ಅನ್ನದಾತನ ಕೈಹಿಡಿದ ಮಿಡಿ ಸೌತೆಕಾಯಿ ಬೆಳೆ

ಹಳ್ಳಿ ಹಳ್ಳಿಗಳಲ್ಲಿ ಬೆಳೆದ ಮಿಡಿ ಸೌತೆಕಾಯಿ ವಿದೇಶಗಳಿಗೆ ರಫ್ತು

Team Udayavani, May 30, 2022, 1:53 PM IST

kotturu

ಕೊಟ್ಟೂರು: ಮಿಡಿ ಸೌತೆ ಅಥವಾ ಉಪ್ಪಿನಕಾಯಿ ಸೌತೆಕಾಯಿಗೆ ವಿದೇಶಗಳಲ್ಲಿ ಭಾರಿ ಬೇಡಿಕೆ. ಗರ್ಕಿನ್‌? (ಕುಕುಂಬರ್‌) ಎಂದೇ ಪ್ರಸಿದ್ಧಿಯಾಗಿ ರುವ ಮಿಡಿ ಸೌತೆಯನ್ನು ಒಪ್ಪಂದದಡಿ ಬೆಳೆಸಿ ವಿದೇ ಶಕ್ಕೆ ರಫ್ತು ಮಾಡಲಾಗುತ್ತದೆ. ಇದನ್ನು ಸಾವಯವ ಪದ್ಧತಿಯಲ್ಲಿ ಬೆಳೆದು ಹೆಚ್ಚಿನ ಲಾಭ ಗಳಿಸುವ ವಿಧಾನವನ್ನು ಕುಣಿಗಲ್‌ ವೇಗೋಲ ಇಂಡೋ ಸ್ಪ್ಯಾನಿಷ್‌ ಕಂಪನಿಯವರು ತಾಲೂಕು ಸುತ್ತಮುತ್ತ ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಬೆಳೆಯಲು ದಾರಿ ಮಾಡಿಕೊಟ್ಟಿದ್ದಾರೆ. ರೈತರು ಹೆಚ್ಚಿನ ರೀತಿಯಲ್ಲಿ ಈ ಭಾಗದಲ್ಲಿ ಬೆಳೆದು ಮಂದಹಾಸ ಮೂಡಿಸಿದ್ದಾರೆ.

ಸಾವಯವ ಕೃಷಿ ಪದ್ಧತಿಯಲ್ಲಿ ಭಾರತೀಯ ವಾತಾವರಣಕ್ಕೆ ಅನುಗುಣವಾಗಿ ಯಶಸ್ವಿಯಾಗಿ ಬೆಳೆಸಲು ಕ್ಯಾಲಿಪ್ಸೊ ಇನ್ನು ಹೆಚ್ಚಿನ ತಳಿಗಳು ಸೂಕ್ತವಾಗಿವೆ. ಇವು ರೋಗ ನಿರೋಧಕ ಶಕ್ತಿ ಹೊಂದಿವೆ. ಮಿಡಿ ಸೌತೆಯಿಂದ ಮಾಡುವ ಉಪ್ಪಿನಕಾಯಿ ವಿಶೇಷ ರುಚಿ ಹೊಂದಿರುತ್ತದೆ. ಹೀಗಾಗಿಯೇ ಮಿಡಿ ಸೌತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಬಂದಿದ್ದರಿಂದ ರೈತರು ಬೆಳೆಯಲು ಮುಂದಾಗಿದ್ದಾರೆ.

