ರಾಜ್ಯ ಸರ್ಕಾರ ಕೃಷಿ ಕಾಯ್ದೆ ರದ್ದುಪಡಿಸಲಿ
ರೈತಪರ ಯೋಜನೆ ಕೈಗೆತ್ತಿಕೊಳ್ಳಲಿ: ನಾರಾಯಣಸ್ವಾ ಮಿ
Team Udayavani, Mar 14, 2022, 2:47 PM IST
ಹೊಸಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಯೋಜನೆಗಳನ್ನು ಜಾರಿಗೆ ತರುತ್ತಿವೆ. ರಾಜ್ಯ ಸರ್ಕಾರ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ|ನಂಜುಂಡಸ್ವಾಮಿ ಸ್ಥಾಪಿತ)ಯ ರಾಜ್ಯಾಧ್ಯಕ್ಷ ಜಿಜಿಹಳ್ಳಿ ಬಿ. ನಾರಾಯಣಸ್ವಾಮಿ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನ ಬೆಳೆಯುವ ರೈತರ ಸಮಸ್ಯೆಗೆ ಸರ್ಕಾರಗಳು ಕಿವಿಗೊಡಬೇಕು. ಕಾವೇರಿ, ಮಹದಾಯಿ, ತುಂಗಭದ್ರಾ, ಮೇಕೆದಾಟು ಸೇರಿದಂತೆ ವಿವಿಧ ಕಡೆಯಲ್ಲಿ ರೈತಪರ ಯೋಜನೆಗಳನ್ನು ಕೈಗೆತ್ತಿಕೊಂಡು ಸಾಕಾರಗೊಳಿಸಬೇಕು ಎಂದು ಹೇಳಿದರು. ಹೊಸಪೇಟೆಯ ಚಿತ್ತವಾಡ್ಗಿಯ ಐಎಸ್ಆರ್ ಸಕ್ಕರೆ ಕಾರ್ಖಾನೆ ಬಂದ್ ಆಗಿದೆ. ಹಾಗಾಗಿ ಈ ಭಾಗದಲ್ಲಿ ಹೊಸದಾಗಿ ಕಾರ್ಖಾನೆ ಸ್ಥಾಪಿಸಬೇಕು. ಬಚಾವತ್ ಆಯೋಗದ ಪ್ರಕಾರ ವಿಜಯನಗರದ ಕಾಲುವೆಗಳನ್ನು ನೆಚ್ಚಿರುವ ಹೊಸಪೇಟೆ ಭಾಗದ ರೈತರ ಜಮೀನುಗಳಿಗೆ ಪ್ರತಿ ವರ್ಷ 7.5 ಟಿಎಂಸಿ ನೀರು ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ರೈತರು ವರ್ಷವೀಡಿ ಹೋರಾಟ ನಡೆಸಿದರೂ ಕ್ಯಾರೇ ಎನ್ನದವರು ಗೆಲುವು ಸಾಧಿಸುತ್ತಾರೆ ಎಂದರೆ ಮುಂದಿನ ದಿನಗಳಲ್ಲಿ ರೈತರಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುವುದು ಎಂದರು. ವಿಜಯನಗರ ಜಿಲ್ಲೆಯ ಆರು ತಾಲೂಕುಗಳಲ್ಲೂ ರೈತ ಸಂಘಟನೆ ಮಾಡಲಾಗುವುದು. ರೈತರು ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದರು.
ಜಿಲ್ಲಾಧ್ಯಕ್ಷರ ನೇಮಕ: ರೈತ ಹೋರಾಟಗಾರ ಸಿ.ಎ. ಗಾಳೆಪ್ಪ ಅವರನ್ನು ರೈತ ಸಂಘದ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಆದೇಶಪತ್ರ ಹಸ್ತಾಂತರಿಸಿದರು. ರೈತ ಸಂಘಟನೆಯನ್ನು ವಿಜಯನಗರದಲ್ಲಿ ಬಲಪಡಿಸಲು ಸಲಹೆ ನೀಡಿದರು. ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ, ಹಗರಿಬೊಮ್ಮನಹಳ್ಳಿ ತಾಲೂಕಾಧ್ಯಕ್ಷ ಮಂಜುನಾಥ, ಉಪಾಧ್ಯಕ್ಷ ಹಿರೇಸೊಬಟಿ ನಾಗರಾಜ, ಕೆಚ್ಚಿಬಂಡಿ ಹನುಮಂತ, ಮರಿಯಮ್ಮನಹಳ್ಳಿ ಹೋಬಳಿ ಅಧ್ಯಕ್ಷ ಜಿ. ಸೋಮ, ಉಪಾಧ್ಯಕ್ಷ ವೆಂಕಟೇಶ, ಕಾರ್ಯದರ್ಶಿ ಕೆಂಚಪ್ಪ, ಮುಖಂಡರಾದ ಸರಳಾಕಾವ್ಯ, ರಾಜು ಗುಜ್ಜಲ, ಹೊನ್ನೂರ ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