ಯೋಗ್ಯ ಬೆಲೆ ಸಿಗದೆ ಈರುಳ್ಳಿ ಬೆಳೆಗಾರರು ಕಂಗಾಲು

ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ

Team Udayavani, Apr 28, 2022, 3:52 PM IST

Udayavani Kannada Newspaper

ಹೊಸಪೇಟೆ: ಕಳೆದ ಭಾರಿ ಮಳೆ ಪರಿಣಾಮದಿಂದ ಸಂಕಷ್ಟಕ್ಕೀಡಾಗಿದ್ದ ವಿಜಯನಗರ ಜಿಲ್ಲೆಯ ಈರುಳ್ಳಿ ಬೆಳೆಗಾರರು ಇದೀಗ ಹಿಂಗಾರು ಹಂಗಾಮಿನಲ್ಲಿಯೂ ಬೆಳೆದ ಈರುಳ್ಳಿಗೆ ಯೋಗ್ಯ ಬೆಲೆ ಸಿಗದೇ ಕೈಸುಟ್ಟುಕೊಂಡಿದ್ದಾರೆ.

ಹೌದು! ಈರುಳ್ಳಿ ಬೆಳೆದು, ಕೈತುಂಬ ಹಣ ಸಿಗುವ ಆಸೆ ಕಣ್ಣಿನಿಂದ ನೋಡುತ್ತಿದ್ದ ರೈತರಿಗೆ ಕಳೆದ ಬಾರಿ ಸುರಿದ ಮಳೆಗೆ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿ ನೀರಿನಲ್ಲಿ ಹೋಮ ಮಾಡಿದಂತಾಗಿತ್ತು. ಕೊನೆಯ ಪಕ್ಷ ಹಿಂಗಾರು ಹಂಗಾಮಿನಲ್ಲಿ ಒಂದಷ್ಟು ಹಣ ನೋಡಬಹುದು ಎಂಬ ರೈತರ ನಿರೀಕ್ಷೆ ಇದೀಗ ಹುಸಿಯಾಗಿದೆ. ಮಾರುಕಟ್ಟೆಯಲ್ಲಿ ಈರುಳ್ಳಿಗೆ ಯೋಗ್ಯ ಬೆಲೆ ಸಿಗದಂತಾಗಿ ರೈತರ ಕಣ್ಣಲ್ಲಿ ನೀರು ತರಿಸಿದೆ.

ಒಂದು ಕ್ವಿಂಟಲ್‌ ಈರುಳ್ಳಿಗೆ ಸುಮಾರು 2 ಸಾವಿರ ರೂ. ಖರ್ಚು ಮಾಡಿದ ರೈತರ ಮಾರುಕಟ್ಟೆಯಲ್ಲಿ ಕೇವಲ ಒಂದು ಕ್ವಿಂಟಲ್‌ 500-600 ರೂ ಕೇಳುತ್ತಿದ್ದಾರೆ. ಇದರಿಂದ 1300ರಿಂದ 1400 ರೂಗಳಷ್ಟು ದರ ರೈತರ ಜೇಬಿಗೆ ಕತ್ತರಿ ಬೀಳಲಿದೆ. ಇದರಿಂದ ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದು ಸರ್ಕಾರದ ನೆರವಿಗಾಗಿ ಹಾದಿ ಕಾಯುತ್ತಿದ್ದಾರೆ.

ಸಾಲದ ಸುಳಿಯಲ್ಲಿ ರೈತ

ಒಂದು ಎಕರೆಗೆ ಜಮೀನಿನಲ್ಲಿ ಈರುಳ್ಳಿ ಬೆಳೆಯ ಬೇಕು ಎಂದರೆ ಉಳ್ಳುವವರಿಂದ ಹಿಡಿದು ಬೆಳೆ ತಗೆದು, ಮಾರುಕಟ್ಟೆಗೆ ಮಾರುವವರೆಗೆ ಸಾಲ ಸೂಲ ಮಾಡಿ ಒಂದು ಎಕರೆಗೆ ಅಂದಾಜು 50ರಿಂದ 60 ಸಾವಿರ ರೂ. ರೈತರು ಖರ್ಚು ಭರಿಸಬೇಕು. ಆದರೆ ಬೆಲೆ ಕುಸಿತದಿಂದ ಒಂದು ಎರಕೆಗೆ 20ರಿಂದ 30 ಸಾವಿರ ರೂ. ನಷ್ಟ ಅನುಭವಿಸುವಂತಾಗಿದೆ. ಇತ್ತ ಮಾಡಿದ ಸಾಲ ತಿರಿಸಲಾಗದೇ ಪರದಾಡಿ ಸಾಲದ ಸುಳಿಯಲ್ಲಿ ರೈತರು ಸಿಲುಕುವಂತಾಗಿದೆ.

