ನಿಸ್ವಾರ್ಥದಿಂದ ಸಮಾಜ ಸೇವೆ ಮಾಡಲು ಶೈಲಜಾ ಸಲಹೆ

ಲಯನ್ಸ್‌ ಕ್ಲಬ್‌ ಆಫ್‌ ಬಿಜಾಪುರ ಪರಿವಾರ ಪದಾಧಿಕಾರಿಗಳ ಆಧಿಕಾರ ಸ್ವೀಕಾರ

Team Udayavani, Jul 24, 2019, 2:57 PM IST

24-July-25

ವಿಜಯಪುರ: ನಗರದಲ್ಲಿ ಹಮ್ಮಿಕೊಂಡಿದ್ದ ಲಯನ್ಸ್‌ ಕ್ಲಬ್‌ ಆಫ್‌ ಬಿಜಾಪುರ ಪರಿವಾರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಶೈಲಜಾ ಪಾಟೀಲ ಯತ್ನಾಳ ಚಾಲನೆ ನೀಡಿದರು.

ವಿಜಯಪುರ: ಸಮಾಜದಲ್ಲಿ ನೆರವಿನ ಅಗತ್ಯ ಇರುವ ಜನರಿಗೆ ನಿಸ್ವಾರ್ಥ ಮನೋಭಾವದಿಂದ ಸಹಾಯ ಮಾಡುವುದು ದೇವರ ಕೆಲಸದಷ್ಟೇ ಶ್ರೇಷ್ಠ. ಆದರೆ ಪ್ರಚಾರ ಹಾಗೂ ಸ್ವಾರ್ಥಕ್ಕಾಗಿ ಮಾಡುವ ಸಹಾಯ ಸಮಾಜ ಸೇವೆ ಎನಿಸಿಕೊಳ್ಳದು ಹಾಗೂ ದೇವರು ಕೂಡ ಮೆಚ್ಚಲಾರ ಎಂದು ಶೈಲಜಾ ಪಾಟೀಲ ಯತ್ನಾಳ ಅಭಿಪ್ರಾಯಪಟ್ಟರು.

ನಗರದಲ್ಲಿ ಜರುಗಿದ ಲಯನ್ಸ ಕ್ಲಬ್‌ ಆಫ್‌ ಬಿಜಾಪುರ ಪರಿವಾರದ 7ನೇ ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾರು ನಿಸ್ವಾರ್ಥ ಮನೋಭಾವದಿಂದ ಸೇವೆ ಮಾಡುವರೋ ಅವರ ಸೇವೆ ಮಾತ್ರ ನಿಜವಾದ ಸಮಾಜ ಸೇವೆ ಎನಿಸಿಕೊಳ್ಳಲಿದೆ. ಹೀಗಾಗಿ ಸಮಾಜ ಸೇವೆಗಾಗಿ ಹುಟ್ಟಿಕೊಂಡಿರುವ ಸಂಘ-ಸಂಸ್ಥೆಗಳು, ಸಮಾಜಮುಖೀ ಸೇವಕರು ಕೂಡಾ ತನು, ಮನ, ಧನ ಸಹಾಯ ಮಾಡುವ ಮೂಲಕ ಸಮಾಜದ ದುರ್ಬಲರಿಗೆ, ನೆರವಿನ ಹಸ್ತ ಚಾಚಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕರಿಯರ ಗೈಡನ್ಸ್‌ ಜಿಲ್ಲಾ ಚೇರಮನ್‌ ಎಂಜೆಎಫ್‌ ಡಾ| ರಂಗನಾಥ ಸೋನವಾಲಕರ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಅಂತಾರಾಷ್ಟ್ರೀಯ ಸಂಸ್ಥೆ ಲಯನ್ಸ್‌ ಕ್ಲಬ್‌ ಸದಸ್ಯರಾಗುವುದೇ ಹೆಮ್ಮೆಯ ವಿಷಯ. ತಮಗೆ ದೊರೆತಿರುವ ಈ ಒಂದು ಅವಕಾಶವನ್ನು ಜೀವನದಲ್ಲಿ ಪರೋಪಕಾರಿಯಾಗಿ ಎಲ್ಲರೂ ಸ್ಮರಿಸುವಂತೆ ಮಾಡಿಕೊಳ್ಳಬೇಕು. ಜೀವನದಲ್ಲಿ ಲೀಡರ್‌ ಆಗುವುದು ದೊಡ್ಡತನ ಅಲ್ಲ, ಕೆಲಸ ಮಾಡುವ ನಾಯಕ ಮಾತ್ರ ಜನ ಮಾನಸದಲ್ಲಿ ಉಳಿಯಲು ಸಾಧ್ಯ ಎಂದರು.

