ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

ಬಂಥನಾಳ ಶ್ರೀಗಳ ಕನಸು ನನಸಾಗಿಸಿ •ಕಟ್ಟ ಕಡೆ ವ್ಯಕ್ತಿಗೂ ಸಿಗಲಿ ಶಿಕ್ಷಣ

Team Udayavani, May 12, 2019, 4:04 PM IST

11-March-31

ತಾಂಬಾ: ವಾಡೆ ಗ್ರಾಮದಲ್ಲಿ ನಡೆದ ಮಹಾಲಕ್ಷ್ಮೀ ದೇವಾಸ್ಧಾನ ಉದ್ಘಾಟಣೆ ಹಾಗೂ ಕಳಸಾರೋಹಣ ಕಾರ್ಯಕ್ರಮಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ರಾಜು ಕಂಬಾಗಿ ಚಾಲನೆ ನೀಡಿದರು.

ತಾಂಬಾ: ಹಾಲುಮತ ಸಮಾಜದವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ತಿಳಿಸಿದಾಗ ಮಾತ್ರ ನಿಮ್ಮ ಮಕ್ಕಳು ಇನ್ನುಳಿದ ಮಕ್ಕಳಂತೆ ಮುಂದೆ ಬರಲು ಸಾದ್ಯವಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಾಡೆ ಗ್ರಾಮದ ಮಹಾಲಕ್ಷ್ಮೀ ದೇವಾಸ್ಧಾನ ಉದ್ಘಾಟನೆ ಹಾಗೂ ಕಳಸಾರೋಹಣ ನಿಮಿತ್ತ ಹಮ್ಮಿಕೊಂಡಿದ್ದ ಧರ್ಮಸಭೆ ಉದ್ಘಾಟಿಸಿ ಮಾತನಾಡಿದ ಅವರು, ನನ್ನ ರಾಜಕಾರಣದಲ್ಲಿ ಹಾಲುಮತ ಸಮಾಜ ಕೈ ಹಿಡಿದು ಎತ್ತಿದೆ. ಮುಂದೆಯೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರಲಿ ಎಂದರು.

ಶಿರಶ್ಯಾಡ ಮಠದ ಮುರುಘೇಂದ್ರ ಶಿವಾರ್ಚಾರು ಮಾತನಾಡಿ, ಎಲ್ಲರ ಅಂತರಂಗದಲ್ಲೂ ಪರಮಾತ್ಮನಿದ್ದಾನೆ. ಆದರೆ ಜನರು ತಮ್ಮಲ್ಲಿಯೆ ಹುದಗಿರುವ ಆತ್ಮ ಪರಮಾತ್ಮನನ್ನು ಬಿಟ್ಟು ಬೇರೆ ಕಡೆ ದೇವರನ್ನು ಹುಡುಕುವ ಹುಚ್ಚು ಸಾಹಸ ಮಾಡುತ್ತಿದ್ದಾರೆ. ದೇವರು ಹೊರಗಡೆ ಇಲ್ಲ, ಎಲ್ಲರ ಒಳಗಡೆ ಇರುವ ದೇವರನ್ನು ಜ್ಞಾನಿಸಿ ಜಪಿಸಬೇಕು, ಅಂದಾಗ ಬದುಕು ಸಾರ್ಧಕವಾಗುತ್ತದೆ ಎಂದರು.

ಪ್ರತ್ತಿಯೊಬ್ಬರು ಬದುಕು ಪಾವನಗೊಳಿಸಿಕೊಳ್ಳಲು ಇಂತಹ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂಥನಾಳದ ವೃಷಭಲಿಂಗ ಮಹಾ ಶಿವಯೋಗಿಗಳ ಆಶೀರ್ವಚನ ಕೇಳಿ ಮನದ ಮೈಲಿಗೆ ತೊಳೆದುಕೊಳ್ಳಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ವೃಷಭಲಿಂಗ ಮಾಹಾಶಿವಯೋಗಿಗಳು ಆಶೀರ್ವಚನ ನೀಡಿ, ಮನುಷ್ಯ ತಾನು ಬದುಕಿ ಇತರರನ್ನು ಬದುಕಿಸುವುದೆ ನಿಜವಾದ ಜೀವನ. ಬದುಕಿನ ಉದ್ದಕ್ಕೂ ಸತ್ಕಾರ ಮಾನವೀಯತೆ ಬಿತ್ತಬೇಕು. ಬಂಥನಾಳದ ಸಂಗನ ಬಸವ ಮಹಾಶಿವಯೋಗಿಗಳು ಕಂಡ ಕನಸು ನನಸಾಗಬೇಕಾದರೆ ಸಮಾಜದ ಕಟ್ಟ ಕಡೆ ವ್ಯಕ್ತಿಯೂ ಶಿಕ್ಷಣ ಪಡೆದುಕೊಳ್ಳಬೇಕು ಎಂದರು.

ಹಾಲುಮತ ಸಮಾಜ ಯುವ ನಾಯಕ ಮೋಹನ ಮೇಟಿ ಮಾತನಾಡಿ, ದಾನ ಧರ್ಮ ಪರೋಪಕಾರ ನಮ್ಮ ಉಸಿರಾಗಬೇಕು. ಮಠ ಮಾನ್ಯಗಳು ಮಾಡುತ್ತಿರುವ ಕಾರ್ಯಗಳು ನಿಜಕ್ಕೂ ಶ್ಲಾಘನಿಯ ಎಂದರು.

ಮಕಣಾಪುರದ ಸೋಮೇಶ್ವರ ಮಾಹಾಸ್ವಾಮಿಗಳು, ಸರಸ್ವತಿ ಈಟಿ ಮಾತನಾಡಿದರು. ಜಿಪಂ ಸದಸ್ಯ ಸುಭಾಷ್‌ ಕಲ್ಲೂರ, ಗ್ರಾಪಂ ಅಧ್ಯಕ್ಷ ಗುರುಸಂಗಪ್ಪ ಬಾಗಲಕೋಟ, ಅಣ್ಣಾರಾಯ ಅವಟಿ, ಷಣ್ಮಖ ಪೂಜಾರಿ, ಹಿರಗಪ್ಪ ನಾಯ್ಕೋಡಿ, ಬಸವರಾಜ ಭೈರೋಡಗಿ, ಅಯ್ಯಪ್ಪ ಅಂಕಲಗಿ, ಕುಲಪ್ಪ ಭಜಂತ್ರಿ, ರಮಾನಂದ ಕುಲಕರ್ಣಿ, ರಾಜುಗೌಡ ಪಾಟೀಲ, ರವಿ ಹತರಕಿ ಸೇರಿದಂತೆ ಇತರರು ಇದ್ದರು.

ಸತೀಶ ಅಡವಿ ಸ್ವಾಗತಿಸಿದರು. ಕೆ.ಎನ್‌. ಪಾಟೀಲ ನಿರೂಪಿಸಿದರು. ಭಾಸ್ಕರ್‌ ದೊಡಮನಿ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.