ಈ ಬಾರಿ ಉತ್ತಮ ಇಳುವರಿ

ಕಳೆದ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈರುಳ್ಳಿ ಬೆಳೆ ಕೂಡ ಉತ್ತಮ ಇಳುವರಿ ಬಂದಿದೆ. ಒಂದು ಎಕರೆಗೆ 70 ರಿಂದ 160 ಕ್ವಿಂಟಲ್‌ವರೆಗೆ ಈರುಳ್ಳಿ ಬೆಲೆ ಬಂದಿದೆ. ಆದ್ದರಿಂದ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಈರುಳಿ ಬೆಲೆ ಕುಸಿದಿದೆ. ಇಳುವರಿ ಹೆಚ್ಚಾದರೂ ಬೆಲೆ ಕುಸಿತದಿಂದ ಈರುಳಿ ಬೆಲೆ ಪಾತಳಾಕ್ಕೆ ಇಳಿದಿದೆ. ಇದರಿಂದ ಕೆಲವರು ಅನಿವಾರ್ಯವಾಗಿ ಕೂಲಿಗಾಗಿ ನಷ್ಟದಲ್ಲಿ ಮಾರಾಟ ಮಾಡಿದರೆ, ಇನ್ನೂ ಕೆಲ ರೈತರು ಹೊಲದಲ್ಲೆ ಈರುಳ್ಳಿ ಬಿಡುತ್ತಿದ್ದಾರೆ.

ಬೆಂಬಲ ಬೆಲೆಗೆ ಒತ್ತಾಯ

ಕಳೆದ ಎರಡು ತಿಂಗಳಿಂದ ಈರುಳ್ಳಿ ಬೆಲೆ ಪಾತಾಳಕ್ಕೆ ಇಳಿದ್ದಿದ್ದು, ರೈತರು ಕಂಗಾಲಾಗಿದ್ದಾರೆ. ರೈತರಿಗೆ ಸಹಕಾರ ನೀಡುವಂತೆ ಈರುಳ್ಳಿ ಬೆಳೆಗಾರ ಸಂಘದಿಂದ ಬೆಂಗಳೂರಿಗೆ ಬಿಡು ಬಿಟ್ಟಿದ್ದಾರೆ. ಈರುಳ್ಳಿಗೆ ಬೆಂಬಲ ಬೆಲೆ ನೀಡಿದರೆ ರೈತ ಸ್ವಲ್ಪ ಉಸಿರಾಡಬಹುದು. ಇಲ್ಲವೆಂದರೆ ಅನಾಹುತಗಳಿಗೆ ಮುಂದಾಗಬಹುದು. ಆದ್ದರಿಂದ ಸರಕಾರ ಕೂಡಲೇ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈರುಳ್ಳಿ ಬೆಳೆಗಾರರಿಗೆ ಹಾನಿಯಾದ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಸರ್ಕಾರ ಮಾತ್ರ ಯಾವುದೇ ಸ್ಪಂದನೆ ಮಾಡಿಲ್ಲ. ಜನಪ್ರತಿನಿಧಿ ಗಳು ತಮ್ಮ ಸಂಬಳ ಹೆಚ್ಚಳ ಮಾಡಿಕೊಳ್ಳುತ್ತಾರೆ ಹೊರತು ಅನ್ನದಾತನ ಸಂಕಷ್ಟಕ್ಕೆ ನೆರವಾಗುತ್ತಿಲ್ಲ. ಜಾಣ ಕುರಡುತನ ಪ್ರದರ್ಶನ ಮಾಡುತ್ತಿದ್ದಾರೆ. -ಎನ್‌.ಎಂ.ಸಿದ್ದೇಶ್‌ ಉತ್ತಂಗಿ, ರಾಜ್ಯಾಧ್ಯಕ್ಷರು, ಈರುಳ್ಳಿ ಬೆಳೆಗಾರರ ಸಂಘ

ಇತ್ತೀಚಿಗಷ್ಟೆ ಬೆಂಗಳೂರಿಗೆ ಈರುಳ್ಳಿ ಮಾರಲು ಹೋಗಿದ್ದೆ. ಆದರೆ ಅಲ್ಲಿ 300 ರೂಪಾಯಿಗೆ ಒಂದು ಚೀಲ ಈರುಳ್ಳಿ ಮಾರಿದೆ. ಆದರೆ ದಾರಿ ಖರ್ಚು ಕೂಡ ಬರಲಿಲ್ಲ. ಕೊನೆಗೆ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಮನೆ ಕಡೆ ಬಂದೆ. ಸರ್ಕಾರ ನಮ್ಮ ನೆರವಿಗೆ ಬರಬೇಕು. -ಈರುಳ್ಳಿ ಬೆಳೆಗಾರ, ಹರಪನಹಳ್ಳಿ

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.