![1-asdsdsad](https://www.udayavani.com/wp-content/uploads/2024/06/1-asdsdsad-415x270.jpg)
ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್
Team Udayavani, May 26, 2024, 11:50 PM IST
![ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್](https://www.udayavani.com/wp-content/uploads/2024/05/aa-5-620x387.jpg)
ಹೊಸಪೇಟೆ: ನಗರ ಸೇರಿದಂತೆ ತಾಲೂಕಿನ ಗ್ರಾಮಗಳಿಗೆ ಇಲ್ಲಿನ ಜಲಶುದ್ಧಿಕರಣ ಘಟಕದಿಂದ ಕುಡಿಯುವ ಸರಬರಾಜು ಮಾಡುತ್ತಿದ್ದ ಖಾಸಗಿ ಟ್ಯಾಂಕರ್ಗಳಿಗೆ ನೀರು ಪೂರೈಕೆ ಸ್ಥಗಿತಗೊಳಿಸುವಂತೆ ಶಾಸಕ ಎಚ್.ಆರ್.ಗವಿಯಪ್ಪ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿರುವ ಕ್ರಮ ಖಂಡಿಸಿ ಮಾಜಿ ಸಚಿವ ಆನಂದ ಸಿಂಗ್ ನಡು ರಸ್ತೆಯಲ್ಲಿ ಧರಣಿ ಕುಳಿತ ಘಟನೆ ರವಿವಾರ ನಡೆಯಿತು.
ಶಾಸಕ ಗವಿಯಪ್ಪ ಜತೆ ದೂರವಾಣಿಯಲ್ಲಿ ಮಾತನಾಡಿದ ಆನಂದ ಸಿಂಗ್, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ.
2004ರಿಂದಲೂ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ತಮ್ಮ ಆದೇಶ ವಾಪಸ್ ಪಡೆಯಬೇಕೆಂದರು. ಇದಕ್ಕೆ ಗವಿಯಪ್ಪ ನಿರಾಕರಿಸಿದ್ದರಿಂದ ಸಿಟ್ಟಾದ ಆನಂದ ಸಿಂಗ್ ತಮ್ಮ ಬೆಂಬಲಿಗರೊಂದಿಗೆ ರಸ್ತೆಯಲ್ಲಿ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೌರಾಯುಕ್ತ ಚಂದ್ರಪ್ಪ ಅವರನ್ನು ಆನಂದ ಸಿಂಗ್ ತರಾಟೆಗೆ ತೆಗೆದುಕೊಂಡರು. ಸೋಮವಾರ ತುರ್ತು ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ನಗರಸಭೆ ಒಟ್ಟು 35 ಸ್ಥಾನಗಳ ಪೈಕಿ ಬಿಜೆಪಿಗೆ 20 ಸದಸ್ಯರ ಬಲವಿದ್ದರೆ, ಕಾಂಗ್ರೆಸ್ಗೆ 15 ಸದಸ್ಯರ ಬಲವಿದೆ. ಆದರೆ, ಬಹುತೇಕ ಸದಸ್ಯರು ಟ್ಯಾಂಕರ್ ನೀರು ಪೂರೈಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
![1-asdsdsad](https://www.udayavani.com/wp-content/uploads/2024/06/1-asdsdsad-415x270.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ](https://www.udayavani.com/wp-content/uploads/2024/06/electrick-150x102.jpg)
ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
![5-vijayanagara](https://www.udayavani.com/wp-content/uploads/2024/05/5-vijayanagara-150x90.jpg)
Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ
![2-vijayanagara](https://www.udayavani.com/wp-content/uploads/2024/05/2-vijayanagara-150x90.jpg)
Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್; ಹೊತ್ತಿ ಉರಿದ ಲಾರಿ
![1-wewewqewqew](https://www.udayavani.com/wp-content/uploads/2024/04/1-wewewqewqew-150x109.jpg)
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
![Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ](https://www.udayavani.com/wp-content/uploads/2024/04/SHRI-150x90.jpg)
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.