Hampi ಕನ್ನಡ ವಿವಿ 32ನೇ ನುಡಿಹಬ್ಬ: ಮೂವರು ಗಣ್ಯರಿಗೆ ನಾಡೋಜ ಪ್ರದಾನ
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಂದ ಪ್ರದಾನ
Team Udayavani, Jan 10, 2024, 9:01 PM IST
ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ನುಡಿಹಬ್ಬ ಘಟಿಕೋತ್ಸವದ ಪ್ರಯುಕ್ತ ರಾಜ್ಯದ ಮೂವರು ಗಣ್ಯರಿಗೆ ಬುಧವಾರ ನಾಡೋಜ ಗೌರವ ಪದವಿ ಮಾಡಲಾಯಿತು.
ಬಸವ ತತ್ವವನ್ನೇ ಬದುಕಿನ ಆದರ್ಶವನ್ನಾಗಿ ಮಾಡಿಕೊಂಡಿದ್ದ ಪೂಜ್ಯ ಲಿಂಗೈಕ್ಯ ಡಾ. ಚನ್ನಬಸವ ಪಟ್ಟದೇವರ ಬಸವಸಂಸ್ಕೃತಿ ಪರಂಪರೆಯನ್ನು ಮುಂದುವರಿಸಿಕೊಂಡು ಹೊರಟಿರುವ ಭಾಲ್ಕಿ ಹಿರೇಮಠದ ಡಾ.ಬಸವಲಿಂಗ ಪಟ್ಟದೇವರು, ಬಹುಭಾಷಾ ಪಂಡಿತರಾಗಿ ಸಮರ್ಥ ಅನುವಾದಕರೆಂದು ಖ್ಯಾತಿ ಪಡೆದ ಮೂಲತಃ ನಮ್ಮ ರಾಜ್ಯದ ಪ್ರಾಧ್ಯಾಪಕರು ಹಾಗೂ ಪ್ರಸ್ತುತ ಆಂಧ್ರಪ್ರದೇಶದ ಸರ್ಕಾರಿ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಡಾ.ತೇಜಸ್ವಿ ವಿ ಕಟ್ಟಿಮನಿ, ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಬೆಂಗಳೂರಿನ ಡಾ ಎಸ್.ಸಿ.ಶರ್ಮಾ ಅವರಿಗೆ ನಾಡೋಜ ಗೌರವ ಪ್ರದಾನ ಮಾಡಲಾಯಿತು.
ವಿವಿಯ ವಿದ್ಯಾರಣ್ಯದ `ನವರಂಗ’ ಬಯಲು ರಂಗಮಂದಿರದಲ್ಲಿ ನಡೆದ ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ನುಡಿಹಬ್ಬ ಘಟಿಕೋತ್ಸವ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ನಾಡೋಜ ಗೌರವ ಪದವಿ ಪ್ರದಾನ ಮಾಡಿದರು.
ಹಂಪಿ ಕನ್ನಡ ವಿಶ್ವವಿದ್ಯಾಲಯವು ರಾಷ್ಟ್ರ ಕವಿ ಕುವೆಂಪು, ಸಿದ್ದವನಹಳ್ಳಿ ನಿಜಲಿಂಗಪ್ಪ, ಗಂಗೂಬಾಯಿ ಹಾನಗಲ್, ಡಾ. ಪಾಟೀಲ ಪುಟ್ಟಪ್ಪ, ಡಾ.ರಾಜಕುಮಾರ್ ಸೇರಿದಂತೆ ಇಲ್ಲಿಯವರೆಗೆ 95 ಗಣ್ಯರಿಗೆ ನಾಡೋಜ ಗೌರವ ಪದವಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