ಯೋಧ ಶ್ರೀನಿವಾಸ್ ಪಾರ್ಥೀವ ಶರೀರ ಮೆರವಣಿಗೆ
ಹೊಸದಿಲ್ಲಿಯಲ್ಲಿ ಬೈಕ್ ಅಪಘಾತದಲ್ಲಿ ಮೃತಪಟ್ಟ ಯೋಧ
Team Udayavani, May 12, 2022, 3:30 PM IST
ಹೊಸಪೇಟೆ: ಹೊಸದಿಲ್ಲಿಯಲ್ಲಿ ಬೈಕ್ ಅಪಘಾತದಲ್ಲಿ ಮೃತಪಟ್ಟ ಯೋಧ ಎಸ್.ಆರ್. ಶ್ರೀನಿವಾಸ್ ಅವರ ಅಂತ್ಯಸಂಸ್ಕಾರ ಸ್ವಗ್ರಾಮ ತಾಲೂಕಿನ ಕಮಲಾಪುರದ ಎಚ್ಪಿಸಿಯಲ್ಲಿ ಮಂಗಳವಾರ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಮಧ್ಯಾಹ್ನ 12ಕ್ಕೆ ಗ್ರಾಮಕ್ಕೆ ಬಂದ ಯೋಧನ ಪಾರ್ಥಿವ ಶರೀರವನ್ನು ಕಮಲಾಪುರದ ಸತ್ಯಮ್ಮ ದೇಗುಲದಿಂದ ತ್ರಿವರ್ಣ ಧ್ವಜದೊಂದಿಗೆ ಯುವಕರು ಹಾಗೂ ಹಿರಿಯರು ವಾಹನದ ಮೂಲಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಯುವಕರು ಸೇರಿದಂತೆ ಗ್ರಾಮಸ್ಥರು ಅಮರ್ ಹೈ, ಅಮರ ಹೈ, ಶ್ರೀನಿವಾಸ್ ಅಮರ ಹೈ ಎಂಬ ಘೋಷಣೆ ಮೊಳಗಿಸಿದರು. ಮೆರವಣಿಗೆ ನಂತರ ಎಚ್ಪಿಸಿಯ ಶ್ರೀನಿವಾಸ್ ಅವರ ಮನೆಯ ಮುಂದೆ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಕಮಲಾಪುರದ ಜನರು ತಂಡೋಪತಂಡವಾಗಿ ಆಗಮಿಸಿ ಯೋಧನ ಅಂತಿಮ ದರ್ಶನ ಪಡೆದರು.
ಯೋಧ ಶ್ರೀನಿವಾಸ್ ಅವರ ಪಾರ್ಥಿವ ಶರೀರ ಮನೆ ತಲುಪುತ್ತಿದ್ದಂತೆ ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತು. ಪತ್ನಿ ವನಜಾ, ಮಕ್ಕಳಾದ ಓಂಕಾರ್ (21) ಮತ್ತು ಮುಖೇಶ್ (17) ಸೇರಿದಂತೆ ಸಂಬಂಧಿಕರ ರೋದನ ಮುಗಿಲು ಮುಟ್ಟಿತು. ಅಲ್ಲಿ ಸೇರಿದ್ದ ಜನರ ಕಣ್ಣುಗಳು ಕೂಡ ತೇವಗೊಂಡವು. ಪಟ್ಟಣದ ಎಚ್ಪಿಸಿ ಬಳಿ ಹಿಂದೂ ಧರ್ಮದ ವಿಧಿವಿಧಾನಗಳೊಂದಿಗೆ ಮೃತ ಯೋಧನ ಅಂತ್ಯ ಸಂಸ್ಕಾರ ನೆರವೇರಿತು. ತಹಶೀಲ್ದಾರ್ ವಿಶ್ವಜೀತ್ ಮೆಹತಾ, ಕಮಲಾಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಯ್ಯದ್ ಅಮಾನುಲ್ಲಾ, ಮುಖ್ಯಾಧಿಕಾರಿ ನಾಗೇಶ್, ಮುಖಂಡ ರಾಜಶೇಖರ್ ಹಿಟ್ನಾಳ್, ಸಮಿವುಲ್ಲಾ, ಕೋಟಾಲ್ ವೀರೇಶ್ ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್