ಹಂಪಿಗೆ ಬ್ರಿಗೇಡಿಯರ್ ಚೌಧರಿ ಭೇಟಿ
Team Udayavani, Apr 1, 2022, 5:31 PM IST
ಹೊಸಪೇಟೆ: ಭಾರತೀಯ ಸೇನಾ ಪಟೆ ಬ್ರಿಗೇಡಿಯರ್ ನವೀನ್ ಎನ್. ರೋಹಿತ್ ಚೌಧರಿ ದಂಪತಿ ಗುರುವಾರ ವಿಶ್ವವಿಖ್ಯಾತ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಿಸಿದರು.
ಐತಿಹಾಸಿಕ ವಿರೂಪಾಕ್ಷೇಶ್ವರ ದೇಗುಲಕ್ಕೆ ಭೇಟಿ ನೀಡಿದ ಅವರು, ವಿರೂಪಾಕ್ಷ, ಪಂಪಾದೇವಿ ಹಾಗೂ ಭುವನೇಶ್ವರಿ ದೇವಿ ದರ್ಶನ ಪಡೆದರು. ಬಳಿಕ ಹೇಮಕೂಟ, ಸಾಸಿವೆಕಾಳು ಗಣೇಶ, ಉಗ್ರ ನರಸಿಂಹ, ಬಡವಿಲಿಂಗ, ಕಮಲ್ ಮಹಲ್, ಗಜಶಾಲೆ, ರಾಜ ಪ್ರಾಂಗಣ, ರಾಣಿಸ್ನಾನ ಗೃಹ, ಮಹಾನವಮಿ ದಿಬ್ಬ, ಹಜಾರರಾಮ ದೇವಾಲಯ, ವಿಜಯ ವಿಠಲ ದೇವಸ್ಥಾನ ವೀಕ್ಷಿಸಿದರು. ಶಿಲ್ಪಕಲಾ ವೈಭವದ ಬೆರಗನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದರು.
ಈ ವೇಳೆ ಪ್ರತಿಕ್ರಿಯಿಸಿದ ಬ್ರಿಗೇಡಿಯರ್ ರೋಹಿತ್ ಚೌದರಿ, ಭಾರತ ಮತ್ತು ಜಪಾನ್ ಜಂಟಿ ಸಮರಾಭ್ಯಾಸ ಮುಗಿದ ನಂತರ ಹಂಪಿ ವೀಕ್ಷಿಸಬೇಕೆಂದಿದ್ದೆ. ಅದರಂತೆ ಇದೀಗ ಹಂಪಿಗೆ ಆಗಮಿಸಿ ಪುರಾತನ ಶ್ರೀಮಂತ ಶಿಲ್ಪ ಕೆತ್ತನೆ ನೋಡಿದ್ದೇನೆ. ವಿಜಯನಗರ ಸಾಮ್ರಾಜ್ಯದ ರಾಜ್ಯಧಾನಿ ಹಂಪಿ ಕುರಿತು ಕೇಳಿ ತಿಳಿದುಕೊಂಡಿದ್ದೆ. ಇದೀಗ ಕಣ್ಣಾರೆ ಕಂಡು ಸಂತೋಷವಾಯಿತು ಎಂದರು.
ಬ್ರಿಗೇಡಿಯರ್ ರೋಹಿತ್ ಚೌಧರಿ ಅವರಿಗೆ ವಿರೂಪಾಕ್ಷಿ ಅವರು ಗೈಡ್ ಮಾಡುವ ಮೂಲಕ ಹಂಪಿಯ ಶ್ರೀಮಂತರ ಪರಂಪರೆ, ಸಂಸ್ಕೃತಿ ಹಾಗೂ ಕಲಾವೈಭವವನ್ನು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