Hosapete ಮಗಳ ಕೊಂದು ತಾಯಿ ನೇಣಿಗೆ ಶರಣು
Team Udayavani, Oct 14, 2023, 7:27 PM IST
ಹೊಸಪೇಟೆ: ಮಕ್ಕಳು ಮಾತು ಕೇಳುತ್ತಿಲ್ಲ ಅಂತ ಮಗಳನ್ನು ಕೊಲೆ ಮಾಡಿ ತಾಯಿಯೂ ನೇಣು ಬಿಗಿದುಕೊಂಡು ಸಾವನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ಲೇಟ್ ಶಫಿಸಾಬ್ ಎಂಬುವರರ ಪತ್ನಿ ಬೇಗಂ (5೦) ಮಾತು ಕೇಳಲ್ಲಿಲ್ಲ ಎಂಬ ಕಾರಣಕ್ಕೆ ತನ್ನ ಇಬ್ಬರೂ ಮಕ್ಕಳ ತಲೆಗೆ ಕಟ್ಟಿಗೆಯಿಂದ ಬಲವಾಗಿ ಹೊಡೆದಿದ್ದಾಳೆ. ಮಗಳು ಶಮಾಬಾನು (18) ಸ್ಥಳದಲ್ಲಿ ಮೃತಪಟ್ಟರೆ, ಮಗ ಅಮಾನುಲ್ಲಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾನೆ. ತನ್ನ ಇಬ್ಬರೂ ಮಕ್ಕಳು ಮೃತಪಟ್ಟಿದ್ದಾರೆ ಎಂದು ಭಾವಿಸಿ ತಾನು ಕೂಡ ನೇಣಿಗೆ ಕೊರಳೊಡ್ಡಿ ಸಾವನಪ್ಪಿದ್ದಾಳೆ.
ಘಟನೆಯಲ್ಲಿ ಗಾಯಗೊಂಡ ಅಮಾನುಲ್ಲಾನನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೃತ ಬೇಗಂ ಅವರ ಗಂಡನ ತಮ್ಮ ಅಬ್ದುಲ್ ಸಾಬ್, ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ಮುಂದುವರೆದಿದೆ.
ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಹೆಚ್ಚಿನ ಸಾಕ್ಷ್ಯವನ್ನು ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿಬಾಬು ತಿಳಿಸಿದ್ದಾರೆ.
ಗ್ರಾಮಕ್ಕೆ ಎಸ್ಪಿ ಭೇಟಿ:
ಘಟನಾ ಸ್ಥಳಕ್ಕೆ ಎಸ್ಪಿ ಹರಿಬಾಬು ಹಾಗೂ ಡಿವೈಎಸ್ಪಿ ವೆಂಕಟಪ್ಪ ನಾಯಕ, ಭೇಟಿ ನೀಡಿ ಪರಿಶೀಲಿಸಿದ್ದಾರೆ.
ತನಿಖಾಧಿಕಾರಿಗಳಾದ ನಾಗರಾಜ ಎಂ ಕಮ್ಮಾರ, ಪಿ.ಎಸ್.ಐ ಶಂಭುಲಿಅಗ ಹಿರೇಮಠ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್