ಭೀಮಾ ತೀರಕ್ಕೆ ಸಂಸದ ಡಾ| ಜಾಧವ ಭೇಟಿ-ಪರಿಶೀಲನೆ
Team Udayavani, Aug 11, 2019, 3:05 PM IST
ವಾಡಿ: ಪ್ರವಾಹ ಭೀತಿ ಎದುರಿಸುತ್ತಿರುವ ಚಾಮನೂರು ಗ್ರಾಮಕ್ಕೆ ಭೇಟಿ ನೀಡಿದ ಸಂಸದ ಡಾ| ಉಮೇಶ ಜಾಧವ, ನಿರ್ಮಾಣ ಹಂತದಲ್ಲಿರುವ ಚಾಮನೂರ-ನರಿಬೋಳ ಭೀಮಾ ಸೇತುವೆ ಪರಿಸ್ಥಿತಿ ಅವಲೋಕಿಸಿದರು. ಮಾಜಿ ಶಾಸಕ ವಾಲ್ಮೀಕಿ ನಾಯಕ ಇದ್ದರು.
ವಾಡಿ: ಕಳೆದ ಐದಾರು ದಿನಗಳಿಂದ ದಡ ಸೋಸಿ ಧುಮ್ಮಿಕ್ಕುತ್ತಿರುವ ಚಿತ್ತಾಪುರ ತಾಲೂಕು ವ್ಯಾಪ್ತಿಯ ಭೀಮಾ ತೀರದ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿದ ಸಂಸದ ಡಾ| ಉಮೇಶ ಜಾಧವ, ಜನರಕ್ಷಣೆಗೆ ಸಿದ್ಧರಿರುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸನ್ನತಿ ಭೀಮಾ ಬ್ಯಾರೇಜ್ ಬಳಿಯ ಶ್ರೀ ಚಂದ್ರಲಾ ಪರಮೇಶ್ವರಿ ದೇವಸ್ಥಾನ ಹತ್ತಿರ ಬೋರ್ಗೆರೆಯುತ್ತಿರುವ ಭೀಮೆಗೆ ಬಾಗೀನ ಅರ್ಪಿಸಿದ ಡಾ| ಜಾಧವ, ಅಪಾಯದ ಅಂಚಿನಲ್ಲಿರುವ ಕಡಬೂರ, ಕೊಲ್ಲೂರು, ಚಾಮನೂರು ಗ್ರಾಮಗಳಿಗೆ ಭೇಟಿ ನೀಡುವ ಮೂಲಕ ಎದುರಾಗಲಿರುವ ಪ್ರವಾಹದ ಸ್ಥಿತಿಗತಿಯನ್ನು ಅಧಿಕಾರಿಗಳ ಸಮಕ್ಷಮ ವೀಕ್ಷಿಸಿದರು.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ ಒಡಲು ಕಂಡು ಗ್ರಾಮಸ್ಥರು ಜಾಗೃತಿಯಿಂದ ಇರುವಂತೆ ಕೋರಿದರು. ಯಾವುದೇ ರೀತಿಯ ತೊಂದರೆ ಉಂಟಾದರೆ ತಕ್ಷಣಕ್ಕೆ ಸಂಬಂಧಿಸಿದ ತಾಲೂಕು ಅಧಿಕಾರಿಗಳನ್ನಾಗಲಿ ಅಥವಾ ನೇರವಾಗಿ ನನ್ನನ್ನು ಸಂಪರ್ಕಿಸಿದರೂ ತೊಂದರೆಯಿಲ್ಲ ಎಂದು ಹೇಳಿದರು.
ಚಿತ್ತಾಪುರ ತಾಲೂಕಿನ ಭೀಮಾನದಿ ದಂಡೆಯ ಗ್ರಾಮಗಳಿಗೆ ಯಾವೂದೇ ರೀತಿಯ ಅಪಾಯ ಎದುರಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಹೆಚ್ಚು ಆತಂಕವಿರುವ ಗ್ರಾಮಗಳಿಗೆ ದೋಣಿಗಳನ್ನು ಒದಗಿಸಲಾಗುವುದು. ಮಹಾರಾಷ್ಟ್ರದಲ್ಲಿ ಆದ ಮಳೆ ಕಾರಣಕ್ಕೆ ಕರ್ನಾಟಕ ಜಲಪ್ರಳಯದ ಭೀಕರ ಸ್ಥಿತಿಗೆ ತುತ್ತಾಗಿದೆ. ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆಗೆ ರಾಜ್ಯ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ 100 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಜಿಲ್ಲೆಗಳ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಆದೇಶ ನೀಡುವ ಮೂಲಕ ಜನರ ನೆರವಿಗೆ ಶ್ರಮಿಸುತ್ತಿದ್ದಾರೆ ಎಂದರು. ಮಾಜಿ ಶಾಸಕ ವಾಲ್ಮೀಕಿ ನಾಯಕ, ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಜಿಲ್ಲಾ ಮುಖಂಡ ಶರಣಪ್ಪ ತಳವಾರ, ಬಿಜೆಪಿ ಅಧ್ಯಕ್ಷ ಬಸವರಾಜ ಪಂಚಾಳ, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ತಾಲೂಕಿನ ಮುಖಂಡರಾದ ಸಿದ್ಧಣ್ಣ ಕಲಶೆಟ್ಟಿ, ತಮ್ಮಣ್ಣ ಡಿಗ್ಗಿ, ಶರಣಬಸಪ್ಪ ಪಸಾರ, ಮಲ್ಲಿಕಾರ್ಜುನ ಮಾಲಗತ್ತಿ ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