ಮಿಡಿ ಉಪ್ಪಿನಕಾಯಿ ಸೌತೆಯನ್ನು ಹಲವು ರೀತಿಯ ಮಣ್ಣುಗಳಲ್ಲಿ ಬೆಳೆಯಬಹುದಾಗಿದೆ. ಆದರೆ ಹೆಚ್ಚು ಸಾವಯವ ಪದಾರ್ಥಗಳಿಂದ ಕೂಡಿದ 5.8 ರಿಂದ 7ರ ರಸಸಾರ ಹೊಂದಿರುವ, ನೀರು ಚೆನ್ನಾಗಿ ಬಸಿದು ಹೋಗುವ ಗೋಡು ಅಥವಾ ಮರಳು ಮಿಶ್ರಿತ ಗೋಡು ಮಣ್ಣು ಸೂಕ್ತವಾಗಿದೆ. ನೀರು ಸರಾಗವಾಗಿ ಬಸಿದು ಹೋಗದ ಎರೆ ಮಣ್ಣು ಇರುವೆಡೆ ಈ ಬೆಳೆ ತೆಗೆಯಲು ಸೂಕ್ತವಲ್ಲ. ನೀರು ಬಸಿದು ಹೋಗದೆ ಇರುವ ಸಂದರ್ಭದಲ್ಲಿ ಬೇರಿನ ಸುತ್ತಲೂ ಆಮ್ಲಜನಕದ ಕೊರತೆಯಿಂದಾಗಿ ಬೆಳೆಯು ಚೆನ್ನಾಗಿ ಬೆಳೆಯದೆ ಇರುವ ಸಾಧ್ಯತೆ ಇರುತ್ತದೆ. ಪ್ರತಿಯೊಂದು ಈ ಮಿಡಿ ಸೌತೆಕಾಯಿ ಬಳ್ಳಿಯು ಸೂಕ್ಷ್ಮ ವಾಗಿ ಕಾಪಾಡಿಕೊಂಡು ಬಂದರೆ ಮಾತ್ರ ಮಿಡಿ ಸೌತೆಕಾಯಿ ಬೆಳೆಯಲು ಸಾಧ್ಯ. ಈ ಬೆಳೆಗೆ ಅತಿಯಾಗಿ ನೀರು ಸರಬರಾಜು ತಿಪ್ಪೆಗೊಬ್ಬರ ನೀಡಬೇಕು. ಕೆಲ ಕಂಪನಿಗಳು ಹಳ್ಳಿಗಾಡು ಜನರ ಹೊಲಗಳಿಗೆ ಭೇಟಿ ನೀಡಿ ಬೆಳೆಗೆ ಎಷ್ಟು ಅನುಗುಣವಾಗಿ ಬೆಳೆ ಹಾನಿಯಾಗದಂತೆ ರೈತರಿಗೆ ತಿಳಿಸಿ ಇನ್ನು ಹೆಚ್ಚಿನ ರೀತಿಯಲ್ಲಿ ಫಲವತ್ತಾಗಿ ಬೆಳೆಯಲು ಅನುವು ಮಾಡಿಕೊಡುತ್ತಾರೆ.

ಇದು ಉಷ್ಣ ವಲಯದ ತರಕಾರಿ ಬೆಳೆ. 27ರಿಂದ 28 ಡಿಗ್ರಿ ಸೆಲ್ಸಿಯಸ್‌ ತಾಪಮಾನದಲ್ಲಿ ಚೆನ್ನಾಗಿ ಬೆಳೆಯುತ್ತದೆ. ತಾಪಮಾನ 36 ಡಿಗ್ರಿ ಸೆಲ್ಸಿಯಸ್‌ ಗಿಂತ ಹೆಚ್ಚಾದರೆ ಅಥವಾ 12 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿದ್ದಲ್ಲಿ ಕಾಯಿ ಕಚ್ಚುವುದು ಇಲ್ಲವಾ ದರೆ ಅತಿಯಾಗಿ ಉಷ್ಣಾಂಶ ತೇವಾಂಶದಿಂದ ಬೆಳೆಯು ತ್ತಿರುವ ಬೆಳೆ ಕುಂಠಿತವಾಗುತ್ತದೆ ಇಲ್ಲವಾದರೆ ಈ ಬಳ್ಳಿಯು ಒಣಗುತ್ತದೆ.

ಸಾವಯವ ಕೃಷಿಯಲ್ಲಿ ಬಿತ್ತನೆ ಮಾಡಲು ಮುಂಗಾರಿಗೆ ಮೊದಲಿನ ಕಾಲ ಸೂಕ್ತ. ಒಳ್ಳೆಯ ಬೆಳೆ ಮತ್ತು ಇಳುವರಿ ಪಡೆಯಲು ಒಂದು ವರ್ಷದಲ್ಲಿ ಎರಡು ಬೆಳೆಗಳು ಮಾತ್ರ. ಅದು ಮೇ ತಿಂಗಳು ಹಾಗೂ ಜೂನ್‌ ತಿಂಗಳು ಮತ್ತು ನವೆಂಬರ್‌ ಮತ್ತು ಡಿಸೆಂಬರ್‌ ತಿಂಗಳು ಹೇಳಿ ಮಾಡಿಸಿದ ಸಮಯ. ರೈತರು ಸಹ ಈ ವರ್ಷದಲ್ಲಿ ಎರಡು ಬೆಳೆಗಳ ಮಾತ್ರ ಬೆಳೆಯುತ್ತಾರೆ. ಈ ಸೌತೆಕಾಯಿ ಪ್ರತಿ ರೈತರ ಜಮೀನಿನಲ್ಲಿ ಪ್ರತಿ ಟನ್‌ಗಟ್ಟಲೆ ಬೆಳೆದು ಕಂಪನಿಗಳಿಗೆ ನೀಡುತ್ತಾರೆ.

