ಬಿಸಿಯೂಟ-ಅಂಗನವಾಡಿ ಕೋಣೆ ಬಿರುಕು

•ಉರ್ದು ವಿಷಯ ಬೋಧಕರೇ ಇಲ್ಲ•ಆಹಾರ ಪದಾರ್ಥ ಸಂರಕ್ಷಣೆ ಸವಾಲು

Team Udayavani, Aug 26, 2019, 10:14 AM IST

26-Agust-3

ಶಾಲೆಯ ಬಿಸಿಯೂಟ ಹಾಗೂ ಅಂಗನವಾಡಿ ಕೇಂದ್ರವೊಂದು ಬಿರುಕು ಬಿಟ್ಟಿದೆ

ಮಡಿವಾಳಪ್ಪ ಹೇರೂರ
ವಾಡಿ:
ಅಲ್ಪಸಂಖ್ಯಾತರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ತೆರೆಯಲಾದ ಈ ಗ್ರಾಮದ ಸರಕಾರಿ ಉರ್ದು ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗೆ ಉರ್ದು ವಿಷಯ ಬೋಧಕರನ್ನು ನೇಮಿಸದೇ ಶಿಕ್ಷಣ ಇಲಾಖೆ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಕನ್ನಡ ವಿಷಯ ಬೋಧಕರ ಹುದ್ದೆಯೂ ಇಲ್ಲಿ ಖಾಲಿಯಿದ್ದು, ಮಕ್ಕಳ ಪಠ್ಯ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.

ಇಂಗಳಗಿ ಗ್ರಾಪಂ ವ್ಯಾಪ್ತಿಯ ಕುಂದನೂರು ಗ್ರಾಮದ ಸರಕಾರಿ ಉರ್ದು ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಸ್ಲಿಂ ಸಮುದಾಯದ ಮಕ್ಕಳಿಗೆ ಒಂದರಿಂದ 7ನೇ ತರಗತಿ ವರೆಗೆ ಶಿಕ್ಷಣ ಬೋಧಿಸಲಾಗುತ್ತಿದ್ದು, 59 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮೂವರು ಶಿಕ್ಷಕರು ಮಾತ್ರ ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು ನಾಲ್ಕು ತರಗತಿ ಕೋಣೆಗಳಿದ್ದು, ಶಾಲೆ ಮುಂಭಾಗದಲ್ಲಿ ಬಿರುಕುಬಿಟ್ಟು ಶಿಥಿಲಗೊಂಡ ಎರಡು ಕೋಣೆಗಳಲ್ಲಿ ಒಂದೆಡೆ ಅಲ್ಪಸಂಖ್ಯಾತರ ಮಕ್ಕಳಿಗಾಗಿ ಬಿಸಿಯೂಟ ಬೇಯಿಸಲಾಗುತ್ತಿದ್ದರೆ, ಇನ್ನೊಂದರಲ್ಲಿ ಪೌಷ್ಟಿಕ ಆಹಾರ ನೀಡುವ ಅಂಗನವಾಡಿ ಕೇಂದ್ರ-1 ಭಯದ ನೆರಳಿನಲ್ಲಿ ಮುನ್ನಡೆಯುತ್ತಿದೆ. ಇಲಿ ಹೆಗ್ಗಣಗಳ ಕಾಟಕ್ಕೆ ಅಡುಗೆ ಸಿಬ್ಬಂದಿ ಬೇಸತ್ತಿದ್ದು, ಊಟದ ಪದಾರ್ಥಗಳ ಸಂರಕ್ಷಣೆ ದೊಡ್ಡ ಸವಾಲಾಗಿದೆ. ಕುಸಿದು ಬೀಳುವ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ಜೀವ ಒತ್ತೆಯಿಟ್ಟು ಮಕ್ಕಳಿಗೆ ಅಡುಗೆ ಸಿದ್ಧಪಡಿಸುತ್ತೇವೆ. ನಮ್ಮ ಕಷ್ಟ ಯಾರೂ ಕೇಳುತ್ತಿಲ್ಲ ಎನ್ನುತ್ತಾರೆ ಬಿಸಿಯೂಟ ಮತ್ತು ಅಂಗನವಾಡಿ ಅಡುಗೆ ಸಹಾಯಕ ಸಿಬ್ಬಂದಿ.

ಹಲವು ಸಮಸ್ಯೆಗಳ ಮಧ್ಯೆ ಅಕ್ಷರಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು, ಉರ್ದು ಮತ್ತು ಕನ್ನಡ ಬೋಧಕರಿಗಾಗಿ ಕಾಯ್ದು ಕುಳಿತಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನ ತರಗತಿಗಳು ಶುರುವಾಗಿ ಮೂರು ತಿಂಗಳು ಕಳೆದಿದ್ದು, ಅಲ್ಪಸಂಖ್ಯಾತರೇ ಹೆಚ್ಚಿರುವ ಕುಂದನೂರಿನ ಈ ಉರ್ದು ಶಾಲೆಗೆ 4ನೇ ತರಗತಿಯ ಕನ್ನಡ ಮತ್ತು 5ನೇ ತರಗತಿಯ ಇಂಗ್ಲಿಷ್‌ ವಿಷಯದ ಪಠ್ಯಪುಸ್ತಕ ವಿತರಣೆಯಾಗಿಲ್ಲ. ಶೌಚಾಲಯ ಸೌಲಭ್ಯವಿದ್ದು, ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಮಾಡಲಾಗಿಲ್ಲ. ಕಾರಣ ಮಕ್ಕಳು ಕಲುಷಿತ ನೀರು ಕುಡಿದು ಅನಾರೋಗ್ಯಕ್ಕೀಡಾಗುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಗತ್ಯ ಪಠ್ಯಪುಸ್ತಕಗಳಿಗಾಗಿ ಮತ್ತು ಶಿಕ್ಷಕರ ಕೊರತೆ ಕುರಿತು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನ ಸೆಳೆಯಲಾಗಿದೆ. ಶಿಥಿಲಗೊಂಡ ಬಿಸಿಯೂಟ ಕೋಣೆ ಯಾವಾಗ ಮುಗುಚಿ ಬೀಳುತ್ತದೆಯೋ ಗೊತ್ತಿಲ್ಲ. ಹೊಸ ಕಟ್ಟಡದ ವ್ಯವಸ್ಥೆಗಾಗಿ ಮನವಿ ಸಲ್ಲಿಸಲಾಗಿದೆ ಎಂದು ಶಾಲೆ ಮುಖ್ಯಶಿಕ್ಷಕ ಅಫ್ಸರ್‌ಮಿಯ್ನಾ ತಿಳಿಸಿದ್ದಾರೆ. ಅಗತ್ಯ ಪಠ್ಯಪುಸ್ತಕ ವಿತರಿಸಿ, ಖಾಲಿ ಇರುವ ಶಿಕ್ಷಕರ ಸ್ಥಾನಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.