ಸಂತೆ ಸುರಕ್ಷತೆ ಪರಿಶೀಲಿಸಿದ ಪಿಎಸ್‌ಐ

ಕುಡಿಯುವ ನೀರು-ಶೌಚಾಲಯ ವ್ಯವಸ್ಥೆಗೆ ವ್ಯಾಪಾರಸ್ಥರ ಒತ್ತಾಯ

Team Udayavani, Dec 6, 2019, 12:55 PM IST

6-December-9

ವಾಡಿ: ಪಟ್ಟಣದಲ್ಲಿ ನಡೆಯುವ ವಾರದ ಸಂತೆಗೆ ಬರುವ ವಿವಿಧ ಗ್ರಾಮಗಳ ತರಕಾರಿ ವ್ಯಾಪಾರಿಗಳಿಗೆ ಪುರಸಭೆ ಅಧಿಕಾರಿಗಳು ಮತ್ತು ಸ್ಥಳೀಯರು ನೀಡುವ ಕಿರಿಕಿರಿ ಪ್ರಸಂಗ ಮುಂದುವರಿದಿದ್ದು, ಈ ಗುರುವಾರವೂ ವ್ಯಾಪಾರಿಗಳು ಕೂಡಲು ಸ್ಥಳಾವಕಾಶಕ್ಕಾಗಿ ಪರದಾಡಿದ ಘಟನೆ ನಡೆಯಿತು.

ಗುರುವಾರ ಬೆಳಗ್ಗೆ ವಿವಿಧೆಡೆಯಿಂದ ತರಕಾರಿ ಗಂಟುಗಳೊಂದಿಗೆ ಮಾರುಕಟ್ಟೆಗೆ ಬಂದವರು ತಮಗೆ ಅನುಕೂಲವಾದ ಸ್ಥಳದಲ್ಲಿ ಕುಳಿತು ವ್ಯಾಪಾರಕ್ಕೆ ಅಣಿಯಾಗುತ್ತಿದ್ದರು. ಎಂದಿನಂತೆ ಇಲ್ಲಿನ ಭೀಮನಗರ-ಅಂಬೇಡ್ಕರ್‌ ವೃತ್ತ ಮಾರ್ಗದ ರಸ್ತೆ ಬೀದಿಯಲ್ಲಿ ತರಕಾರಿ ವ್ಯಾಪಾರಕ್ಕೆ ಕೂಡಲು ಸ್ಥಳೀಯ ವ್ಯಾಪಾರಿಗಳು ಅವಕಾಶ ನೀಡದೇ ಜಗಳ ನಡೆಸುತ್ತಿದ್ದ ಪ್ರಸಂಗ ಕಂಡುಬಂದಿತು.

ದೊಡ್ಡ ವ್ಯಾಪಾರಿಗಳು ಸ್ಥಳ ಕಬಳಿಸುವ ಮೂಲಕ ಚಿಲ್ಲರೆ ವ್ಯಾಪಾರಿಗಳನ್ನು ಹೆದರಿಸಿ ಓಡಿಸುವ ಕೃತ್ಯಕ್ಕೆ ಮುಂದಾಗಿದ್ದರಿಂದ ಹೊರ ಊರಿನ ತರಕಾರಿ ವರ್ತಕರು ದಿಕ್ಕು ಕಾಣದೆ ಚಿಂತೆಗೀಡಾಗಿದ್ದರು. ಪುರಸಭೆಯ ಪೌರಕಾರ್ಮಿಕರು ಬಂದು ಆಜಾದ್‌ ವೃತ್ತದ ರಸ್ತೆಯಲ್ಲಿ ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದ್ದರಿಂದ ಎಲ್ಲಿಗೆ ಹೋಗಬೇಕು ಎಂಬುದೇ ತಿಳಿಯುತ್ತಿಲ್ಲ. ಪ್ರತಿ ಗುರುವಾರ ಇದೇ ಕಿರಿಕಿರಿಯಾಗಿದೆ ಎಂದು ವ್ಯಾಪಾರಿಗಳು ಮಾಧ್ಯಮದವರ ಎದುರು ಅಳಲು ತೋಡಿಕೊಂಡರು.

