
ಮೀಸಲಾತಿ ಹೆಚ್ಚಳಕ್ಕೆ ಆಗ್ರಹ
Team Udayavani, Apr 10, 2022, 5:11 PM IST

ಹೊಸಪೇಟೆ: ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಜನಸಂಖ್ಯೆ ಆಧಾರದ ಅನ್ವಯ ಮೀಸಲಾತಿ ಹೆಚ್ಚಿಸಬೇಕು. ನ್ಯಾ. ನಾಗಮೋಹನ ದಾಸ್ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ವತಿಯಿಂದ ಏ. 11ರಿಂದ 17ರವರೆಗೆ ತಹಶೀಲ್ದಾರ್ ಕಚೇರಿ ಎದರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಸಂಚಾಲಕರಾದ ಜಂಬಯ್ಯ ನಾಯಕ, ವೀರಸ್ವಾಮಿ, ಎಂ. ಜಂಬಯ್ಯ ನಾಯಕ, ದುರುಗಪ್ಪ ಪೂಜಾರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯನಗರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಗೆ ಆಗಮಿಸುವ ಸಿಎಂ ಬಸವರಾಜ ಬೊಮ್ಮಾಯಿ ಅವರು ನಮ್ಮ ಬೇಡಿಕೆ ಆಲಿಸಲು ಧರಣಿ ಸ್ಥಳಕ್ಕೆ ಆಗಮಿಸಿ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ಹೆಚ್ಚಳ ಮಾಡದಿದ್ದರೆ ಸರ್ಕಾರ ಇದರ ಪರಿಣಾಮ ಎದುರಿಸಲಿದೆ. ಸರ್ಕಾರ ವಾಲ್ಮೀಕಿ ಗುರುಪೀಠಕ್ಕೆ ನೀಡಿರುವ ಐದು ಕೋಟಿ ರೂ. ಅನುದಾನವನ್ನೂ ತಿರಸ್ಕರಿಸಲಾಗುವುದು. ಮೊದಲು ನಮಗೆ ಮೀಸಲಾತಿ ಹೆಚ್ಚಳ ಮಾಡಲಿ ಎಂದು ಒತ್ತಾಯಿಸಿದರು.
ಗೋಸಲ ಭರಮಪ್ಪ, ಗುಜ್ಜಲ ನಾಗರಾಜ, ವೀರಭದ್ರ ನಾಯಕ, ನಿಂಬಗಲ್ ರಾಮಕೃಷ್ಣ, ಶೇಷ, ಅಂಕಾಳಿ, ತಾಯಪ್ಪ ನಾಯಕ, ಪಿ.ವಿ. ವೆಂಕಟೇಶ, ಸಣ್ಣ ವೀರಪ್ಪ, ಕೆ. ಮಲ್ಲಪ್ಪ. ಗುಜ್ಜಲ ಚಂದ್ರಶೇಖರ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harapanahalli: ಬಸ್ ಚಾಲಕನ ಸಮಯಪ್ರಜ್ಞೆ, ತಪ್ಪಿದ ಅನಾಹುತ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

Cauvery: ನಮಗೆ ಕುಡಿಯೋಕೆ ನೀರಿಲ್ಲ, ಇನ್ನು ತಮಿಳುನಾಡಿಗೆ ನೀರು ಬಿಡೋಕಾಗುತ್ತಾ? ಸಚಿವ ಜಮೀರ್

Kudligi; ತಾಲೂಕು ಕಚೇರಿಯಲ್ಲಿ ಕಸಗುಡಿಸಿದ ಶಾಸಕ !

Hosapete: ಮತ್ತೆ ಹಸಿರು ಬಣ್ಣಕ್ಕೆ ಡ್ಯಾಂ ನೀರು: ನದಿಪಾತ್ರದ ಗ್ರಾಮಸ್ಥರಲ್ಲಿ ಆತಂಕ
MUST WATCH
ಹೊಸ ಸೇರ್ಪಡೆ

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಜಾರಿ ನಿರ್ದೇಶನಾಲಯದ ಸಮನ್ಸ್ ಜಾರಿ

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್