ರೊಜ್ಜು ನೀರಲ್ಲಿ ಪುಟಾಣಿ ಮಕ್ಕಳ ಏಳು ಬೀಳು!

ವಾಹನಗಳ ವೇಗಕ್ಕೆ ರಾಡಿ ಸಿಡಿದು ಸಮವಸ್ತ್ರ ಕೊಳೆ

Team Udayavani, Jul 5, 2019, 9:49 AM IST

05-July-1

ವಾಡಿ: ಸೇಂಟ್ ಅಂಬ್ರೂಸ್‌ ಕಾನ್ವೆಂಟ್ ಶಾಲೆಗೆ ಸಂಪರ್ಕ ಕಲ್ಪಿಸುವ ವಾರ್ಡ್‌ 8ರ ಬಡಾವಣೆಯ ಹದಗೆಟ್ಟ ರಸ್ತೆಯಲ್ಲಿ ಮಕ್ಕಳ ಏಳುಬೀಳಿನ ಗೋಳಾಟ ಮುಂದುವರಿದಿದೆ.

ವಾಡಿ: ಹೆಗಲಿಗೆ ಪಾಟಿಚೀಲ ಹಾಕಿಕೊಂಡು ಪುಟ್ಟ ಪುಟ್ಟ ಹೆಜ್ಜೆಯಿಟ್ಟು ರಸ್ತೆ ಕ್ರಮಿಸಿ ಶಾಲೆ ಸೇರಬೇಕಾದ ಪುಟಾಣಿ ಮಕ್ಕಳು, ಹದಗೆಟ್ಟ ದಾರಿ ದಾಟಲಾಗದೆ ಎಡವಿ ಬಿದ್ದು ಗಾಯಗೊಳ್ಳುತ್ತಿದ್ದಾರೆ. ರೊಜ್ಜು ನೀರಿನ ತ್ಯಾಜ್ಯ ದಾಟಿ ಸಾಗುವಾಗ ವಾಹನಗಳ ವೇಗಕ್ಕೆ ರಾಡಿ ಸಿಡಿದು ಕೊಳೆಯಾಗುವ ಸಮವಸ್ತ್ರ ಮಕ್ಕಳ ಕಣ್ಣೀರಿಗೆ ಕಾರಣವಾಗುತ್ತಿದೆ.

ಪುರಸಭೆ ವ್ಯಾಪ್ತಿಯ ವಾರ್ಡ್‌ 8ರ ಬಡಾವಣೆಯಲ್ಲಿ ಪ್ರತಿಷ್ಠಿತ ಕಾನ್ವೆಂಟ್ ಶಾಲೆಯಿದ್ದು, ಸಾವಿರಾರು ಮಕ್ಕಳು ಈ ಬಡಾವಣೆ ರಸ್ತೆಯನ್ನೇ ಅವಲಂಬಿಸಿದ್ದಾರೆ. ಯಾದಗಿರಿ ಮುಖ್ಯ ರಸ್ತೆಯಿಂದ ಸೇಂಟ್ ಅಂಬ್ರೂಸ್‌ ಕಾನ್ವೆಂಟ್ ಶಾಲೆ ವರೆಗಿನ ರಸ್ತೆ ವಿಪರೀತ ಹದಗೆಟ್ಟಿದ್ದು, ಮಕ್ಕಳು ಏಳುತ್ತಾ ಬೀಳುತ್ತಾ ಶಾಲೆ ಸೇರಬೇಕಾದ ದುಸ್ಥಿತಿ ಎದುರಾಗಿದೆ. ಸಾರ್ವಜನಿಕರ ಗೃಹ ಕಟ್ಟಡ ನಿರ್ಮಾಣದ ಕಲ್ಲು ಮಣ್ಣು ಮರಳಿನ ತ್ಯಾಜ್ಯ ರಸ್ತೆಯನ್ನು ಆವರಿಸಿ ಅವಾಂತರ ಸೃಷ್ಟಿಯಾಗಿದೆ.

