ಅಗ್ನಿ ಅವಘಡ: ಸಚಿವ ಆನಂದಸಿಂಗ್ ಸಾಂತ್ವನ
Team Udayavani, Apr 10, 2022, 3:02 PM IST
ಮರಿಯಮ್ಮನಹಳ್ಳಿ: ಗುರುವಾರ ರಾತ್ರಿ ನಡೆದ ಅಗ್ನಿ ದುರಂತದಲ್ಲಿ ಕುಟುಂಬದ ಮಗ ಸೊಸೆ ಮೊಮ್ಮಕ್ಕಳನ್ನು ಕಳೆದುಕೊಂಡ ಡಿ. ರಾಘವೇಂದ್ರಶೆಟ್ಟಿ ದಂಪತಿಗೆ ದುಃಖ ಮರೆಸುವ ಶಕ್ತಿ ನೀಡಲಿ ಎಂದು ಬೇಡಿಕೊಳ್ಳುವೆ ಎಂದು ಪ್ರವಾಸೋದ್ಯಮ ಮತ್ತು ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆ ಸಚಿವ ಆನಂದ ಸಿಂಗ್ ಹೇಳಿದರು.
ಅವರ ಪಟ್ಟಣದಲ್ಲಿ ಅಗ್ನಿದುರಂತ ಸಂಭವಿಸಿ ಕುಟುಂಬದ ನಾಲ್ಕು ಸದಸ್ಯರನ್ನು ಕಳೆದಕೊಂಡ ಡಿ. ರಾಘವೇಂದ್ರ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕುಟುಂಬದವರ ಕುಶಲೋಪರಿ ವಿಚಾರಿಸಿ ಡಿ. ರಾಘವೇಂದ್ರ ಶೆಟ್ಟಿ ದಂಪತಿಯೊಂದಿಗೆ ಮಾತನಾಡಿ ಪುತ್ರ ಶೋಕಂ ನಿರಂತರ ಅನ್ನುತ್ತಾರೆ. ಆದರೆ ನೀವು ಮಗ ಸೊಸೆ ಮೊಮ್ಮಕ್ಕಳನ್ನೂ ಕಳೆದುಕೊಂಡಿದ್ದೀರಿ. ಎಲ್ಲವೂ ವಿಧಿಯಾಟ. ಅದನ್ನು ಯಾರೂ ಮೀರಲು ಸಾಧ್ಯವಿಲ್ಲ. ಆನಂದವನ್ನು ಹಂಚಿಕೊಳ್ಳಬಹುದು ಆದರೆ ದುಃ ಖವನ್ನು ಹಂಚಲಾಗದು. ದೇವರು ಹೆಚ್ಚಿನ ಧೈರ್ಯ ನೀಡಲಿ. ಈ ಸಂಕಷ್ಟ ಹರಿಶ್ಚಂದ್ರನಿಗೂ ತಪ್ಪಿಲ್ಲ ಎಂದು ಸಾಂತ್ವನ ಹೇಳಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಇದೊಂದು ದೊಡ್ಡ ದುರಂತ. ಇಂಥ ಘಟನೆಗಳು ಮರುಕಳಿಸಬಾರದು. ಯಾವ ವೈರಿಗೂ ಇಂಥ ಸಂಕಷ್ಟ ಬರಬಾರದು ಎಂದರು. ಇದೇ ಸಂದರ್ಭದಲ್ಲಿ ಶಾಸಕ ಭೀಮಾನಾಯ್ಕ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ., ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಡಿಎಸ್ಪಿ ಹರೀಶ್, ಸಿಪಿಐ ಮಂಜಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