ವಿಜಯನಗರ ಅಭಿವೃದ್ಧಿಗೆ ಕ್ರಿಯಾಯೋಜನೆ

ಮೈನಿಂಗ್‌ ಫಂಡ್‌, ಕೆಕೆಆರ್‌ಡಿಬಿ ಫಂಡ್‌ನ‌ಲ್ಲಿ ಕ್ರಿಯಾಯೋಜನೆ ರೂಪಿಸಲು ಸೂಚನೆ: ಸಚಿವೆ ಜೊಲ್ಲೆ

Team Udayavani, May 2, 2022, 1:12 PM IST

hoovina-hadagali

ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 224 ಕೋಟಿ ರೂಗಳ ಕ್ರಿಯಾಯೋಜನೆ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಶನಿವಾರ ಮಾಜಿ ಶಾಸಕ ಬಿ. ಚಂದ್ರನಾಯ್ಕ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಜಿಲ್ಲೆಯ ಎಲ್ಲ ತಾಲೂಕುಗಳಿಗೆ ವಿಶೇಷವಾಗಿ ಮೈನಿಂಗ್‌ ಫಂಡ್‌, ಕೆಕೆಆರ್‌ಡಿಬಿ ಫಂಡ್‌ನ‌ಲ್ಲಿ ಕ್ರಿಯಾಯೋಜನೆ ರೂಪಿಸಲು ಸೂಚಿಸಲಾಗಿದೆ.

ಜಿಲ್ಲೆಯ ಯಾವ ತಾಲೂಕು 40% ಹೆಚ್ಚು ಮೈನಿಂಗ್‌ ಬಾಧಿತ ತಾಲೂಕುಗಳಾಗಿರುತ್ತವೆಯೋ ಅಂಥ ತಾಲೂಕುಗಳಿಗೆ ಸುಮಾರು 40%ರಷ್ಟು ಮೈನಿಂಗ್‌ ಅನುದಾನವನ್ನು ಖರ್ಚು ಮಾಡಲಾಗುವುದು. ಜನತೆಗೆ ಮೂಲ ಸೌಕರ್ಯಗಳನ್ನೊಳಗೊಂಡ ಕುಡಿಯುವ ನೀರು, ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ.

ಪ್ರತಿ ತಾಲೂಕಿನಲ್ಲಿಯೂ ಸರ್ಕಾರಿ ಶಾಲೆಗಳನ್ನು ಗಮನದಲ್ಲಿಟ್ಟುಕೊಂಡು ಗ್ರಂಥಾಲಯ, ಕ್ರೀಡೆಗಳಿಗೆ ಒತ್ತು ನೀಡಲಾಗುತ್ತದೆ. ಇನ್ನೂ ತಾಲೂಕಿನಲ್ಲಿನ ಅಂಗನವಾಡಿ, ರಸ್ತೆ ಕುರಿತು ಈಗಾಗಲೇ ಹೊಸಪೇಟೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದರು. ಹಂಪಿಯನ್ನು ಐತಿಹಾಸಿಕ ಕೇಂದ್ರವನ್ನಾಗಿ, ಸಾಂಸ್ಕೃತಿಕವಾಗಿ ಪ್ರವಾಸಿಗರಿಗೆ ಹೆಚ್ಚಿನ ಮಾಹಿತಿ ನೀಡಲು ಹಂಪಿಯಲ್ಲಿ ಒಂದು ಪ್ರವಾಸಿ ಮಾಹಿತಿ ಕೇಂದ್ರವನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದರು. ಹಡಗಲಿ ತಾಲೂಕಿನಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಸಮಸ್ಯೆ ಕಂಡು ಬಂದಿದ್ದು ರೈತರಿಗೆ ಅನುಕೂಲವಾಗಲು ರೈತ ಸಂಪರ್ಕ ಕೇಂದ್ರಗಳನ್ನು ಸುಸಜ್ಜಿತವಾದ ರೀತಿಯಲ್ಲಿಡಲು ಯೋಚನೆ ಮಾಡಲಾಗಿದೆ.