ಹರಿಯುವ ಚರಂಡಿಗಳಲ್ಲಿ ತ್ಯಾಜ್ಯ ತುಂಬಿ ರೊಜ್ಜು ನೀರು ರಸ್ತೆಗೆ ಸಾಗಲು ಸಹಕಾರ ನೀಡಿದ್ದರಿಂದ ಗೊಬ್ಬು ವಾಸನೆಯಲ್ಲೇ ಮಕ್ಕಳ ಸಂಚಾರ ಮುಂದುವರಿದಿದೆ. ಶಾಲಾ ವಾಹನಗಳ ಓಡಾಟ ಮತ್ತು ಪೋಷಕರ ಬೈಕ್‌ಗಳ ಟ್ರಾಫಿಕ್‌ ಜಾಮ್‌ ಮಾರ್ಗದಲ್ಲಿ ಪಾದಚಾರಿ ಮಕ್ಕಳ ಗೋಳಾಟ ಹೇಳತೀರದಂತಾಗಿದೆ.

ರಸ್ತೆ ಅಭಿವೃದ್ಧಿ ಮಾಡಬೇಕಾದ ಪುರಸಭೆ ಅಕಾರಿಗಳು ಹಾಗೂ ವಾರ್ಡ್‌ ಸದಸ್ಯೆ ಕಾಂಗ್ರೆಸ್‌ನ ಸುಗಂಧಾ ಜೈಗಂಗಾ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಕೂಡಲೇ ಸಿಸಿ ರಸ್ತೆ ನಿರ್ಮಿಸುವ ಮೂಲಕ ಮಕ್ಕಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳಿಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ.

ಕಾನ್ವೆಂಟ್ ಶಾಲೆಯ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಕ್ಕಳು ಬಳಕೆ ಮಾಡುವ ರಸ್ತೆ ಹದಗೆಟ್ಟಿದ್ದು ನನ್ನ ಗಮನಕ್ಕಿದೆ. ಕಿರಿದಾದ ಚರಂಡಿಗಳು ಇರುವುದರಿಂದ ಪದೇ ಪದೇ ಹೂಳು ತುಂಬಿ ನೀರು ರಸ್ತೆಗೆ ಹರಿಯುತ್ತಿದೆ. ಸಾರ್ವಜನಿಕರ ಸಂಚಾರದ ಹಿತದೃಷ್ಠಿಯಿಂದ ಈ ಮಾರ್ಗದಲ್ಲಿ ಸಿಸಿ ರಸ್ತೆ, ಎರಡೂ ಬದಿಯಲ್ಲಿ ಚರಂಡಿ ಮತ್ತು ಪುಟ್ಪಾತ್‌ ನಿರ್ಮಿಸಲು ಸುಮಾರು 40 ಲಕ್ಷ ರೂ. ವೆಚ್ಚದ ಕ್ರಿಯಾಯೋಜನೆ ಸಿದ್ಧಗೊಳಿಸಿದ್ದೇನೆ. ಟೆಂಡರ್‌ ಪ್ರಕ್ರಿಯೆ ಮುಗಿದ ತಕ್ಷಣ ಕೆಲಸ ಶುರುವಾಗುತ್ತದೆ. ಇದಕ್ಕೂ ಮೊದಲು ರಸ್ತೆಯಲ್ಲಿನ ತೆಗ್ಗುಗಳನ್ನು ಮುಚ್ಚಿ ರೊಜ್ಜು ನೀರು ಸ್ಥಳಾಂತರಿಸುವ ವ್ಯವಸ್ಥೆ ಮಾಡಿಸುತ್ತೇನೆ.
ಸುಗಂಧಾ ನಾಗೇಂದ್ರ ಜೈಗಂಗಾ,
ವಾರ್ಡ್‌ ಸದಸ್ಯೆ

ಟಾಪ್ ನ್ಯೂಸ್

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.