ಹೀಗಾಗಿ ನಿರಂತರ ಜನಸೇವೆ ಮಾಡುತ್ತ ಸಮಾಜದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು. ತಮ್ಮ ಕರ್ತವ್ಯಗಳನ್ನು ನಿಭಾಯಿಸುವ ಜೊತೆಗೆ, ಸರ್ವ ಸದಸ್ಯರಲ್ಲಿ ಸಮಾಜ ಸೇವೆಯ ಅರಿವು ಮೂಡಿಸಿ ಹುರಿದುಂಬಿಸಿ, ಪ್ರೇರಣೆ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ನಿರ್ಗಮಿತ ಅಧ್ಯಕ್ಷ ಡಾ| ಬಿ.ಎಂ. ಬಿರಾದಾರ ಪ್ರಾಸ್ತಾವಿಕ ಮಾತನಾಡಿ, ನಮ್ಮ ಅವಧಿಯಲ್ಲಿ ಹಲವು ಸಾಮಾಜಿಕ ಜನೋಪಯೋಗಿ ಯೋಜನೆಗಳನ್ನು ಹಮ್ಮಿಕೊಂಡು ಅನುಷ್ಠಾನಕ್ಕೆ ತಂದಿದ್ದೇವೆ. ಬಹುತೇಕ ಯೋಜನೆಗಳು ಅತಿ ಶಿಸ್ತು ಮತ್ತು ಪ್ರಾಮಾಣಿಕವಾಗಿ ಸಂಘಟಿಸಿ ಜರನ್ನು ಮುಟ್ಟಿಸುವಲ್ಲಿ ಯಶಸ್ವಿಯಾದೆವು. ಇದರ ಹೊರತಾಗಿಯೂ ಕೆಲವು ಉದ್ದೇಶಿತ ಕೆಲ ಯೋಜನೆಗಳನ್ನು ಕಾರಣಾಂತರಗಳಿಂದ ಈಡೇರಿಸಲು ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದರು.

ಕಾರ್ಯದರ್ಶಿ ಆನಂದ ಕುಲಕರ್ಣಿ 2018-19ನೇ ಸಾಲಿನ ಪ್ರಗತಿ ವಾಚಿಸಿದರು. ಲಯನ್ಸ್‌ ಪರಿವಾರದ ಸಂಸ್ಥಾಪಕ ಡಾ| ಅಶೋಕ ಜಾಧವ ಮಾತನಾಡಿದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಆನಂದ ಕುಲಕರ್ಣಿ, ಕಾರ್ಯದರ್ಶಿ ಮೋಹನ ಚವ್ಹಾಣ, ಖಜಾಂಚಿ ಸೋಮಶೇಖರ ರಾಠೊಡ ಸೇರಿದಂತೆ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಶ್ರವಣಕುಮಾರ, ಎಸ್‌.ಎಸ್‌. ರಾಜಮಾನ್ಯ ವೇದಿಕೆಯಲ್ಲಿದ್ದರು. ಡಾ| ಬಿ.ಎಂ. ಬಿರಾದಾರ ಸ್ವಾಗತಿಸಿದರು. ನಾಗೇಶ ಡೋಣೂರ ನಾಡಗೀತೆ ಹಾಡಿದರು. ಶ್ರವಣಕುಮಾರ ಮಹಿಂದ್ರಕರ ಪರಿಚಯಿಸಿದರು. ಡಾ| ಅಶೋಕ ಜಾಧವ ನಿರೂಪಿಸಿದರು. ರಾಜೇಶ ಗಾಯಕವಾಡ ವಂದಿಸಿದರು.

ಟಾಪ್ ನ್ಯೂಸ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.