ಬಿತ್ತನೆ ವಿಧಾನ

ಬೀಜಗಳನ್ನು 1ರಿಂದ 2 ಸೆಂ. ಆಳಕ್ಕೆ ಮಣ್ಣಿನಲ್ಲಿ ಬಿತ್ತಬೇಕು. ಇದರಿಂದ ಅಗತ್ಯವಿರುವಷ್ಟು ಮಣ್ಣಿನ ಪದರು ಹಾಗೂ ತೇವಾಂಶ ದೊರೆತು ಬೀಜ ಬೇಗನೇ ಮೊಳೆತು ಗಿಡಗಳು ವೇಗವಾಗಿ ಬೆಳೆಯಲು ಅನುಕೂಲವಾಗುತ್ತದೆ. ಸಾವಯವ ಕೃಷಿಯಲ್ಲಿ ಬೆಳೆಯುವಾಗ ಹೆಚ್ಚಿಗೆ ಅಂತರ ಅಂದರೆ ಸಾಲಿನಿಂದ ಸಾಲಿಗೆ 4 ಅಡಿ ಹಾಗೂ ಗಿಡದಿಂದ ಗಿಡಕ್ಕೆ 1 ಅಡಿ ಕೊಡುವುದರಿಂದ ಗಾಳಿಯಾಡಲು ಅನುಕೂಲವಾಗಿ, ಎಲೆಗಳಿಗೆ ಹರಡುವ ರೋಗಗಳ ಬಾಧೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಬಿತ್ತನೆ ಮಾಡಿದ 40 ದಿನಗಳವರೆಗೂ ಮುಖ್ಯ ತಾಕನ್ನು ಕಳೆ ರಹಿತವಾಗಿಡಬೇಕು. ಸಾಮಾನ್ಯವಾಗಿ ಕೈಯಿಂದ ಕಳೆ ಕೀಳುವುದರಿಂದ ಮಣ್ಣು ಸಡಿಲಗೊಳಿಸಲು ಅನುವಾಗುತ್ತದೆ. ಬಿತ್ತನೆ ಮಾಡಿದ 15 ದಿನಗಳ ನಂತರ ಮೊದಲನೇ ಬಾರಿಗೆ ಹಾಗೂ 30 ದಿನಗಳ ನಂತರ ಎರಡನೇ ಸಲ ಕಳೆ ಕೀಳಬಹುದು. ಇದಾದ ನಂತರ ಬೆಳೆ ಸಾಲುಗಳ ನಡುವೆ ಅಂತರ ಬೇಸಾಯ ಮಾಡಬೇಕು. ಪರಿಣಾಮಕಾರಿಯಾಗಿ ಕಳೆ ನಿಯಂತ್ರಣ ಮಾಡಲು ಹಾಗೂ ಹನಿ ನೀರಾವರಿ ಪದ್ಧತಿಯಲ್ಲಿ ನೀರುಣಿಸುವ ಪ್ರಮಾಣವನ್ನು ಕಡಿಮೆಗೊಳಿಸಲು ಕಪ್ಪು ಬಣ್ಣದ ತೆಳು ಪ್ಲಾಸ್ಟಿಕ್‌ ಹೊದಿಕೆ ಉಪಯೋಗಿಸಬಹುದು. ಉತ್ತಮ ಗುಣಮಟ್ಟದ ಕಾಯಿಗಳನ್ನು ಪಡೆಯಲು ಆಧಾರ ಒದಗಿಸಿ ದಾರಗಳಿಗೆ ಬಳ್ಳಿಗಳನ್ನು ಹಬ್ಬಿಸಬೇಕು. ಡ್ರಿಪ್‌ ಮುಖಾಂತರ ನೀರನ್ನು ಹಾಯಿಸಬೇಕು ಇದಕ್ಕೆ ಗೊಬ್ಬರ ಇನ್ನೂ ಅನೇಕ ಔಷಧಿಗಳನ್ನು ನೀರಿನಲ್ಲಿ ಕಲಸಿ ಡ್ರಿಪ್‌ ಮುಖಾಂತರ ಹಾಯಿಸುತ್ತಾರೆ ರೈತರು.

