ತಂಪು ಬಾಟಲಿ ನೀರಿನ ಹೆಸರಲ್ಲಿ ಸುಲಿಗೆ ದಂಧೆ


Team Udayavani, May 16, 2019, 10:08 AM IST

Udayavani Kannada Newspaper

ವಾಡಿ: ಜಲ ಕ್ರಾಂತಿಯ ಕಾಲವೇ ಬೇಸಿಗೆಯಾದರೆ, ಜನರ ಬಾಯಾರಿಕೆಯೇ ಬಾಟಲಿ ನೀರಿನ ಕಂಪನಿಗಳಿಗೆ ಬಂಡವಾಳ. ಅಂತರ್ಜಲ ಬತ್ತಿದ್ದರಿಂದ ಉಂಟಾದ ನೀರಿನ ಬವಣೆ ಸಂದರ್ಭವನ್ನೇ ಬಳಸಿಕೊಳ್ಳುತ್ತಿರುವ ನೀರು ಮಾರಾಟಗಾರರು, ದುಪ್ಪಟ್ಟು ದರ ವಸೂಲಿ ಮಾಡುವ ಮೂಲಕ ಗ್ರಾಹಕರ ಸುಲುಗೆಗೆ ನಿಂತಿದ್ದಾರೆ.

ಕಾಲ ಬದಲಾಗುವುದನ್ನೇ ಕಾಯುತ್ತ ಕುಳಿತಿದ್ದ ನೀರು ದಂಧೆಕೋರರು, ಶುದ್ಧ ಮಿನಿರಲ್ ವಾಟರ್‌ ಹೆಸರಿನಲ್ಲಿ ಬಾಟಲಿಗೆ ನೀರು ತುಂಬಿ ಪಟ್ಟಣದ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿನ ಫೆಬ್ರುವರಿ, ಮಾರ್ಚ್‌, ಏಪ್ರಿಲ್ ಹಾಗೂ ಮೇ ತಿಂಗಳು ಪುರ್ತಿ ಮಾರುಕಟ್ಟೆಯಲ್ಲಿ ಅಸಲಿ ಕಂಪನಿಗಳ ಜತೆಗೆ ನಕಲಿ ನೀರಿನ ಕಂಪನಿಗಳ ನೀರು ಜನರ ಗಂಟಲಿಗೆ ಇಳಿದಿದೆ. 10ರೂ.ಗೆ (ಒಂದು ಲೀಟರ್‌) ಸಿಗುವ ಬಾಟಲಿ ನೀರು 20ರೂ.ಗೆ ಮತ್ತು 15ರೂ.ಗೆ ದೊರೆಯುವ ನೀರು 20ರೂ.ಗೆ ಮಾರಾಟವಾಗುತ್ತಿವೆ. ಎಳೆ ನೀರಿನ ಸ್ವಾದ ನೀಡುವ ಮಿನಿರಲ್ ವಾಟರ್‌ಗಳು ಒಂದೆಡೆಯಾದರೆ, ಗಟಾರದ ವಾಸನೆ ಬೀರುವ ನಕಲಿ ಕಂಪನಿಗಳ ಬಾಟಲಿಯ ಅಶುದ್ಧ ನೀರು ಮತ್ತೂಂದೆಡೆ. ಹೀಗೆ ಜನರ ಬಾಯಾರಿಕೆಯನ್ನೇ ಬಂಡವಾಳ ಮಾಡಿಕೊಂಡಿರುವ ಸುಲಿಗೆ ಕಂಪನಿಗಳು, ರಾಜಾರೋಷವಾಗಿ ಗ್ರಾಹಕರಿಗೆ ಮೋಸ ಮಾಡುತ್ತಿವೆ.

ನಗರ ಮತ್ತು ಪಟ್ಟಣಗಳ ಬೇಕರಿಗಳಲ್ಲಿ, ಹೋಟೆಲ್, ಖಾನಾವಳಿಗಳಲ್ಲಿ ಮಾತ್ರ ಲಭ್ಯವಿರುತ್ತಿದ್ದ ತಂಪು ನೀರಿನ ಬಾಟಲಿಗಳು, ಈಗ ಕಿರಾಣಿ ಅಂಗಡಿ, ಮೊಬೈಲ್ ರಿಚಾರ್ಜ್‌ ಶಾಪ್‌, ಸೈಕಲ್ ಪಂಕ್ಚರ್‌ ಅಂಗಡಿ, ಗುಟುಕಾ, ಪಾನ್‌ ಬೀಡಾ ಅಂಗಡಿಗಳಲ್ಲೂ ಮಾರಾಟವಾಗುತ್ತಿವೆ. ನೀರಿನ ವ್ಯಾಪಾರವು ಹಲವರಿಗೆ ಸ್ವಯಂ ಉದ್ಯೋಗ ಒದಗಿಸಿ ಉಪಜೀವನಕ್ಕೆ ದಾರಿಯಾಗಿದ್ದು ಖುಷಿಯ ಸಮಾಚಾರವೇ ಸರಿ. ಆದರೆ, ಕಲುಷಿತ ನೀರು ಬಾಟಲಿಗೆ ಮತ್ತು ಪ್ಲ್ಯಾಸ್ಟಿಕ್‌ ಪ್ಯಾಕೆಟ್‌ಗಳಿಗೆ ತುಂಬಿ ಸುಲಿಗೆ ದಂಧೆಗಿಳಿದಿರುವ ವಂಚಕರ ದೊಡ್ಡ ಜಾಲ ಆಹಾರ ಇಲಾಖೆ ಅಧಿಕಾರಿಗಳ ಬಲೆಗೆ ಬೀಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಅತ್ತ ನೀರೂ ನಕಲಿ, ಇತ್ತ ದರವೂ ದುಪ್ಪಟ್ಟು. ಇದರ ಪೆಟ್ಟು ನೇರವಾಗಿ ಗ್ರಾಹಕರ ಮೇಲೆ ಬೀಳುತ್ತಿದೆ.

ಸುಡುವ ಬಿಸಿಲ ತಾಪ ತಾಳಲಾಗದೆ ಪದೇಪದೆ ಬಾಯಾರಿಕೆ ಉಂಟಾಗಿ ಒಡಲು ತಂಪು ನೀರು ಬಯಸುವುದು ಸಹಜ. ಹೀಗಾಗಿ ಜನರು ತಂಪು ನೀರಿನ ಬಾಟಲಿ ಖರೀದಿಸುವುದು ಅನಿವಾರ್ಯವಾಗಿದೆ. ನೂರಾರು ಕಂಪನಿಗಳ ಹೆಸರಿನಲ್ಲಿ ಬಾಟಲಿ ನೀರು ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿದ್ದು, ಶುದ್ಧ ನೀರಿನ ಮಧ್ಯೆ ಅಶುದ್ಧ ನೀರು ಸರಬರಾಜು ಸದ್ದಿಲ್ಲದೆ ಸಾಗಿದೆ. ಬಾಟಲಿಗಳ ಮೇಲೆ ಮುದ್ರಿತವಾದ ದರಕ್ಕೂ ಗ್ರಾಹಕರಿಂದ ವಸೂಲಿ ಮಾಡಲಾಗುತ್ತಿರುವ ಹಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಕಂಪನಿಗಳ ಮೋಸ, ವಂಚನೆ ಹಾಗೂ ಸುಲಿಗೆಗೆ ಕಡಿವಾಣ ಹಾಕಬೇಕಿರುವ ಸಂಬಂಧಿತ ಅಧಿಕಾರಿಗಳು ಮೌನ ವಹಿಸಿರುವುದು ಗ್ರಾಹಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.