ಹಿಂಗಾರು ಬಿತ್ತನೆಗಿಲ್ಲ ಶೇಂಗಾ ಬೀಜ

ಚಿತ್ತಾಪುರ ತಾಲೂಕಿನಲ್ಲಿ ಒಟ್ಟು 2500 ಕ್ವಿಂಟಲ್‌ ಬೇಡಿಕೆರೈತ ಸಂಪರ್ಕ ಕೇಂದ್ರಗಳು ಖಾಲಿ

Team Udayavani, Oct 17, 2019, 10:59 AM IST

17-October-4

„ಮಡಿವಾಳಪ್ಪ ಹೇರೂರು
ವಾಡಿ:
ಚಿತ್ತಾಪುರ ತಾಲೂಕಿನಲ್ಲಿ ಒಟ್ಟು 2500 ಕ್ವಿಂಟಲ್‌ ಶೇಂಗಾ ಬೀಜಗಳ ಬೇಡಿಕೆಯಿದ್ದು, ಬೀಜಗಳಿಲ್ಲದೆ ರೈತ ಸಂಪರ್ಕ ಕೇಂದ್ರಗಳು ಖಾಲಿ ಬಿದ್ದಿವೆ. ಶೇಂಗಾ ಬೆಳೆಯಲು ಫಲವತ್ತಾದ ಭೂಮಿ ಹೊಂದಿರುವ ನಾಲವಾರ ವ್ಯಾಪ್ತಿಯ ಜಮೀನುಗಳಲ್ಲಿ ಬೆಳೆ ಸಾಲು ಕಾಣದೆ ಭಣಗುಡುತ್ತಿವೆ.

ನಾಲವಾರ ಹೋಬಳಿ ಸೇರಿದಂತೆ ಚಿತ್ತಾಪುರ ತಾಲೂಕಿನಾದ್ಯಂತ ಈ ಬಾರಿ ಉತ್ತಮ ಮಳೆಯಾಗಿದೆ. ಕೃಷಿ ಭೂಮಿಗಳು ತೇವಾಂಶದಿಂದ ಕೂಡಿವೆ. ಬಿತ್ತನೆಗೆ ಪೂರಕ ವಾತಾವರಣ ಸೃಷ್ಠಿಯಾಗಿದೆ. ಹಿಂಗಾರು ಕೃಷಿ ಚಟುವಟಿಕೆ ಆರಂಭಿಸಲು ರೈತರು ಸಿದ್ಧತೆಯಲ್ಲಿದ್ದು, ಶೇಂಗಾ ಬೀಜಕ್ಕಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಕ್ಕೆ ರೈತರು ನಿತ್ಯ ಅಲೆಯುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ರೈತರ ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ. ಈ ಭಾಗದ ಜನಪ್ರತಿನಿಧಿ ಗಳೂ ಕೂಡ ಸಕಲಾದಲ್ಲಿ ನಮ್ಮ ಬೇಡಿಕೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ನಿರಂತರವಾಗಿ ಮಳೆ ಬಂದಿದೆ. ರಸಗೊಬ್ಬರ ಖರೀದಿಸಲಾಗಿದೆ. ಭೂಮಿಯಲ್ಲಿ ತೇವಾಂಶ ಇದ್ದಾಗಲೇ ಬೀಜ ಹಾಕಬೇಕು. ಈಗಾಗಲೇ ಬೀಜ ಭೂಮಿಗೆ ಬಿದ್ದು ಮೊಳಕೆ ಕಾಣಬೇಕಿತ್ತು. ಸರಕಾರದ ನಿರ್ಲಕ್ಷ್ಯದಿಂದಾಗಿ ಇಂದಿಗೂ ಶೇಂಗಾ ಬೀಜ ಪೂರೈಕೆ ಮಾಡಿಲ್ಲ. ಹೀಗಾಗಿ ಹಿಂಗಾರು ಬಿತ್ತನೆಗೆ ಹಿನ್ನೆಡೆಯಾಗಿದೆ ಎಂದು ರೈತರಾದ ದಿನೇಶ ರಾಠೊಡ ಹಣ್ಣಿಕೇರಾ, ಹೀರಾಮನ್‌ ಪವಾರ, ದೇವಿಂದ್ರಪ್ಪ ಪೂಜಾರಿ, ಸುಭಾಷ ರಾಠೊಡ, ಶಿವುಕುಮಾರ ಕಳಸಾನೋರ, ಬಸವರಾಜ ಸಂಗನ, ಸಾಯಬಣ್ಣ ಗಡ್ಡಿಮನಿ, ಚೋಕ್ಲಾ ರಾಠೊಡ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಿಯಾದ ಸಮಯಕ್ಕೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಇನ್ನಿತರ ಕೃಷಿ ಸೌಲಭ್ಯ ಒದಗಿಸುವಲ್ಲಿ ಕೃಷಿ ಸಂಪರ್ಕ ಕೇಂದ್ರದ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ.

ಶೇಂಗಾ ಬೀಜ ವಿತರಣೆ ಮಾಡದೆ ರೈತರ ಗೋಳಾಟಕ್ಕೆ ಕಾರಣವಾಗಿದ್ದಾರೆ. ವರ್ಷಧಾರೆ ಧರೆಗಿಳಿದು ಭೂಮಿ ಹಸಿಯಾಗಿಸಿದೆಯಾದರೂ ಸರಕಾರ ಮಾತ್ರ ರೈತರಿಗೆ ಬೀಜ ವಿತರಣೆಗೆ ಮುಂದಾಗಿಲ್ಲ. ಶೇಂಗಾ ಬೀಜ ಕೂಡಲೇ ವಿತರಿಸಲು ಮುಂದಾಗಬೇಕು. ನಿರ್ಲಕ್ಷ್ಯ ವಹಿಸಿದರೆ ಕೃಷಿ ಇಲಾಖೆ ವಿರುದ್ಧ ಹೋರಾಟ ಮಾಡಲಾಗುವುದು ಎಂದು ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್‌ ಕೆಎಸ್‌) ತಾಲೂಕು ಕಾರ್ಯದರ್ಶಿ ಮಲ್ಲಣ್ಣ ದಂಡಬಾ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.