ಲಕ್ಷ್ಮೀಪುರವಾಡಿಯಲ್ಲಿ ವಾಂತಿ-ಬೇಧಿ

ಕಲುಷಿತ ನೀರು ಸೇವಿಸಿದ್ದರಿಂದ ತೊಂದರೆ •ರಾವೂರ ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ

Team Udayavani, Jul 24, 2019, 10:03 AM IST

24-July-2

ವಾಡಿ: ವಾಂತಿ-ಬೇಧಿಗೆ ತುತ್ತಾದ ಲಕ್ಷ್ಮೀ ಪುರವಾಡಿ ಗ್ರಾಮಸ್ಥರು, ರಾವೂರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಾಡಿ: ರಾವೂರ ಗ್ರಾಪಂ ವ್ಯಾಪ್ತಿಯ ಲಕ್ಷ್ಮೀಪುರವಾಡಿ ಗ್ರಾಮದಲ್ಲಿ ಮತ್ತೆ ವಾಂತಿ ಬೇಧಿ ಪ್ರಕರಣಗಳು ಕಾಣಿಸಿಕೊಂಡಿದ್ದು, ರೋಗಿಗಳು ನರಳುತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಳೆಗಾಲ ಶುರುವಾಗುತ್ತಿದ್ದಂತೆ ಲಕ್ಷ್ಮೀಪುರವಾಡಿ ಗ್ರಾಮಸ್ಥರು ಅನಾರೋಗ್ಯಕ್ಕೀಡಾಗಿ ಹಾಸಿಗೆ ಹಿಡಿಯುವುದು ಸಾಮಾನ್ಯ ಎಂಬಂತಾಗಿದೆ. ಕುಡಿಯುವ ನೀರಿನಲ್ಲಿ ಬದಲಾವಣೆಯಾಗುತ್ತಿದ್ದಂತೆ ವಾಂತಿ-ಬೇಧಿ ಕಾಣಿಸಿಕೊಳ್ಳುತ್ತದೆ. ಗಣಿ ಕಂದಕಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳು ಹೆಚ್ಚಾದಂತೆ ನಿವಾಸಿಗಳು ಚಳಿ ಜ್ವರದಿಂದ ತತ್ತರಿಸುತ್ತಾರೆ. ಸರತಿ ಸಾಲಿನಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ.

ಸದ್ಯ ಕಾಗಿಣಾ ನದಿಯಲ್ಲಿ ನೀರಿಲ್ಲ. ಪರಿಣಾಮ ಗ್ರಾಮಸ್ಥರು ಕೊಳವೆಬಾವಿ ಮತ್ತು ಬಾವಿ ನೀರು ಸೇವಿಸುತ್ತಿದ್ದಾರೆ. ನದಿಯಲ್ಲಿನ ನೀರು ಸರಬರಾಜು ಆದರೂ ಅದು ಕಲುಷಿತವಾದ್ದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕುಡಿಯಲು ನೀರು ಯೋಗ್ಯವಲ್ಲದ ಬಾವಿಯೊಂದು ಗ್ರಾಮದಲ್ಲಿದ್ದು, ನೀರಿನ ಅಭಾವ ಸೃಷ್ಟಿಯಾದಾಗ ಜನರು ಅನಿವಾರ್ಯವಾಗಿ ಬಳಕೆಗೆ ತರುತ್ತಾರೆ. ಕೆಲವೊಮ್ಮೆ ಅದೇ ನೀರು ಕುಡಿದು ದಾಹ ಹಿಂಗಿಸಿಕೊಳ್ಳುತ್ತಾರೆ. ಸದ್ಯ ಗ್ರಾಮಸ್ಥರು ಕಲುಷಿತ ನೀರು ಸೇವಿಸಿ ವಾಂತಿ ಮತ್ತು ಬೇಧಿಯಿಂದ ನರಳುತ್ತಿದ್ದಾರೆ. ರಾವೂರ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಅನೇಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕ ರೋಗಿಗಳ ಹೆಸರನ್ನು ವೈದ್ಯರು ದಾಖಲಿಸಿಕೊಳ್ಳುತ್ತಿಲ್ಲ. ರೋಗದ ಹತೋಟಿಗೆ ಮುಂಜಾಗೃತವಾಗಿ ಕ್ರಮಕೈಗೊಂಡಿಲ್ಲ. ರೋಗದ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ವೈದ್ಯರು ಮಾಡುತ್ತಿದ್ದಾರೆ ಎಂದು ಕರವೇ ಮುಖಂಡ ಯುವರಾಜ ರಾಠೊಡ ಆರೋಪಿಸಿದ್ದಾರೆ.

ಗ್ರಾಮದಲ್ಲಿ ನೈರ್ಮಲ್ಯ ವ್ಯವಸ್ಥೆ ಹದಗೆಟ್ಟಿದ್ದು, ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದೆ. ಗಣಿ ತೆಗ್ಗುಗಳಲ್ಲಿ ತಿಂಗಳುಗಟ್ಟಲೇ ನಿಂತ ನೀರಿನಲ್ಲಿ ಲಾರ್ವಾ ಉಸಿರಾಡುತ್ತಿವೆ. ಪ್ರತಿ ವರ್ಷ ವೈದ್ಯರು ಗ್ರಾಮದಲ್ಲಿ ಬೀಡುಬಿಟ್ಟು ಸಾರ್ವಜನಿಕರ ರಕ್ತ ಪರೀಕ್ಷೆ ಮಾಡುತ್ತಿದ್ದರು. ರೋಗಕ್ಕೆ ತುತ್ತಾದವರಿಗೆ ಸ್ಥಳದಲ್ಲಿಯೇ ಚಿಕಿತ್ಸೆ ಕೊಡುತ್ತಿದ್ದರು. ಆದರೆ ಈಗ ಮತ್ತೆ ರೋಗದ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದರೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಗ್ರಾಪಂ ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡಿಲ್ಲ. ಶುದ್ಧ ನೀರು ಪೂರೈಕೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಒಟ್ಟಾರೆ ಇವರಿಗೆ ನಮ್ಮ ಆರೋಗ್ಯದ ಕಾಳಜಿಯಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ರಾವೂರು ಗ್ರಾಮದಿಂದಲೂ ರೋಗಿಗಳು ಆಸ್ಪತ್ರೆಗೆ ಬರುತ್ತಿರುವುದು ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.