ಕೆಲಸ ಮುಗಿದಿದೆ. ಮಣ್ಣಿನ ರಸ್ತೆಗೆ ಕಾಂಕ್ರೀಟ್‌ ಹಾಕುವುದು ಬಾಕಿ ಉಳಿದಿದೆ. ಸದ್ಯದ ಮಟ್ಟಿಗೆ ಬಸ್‌ ಬಿಡಲು ಯಾವ ತೊಂದರೆ ಇಲ್ಲ. ಕಾಂಕ್ರೀಟ್‌ ಹಾಕುವಾಗ ಒಂದು ವಾರ ಮತ್ತೆ ಬಂದ್‌ ಮಾಡಲಾಗುವುದು. ಈಗ ಬಸ್‌ ಸಂಚಾರಕ್ಕೆ ಯಾವ ಸಮಸ್ಯೆಯೂ ಇಲ್ಲ ನಮ್ಮ ತಕರಾರು ಇಲ್ಲ.
ಶಿವಪ್ರಕಾಶ್‌ , ಎಇಇ ಲೋಕೋಪಯೋಗಿ ಇಲಾಖೆ ಜೋಯಿಡಾ.

ಬಸ್‌ ಇಲ್ಲದೆ ಈ ಭಾಗದ ಜನರಿಗೆ ಸಮಸ್ಯೆಯಾಗಿದೆ ಎಂಬುದು ಗಮನಕ್ಕೆ ಬಂದಿದೆ. ಗುಂದಕ್ಕೆ ಕೂಡಲೇ ಬಸ್‌ ಬಿಡುವಂತೆ
ದಾಂಡೇಲಿ ಡಿಪೋ ಮ್ಯಾನೇಜರ್‌ ಅವರಿಗೆ ಸೂಚಿಸಲಾಗುವುದು.
ಮಂಜುನಾಥ ಮೊನ್ನೋಳಿ ,
ತಹಶೀಲ್ದಾರರ ಜೋಯಿಡಾ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.