ಕಳೆದ ಭಾರಿ ಜಿಲ್ಲೆಯಲ್ಲಿ ಮೈನಿಂಗ್‌ ಫಂಡ್‌ ನಿಂದಾಗಿ 1113 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು ಇದರಲ್ಲಿ ಈಗಾಗಲೇ 580 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ದೈವ ಸಂಕಲ್ಪ ಯೋಜನೆ

ರಾಜ್ಯದಲ್ಲಿ ದೇವಸ್ಥಾನಗಳನ್ನು ಅಭಿವೃದ್ಧಿಗೊಳಿಸಲು ದೈವ ಸಂಕಲ್ಪ ಎನ್ನುವ ಹೊಸ ಯೋಜನೆ ಜಾರಿ ಮಾಡಲಾಗುತ್ತಿದ್ದು ಅವುಗಳಲ್ಲಿ ದೇವಸ್ಥಾನಗಳನ್ನು 3 ಭಾಗಗಳನ್ನಾಗಿ ಮಾಡಲಾಗುವುದು. ಪ್ರಥಮವಾಗಿ 25 ಲಕ್ಷಕ್ಕಿಂತಲೂ ಹೆಚ್ಚಿನ ಆದಾಯವಿರುವ ದೇವಸ್ಥಾನಗಳನ್ನು ಎ ಗ್ರೇಡ್‌ ದೇವಸ್ಥಾನಗಳೆಂದು. ನಂತರದಲ್ಲಿ ಬ. ಹಾಗೂ ಸಿ. ಗ್ರೇಡ್‌ ದೇವಸ್ಥಾನಗಳೆಂದು ವರ್ಗ ಮಾಡಲಾಗಿದ್ದು ಗ್ರಾಮೀಣ ಪ್ರದೇಶದಲ್ಲಿರುವ ಸಿ ಗ್ರೇಡ್‌ ದೇವಸ್ಥಾನಗಳ ಅಭಿವೃದ್ಧಿಗೂ ಗಮನ ನೀಡಲಾಗುವುದು ಎಂದರು. ರಾಜ್ಯದಲ್ಲಿನ ಜನತೆಗೆ ಈ ಭಾರಿ ಕಾಶಿಯಾತ್ರೆಗೆ ಹೆಚ್ಚಿನ ಅನುಕೂಲ ಕೈಗೊಳ್ಳಲಾಗುವುದು ಎಂದರು.

ಚಂದ್ರನಾಯ್ಕ ಗೆಲುವಿಗೆ ಶ್ರಮ

2023ರ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿದ ಸಚಿವೆ ನಾವುಗಳು ಚುನಾವಣೆ ಎದುರಿಸಲು ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇದ್ದಲ್ಲಿ ಅವುಗಳನ್ನು ಸರಿಪಡಿಸಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುವುದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಡಗಲಿ ಕ್ಷೇತ್ರದಿಂದ ನಮ್ಮ ಪಕ್ಷದ ಅಭ್ಯರ್ಥಿ ಬಿ. ಚಂದ್ರನಾಯ್ಕ ಅವರನ್ನು ಗೆಲ್ಲಿಸುವುದು ನಮ್ಮ ಗುರಿ ಎಂದರು. ಮಾಜಿ ಶಾಸಕ ಬಿ. ಚಂದ್ರನಾಯ್ಕ, ಪಕ್ಷದ ಮುಖಂಡರುಗಳಾದ ಸೋಗಿ ವೀರಭದ್ರಪ್ಪ, ವರ್ಕನಳ್ಳಿ ಮೋಹನರೆಡ್ಡಿ, ಪಿ. ವಿಜಯ್‌ ಕುಮಾರ್‌, ಈಟಿ ಮಾಲತೇಶ್‌, ಮಹಿಳಾ ಸಂಘಟನೆಯ ಭಾಗ್ಯಮ್ಮ, ವಿಜಯಲಕ್ಷ್ಮೀ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.