ಇದೇ ವೇಳೆ ಸಂತೆ ನಡೆಯುವ ಸ್ಥಳಕ್ಕಾಗಮಿಸಿ ವ್ಯಾಪಾರದ ಬೀದಿಗಳನ್ನು ಪರಿಶೀಲಿಸಿದ ವಾಡಿ ಪೊಲೀಸ್‌ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ಗಂಗಮ್ಮಾ, ಬೀದಿ ಸ್ಥಳಕ್ಕಾಗಿ ಕಾದಾಡುವವರನ್ನು ಎಚ್ಚರಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಇಕ್ಕಟ್ಟಾದ ಗಲ್ಲಿ ರಸ್ತೆಯಲ್ಲಿ ನಡೆಯುತ್ತಿದ್ದ ಸಂತೆ ಮಾರ್ಗದಲ್ಲಿ ಸಂಚರಿಸುವ ಮೂಲಕ ಜೇಬುಗಳ್ಳರು ಮತ್ತು ಮೊಬೈಲ್‌ ಕಳ್ಳರಿಂದ ಎಚ್ಚರದಿಂದಿರಿ. ಕಳ್ಳರು ಕಂಡುಬಂದರೆ ತಕ್ಷಣ ಠಾಣೆಗೆ ಮಾಹಿತಿ ಕೊಡಿ. ಯಾವುದೇ ಕಾರಣಕ್ಕೂ ವ್ಯಾಪಾರಿಗಳು ಸ್ಥಳಾವಕಾಶಕ್ಕಾಗಿ ಕಾದಾಡಬಾರದು.

ಎಲ್ಲರಿಗೂ ವ್ಯಾಪಾರ ಮಾಡಲು ಅವಕಾಶವಿದ್ದು, ಸಹಕರಿಸಿಕೊಂಡು ಹೋಗಿರಿ ಎಂದು ತಾಕೀತು ಮಾಡಿದರು. ವಾರದ ಸಂತೆಯೊಳಗೆ ವಾಹನಗಳು ಬರದಂತೆ ಸುರಕ್ಷತೆ ಒದಗಿಸಲಾಗುವುದು. ಸಂತೆ ನಡೆಯುವ ಕಾರಣಕ್ಕೆ ಪ್ರತಿ ಗುರುವಾರ ಒಂದು ದಿನ ಮಾತ್ರ ಮೌಲಾನಾ ಅಬ್ದುಲ್‌ ಕಲಾಂ ಆಜಾದ್‌ ಚೌಕ್‌
ಮತ್ತು ಅಂಬೇಡ್ಕರ್‌ ವೃತ್ತದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳ ಮಾರ್ಗ ಬಸವೇಶ್ವರ ವೃತ್ತದತ್ತ ಬದಲಿಸುವ ಕುರಿತು ಯೋಚಿಸುವುದಾಗಿ ಪಿಎಸ್‌ಐ ಗಂಗಮ್ಮಾ ಹಣ್ಣು-ತರಕಾರಿ ವ್ಯಾಪಾರಿಗಳಿಗೆ ತಿಳಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪುರಸಭೆ ಸದಸ್ಯ ಬಿಜೆಪಿಯ ಭೀಮಶಾ ಜಿರೊಳ್ಳಿ, ಕೊಲಿ ಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ ಹಾಗೂ ಮಾನವ ಬಂಧುತ್ವ ವೇದಿಕೆಯ ತಾಲೂಕು ಅಧ್ಯಕ್ಷ ಶ್ರವಣಕುಮಾರ ಮೌಸಲಗಿ, ವಾಡಿಯಲ್ಲಿ ವಾರದ ಸಂತೆಗೆ ಸೂಕ್ತವಾದ ಸ್ಥಳವಿಲ್ಲ. ಗಲ್ಲಿ ರಸ್ತೆಗಳ ಬೀದಿಯಲ್ಲಿ ತರಕಾರಿ ಸಂತೆ ನಡೆಯುತ್ತಿದೆ.

ಹೊರಗಿನಿಂದ ಬರುವ ವ್ಯಾಪಾರಿಗಳಿಗೆ ಪುರಸಭೆ ಅಧಿಕಾರಿಗಳು ಕಿರಿಕಿರಿ ನೀಡುತ್ತಿದ್ದಾರೆ. ಕೆಲ ಸ್ಥಳೀಯ ವ್ಯಾಪಾರಿಗಳು ಅಧಿಕಾರಿಗಳ ಮೂಲಕ ಪರ ಊರಿನಿಂದ ಬರುವ ವ್ಯಾಪಾರಿಗಳ ಗಂಟುಮೂಟೆಗಳನ್ನು ಜಪ್ತಿ ಮಾಡಿಕೊಂಡು ಹೋಗುತ್ತಿದ್ದಾರೆ.

ಈ ದೌರ್ಜನ್ಯ ನಿಲ್ಲಬೇಕು. ಸಂತೆಗೆ ಪೊಲೀಸ್‌ ಭದ್ರತೆ ಒದಗಿಸಬೇಕು. ಮಾರುಕಟ್ಟೆಗೆ ವಾಹನಗಳು ಬರದಂತೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಮತ್ತು ಶೌಚಾಲಯದಂತಹ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸುವಲ್ಲಿ ನಿರ್ಲಕ್ಷಿಸಿದರೇ ತರಕಾರಿಯೊಂದಿಗೆ ಬೀದಿಯಲ್ಲಿ ಕುಳಿತು ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.