ರೋಗ ನಿಯಂತ್ರಣ

ಬಿತ್ತನೆ ಮಾಡುವ 15 ದಿನಗಳ ಮೊದಲು ಮುಖ್ಯ ತಾಲೂಕಿನ ಸುತ್ತಲೂ 2ರಿಂದ 3 ಸಾಲು ಮೆಕ್ಕೆಜೋಳ ಅಥವಾ ಗೋವಿನ ಜೋಳವನ್ನು ದಟ್ಟವಾಗಿ ಬಿತ್ತಬೇಕು. ಇದರಿಂದ ಬೇರೆ ತಾಲೂಕುಗಳಿಂದ ಒಳ ಬರುವ ಕೀಟಗಳ ಹಾವಳಿ ಕಡಿಮೆಗೊಳಿಸಬಹುದು. ಬಿತ್ತನೆ ಮಾಡಿದ 2 ವಾರಗಳ ನಂತರ ಮೊದಲು ಚಿಗುರಿದ ಎರಡು ಎಲೆಗಳನ್ನು ಚಿವುಟಿ ಹಾಕುವುದರಿಂದ ರಂಗೋಲಿ ಹುಳದ ಹಾವಳಿ ನಿಯಂತ್ರಿಸಬಹುದು. 4ರಿಂದ 5 ವಾರಗಳ ನಂತರ ಬೇವಿನ ಹಿಂಡಿಯನ್ನು ಹೆಕ್ಟೇರಿಗೆ 250 ಕೆಜಿಯಂತೆ ಮಣ್ಣಿಗೆ ಸೇರಿಸಬೇಕು. ಬೆಳೆ ಹಾನಿ ಮಾಡುವ ಕೆಂಪು ಕುಂಬಳ ದುಂಬಿ, ಹಣ್ಣು ನೊಣ, ಕಾಯಿಕೊರಕ ಹುಳುಗಳ ನಿಯಂತ್ರಣಕ್ಕಾಗಿ ಶೇ 4ರ ಬೇವಿನ ಬೀಜದ ಪುಡಿಯ ಸಾರ ಅಥವಾ ಶೇ 0.7ರ ಪ್ರಮಾಣದ ಬೇವಿನ ಸೊಪ್ಪಿನ ಕಷಾಯವನ್ನು ಬಿತ್ತನೆ ಮಾಡಿದ 10, 17 ಮತ್ತು 23 ದಿನಗಳ ನಂತರ ಸಿಂಪಡಣೆ ಮಾಡಬೇಕು. ಹಣ್ಣು ನೊಣದ ನಿಯಂತ್ರಣಕ್ಕಾಗಿ ಲಿಂಗಾಕರ್ಷಕ (ಕ್ಯೂಲೂರ್‌) ಬಲೆ ಉಪಯೋಗಿಸುವುದು ಹೆಚ್ಚು ಪರಿಣಾಮಕಾರಿ.

ಮಿಡಿ ಸೌತೆಕಾಯಿ ಬೆಳೆಯಲು ಮೊದಲಿಗೆ ನಮಗೆ ಸಾಧ್ಯವಾಗುತ್ತಿರಲಿಲ್ಲ. ಆದರೆ ಇಲ್ಲಿನ ಕಂಪನಿಯೊಂದು ನಮ್ಮ ಗ್ರಾಮಗಳಿಗೆ ಭೇಟಿ ನೀಡಿ ಮಿಡಿ ಸೌತೆ ಕಾಯಿಯನ್ನು ಬೆಳೆಯಲು ಮಾಹಿತಿ ನೀಡಿ ಒಬ್ಬ ರೈತ ಬೆಳೆದ ಬೆಳೆ ವಿದೇಶಕ್ಕೆ ರಫ್ತು ಆಗುವ ಮಿಡಿ ಸೌತೆಕಾಯಿಯನ್ನು ನಾವುಗಳು ಬೆಳೆದು ನಮಗೆ ಹೆಚ್ಚಿನ ರೀತಿಯಲ್ಲಿ ಲಾಭ ಪಡೆಯಲು ಸಾಧ್ಯವಾಗಿದೆ. ಅಂಜಿನಪ್ಪ ತಿಮ್ಮಲಾಪುರ ಗ್ರಾಮದ ರೈತ

-ರವಿಕುಮಾರ್‌ ಎಂ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

b k shivani

Hospete: ಫೆ.3 ರಂದು ಅಂತರಾಷ್ಟ್ರೀಯ ಪ್ರವಚನಕಾರರಾದ ಬಿ.ಕೆ.ಶಿವಾನಿ ಹೊಸಪೇಟೆಗೆ ಭೇಟಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.